Homeಕರ್ನಾಟಕಗದಗ ಪ್ರವಾಹ ಭೀಕರವಲ್ಲ: ಬಿಜೆಪಿ ಮತ್ತು ಮಾಜಿ ಸಚಿವರ ಮುಠ್ಠಾಳತನ ಭೀಕರ!

ಗದಗ ಪ್ರವಾಹ ಭೀಕರವಲ್ಲ: ಬಿಜೆಪಿ ಮತ್ತು ಮಾಜಿ ಸಚಿವರ ಮುಠ್ಠಾಳತನ ಭೀಕರ!

- Advertisement -
- Advertisement -

(ಇಂಟ್ರೋ: ಶ್ರವಣಕುಮಾರ್ ಹಡಗಲಿ ಮತ್ತು ರಫೀಕ್ ಕೊಣ್ಣೂರು- ಗೌರಿ ಲಂಕೇಶ್ ರವರ ಅಭಿಮಾನಿಗಳಾದ ಈ ಇಬ್ಬರು ಗದಗ ಜಿಲ್ಲೆಯ ರೋಣ ಮತ್ತು ನರಗುಂದ ತಾಲೂಕುಗಳ ಪ್ರವಾಹಪೀಡಿತ ಊರುಗಳಿಗೆ ಭೇಟಿ ಕೊಟ್ಟು ಫೋಟೊ ಮತ್ತು ವಿಡಿಯೋ ಒದಗಿಸಿದ್ದಾರೆ. ಅವರಿಗೆ ನಮ್ಮ ತಂಡದಿಂದ ಧನ್ಯವಾದಗಳು)

ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಹೋಲಿಸಿದರೆ ಮಳೆ-ಪ್ರವಾಹದ ಕಾರಣಕ್ಕೆ ಗದಗ ಜಿಲ್ಲೆಗೇನೂ ದೊಡ್ಡ ನಷ್ಟ (ಸಾಪೇಕ್ಷವಾಗಿ) ಸಂಭವಿಸಿಲ್ಲ. ಧಾರವಾಡ-ಹುಬ್ಬಳ್ಳಿ ಕಡೆ ಹದಿನೈದು ದಿನಗಟ್ಟಲೇ ಮಳೆ ಹಿಡಿಯಿತೆಂದರೆ ಬೆಣ್ಣೆಹಳ್ಳ ಭರಪೂರ ಹರಿಯುತ್ತದೆ, ನವಿಲುತೀರ್ಥದಿಂದ ನೀರು ಬಿಡುಗಡೆ ಹೆಚ್ಚಾದಂತೆ ಮಲಪ್ರಭೆ ಉಕ್ಕತೊಡಗುತ್ತಾಳೆ.

ಮಹಾರಾಷ್ಟ್ರದ ಕೋಯ್ನಾದಿಂದ ಯಾವಾಗ ಎಷ್ಟು ಪ್ರಮಾಣದ ನೀರು ಬಿಡುತ್ತಾರೋ ಎಂಬುದರ ಮಾಹಿತಿ ಅಸಮರ್ಪಕವಾಗಿರುವುದರಿಂದ ಬೆಳಗಾವಿಯ ಜಿಲ್ಲಾಡಳಿತ ತತ್ತರಿಸಿ ಹೋಗುತ್ತದೆ. ಆದರೆ, ಗದಗಿಗೆ ಮೊದಲೇ ಮುನ್ಸೂಚನೆ ಸಿಗುವುದರಿಂದ ಇಲ್ಲಿ ಮೊದಲೇ ನಿಗಾ ವಹಿಸಲು ಸಾಧ್ಯ. ಈ ಸಲ ಜಿಲ್ಲಾಡಳಿತ ಮೊದಲೇ ಎಚ್ಚೆತ್ತ ಪರಿಣಾಮವಾಗಿ ಅಂತಹ ಹಾನಿಯೇನೂ ಸಂಭವಿಸಿಲ್ಲ.

ಎಲ್ಲಿ ಜನಪ್ರತಿನಿಧಿಗಳು?
ಅಂಡು ಸುಟ್ಟ ಬೆಕ್ಕಿನಂತೆ ಈಗ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಲೆ ತುಂಬ ಸಂಪುಟ ವಿಸ್ತರಣೆಯನ್ನೆ ತುಂಬಿಕೊಂಡ ಪರಿಣಾಮ ಅವರ ಆಗಮನದಿಂದ ಅಧಿಕಾರಿಗಳ ಮೇಲೆ ಯಾವ ಪರಿಣಾಮವೂ ಆಗಿಲ್ಲ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳ ಶಾಸಕರಿಗೆ ಪ್ರವಾಹ ದುರಂತ ತಾಕಿಯೇ ಇಲ್ಲ. ಬಿಜೆಪಿಯ ಶಾಸಕರಂತೂ ಸಚಿವಗಿರಿ ಪಡೆಯುವ ಉಮೇದಿನಲ್ಲೇ ಇದ್ದಾರೆ.

ಮಳೆ ಮತ್ತು ಪ್ರವಾಹ ಕೇವಲ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಕಲಬುರಗಿ, ಗದಗ ಜಿಲ್ಲೆಗಳಿಗೆ ಅಷ್ಟೇ ಸೀಮಿತವಾಗಿಲ್ಲ. ಕೊಡಗು ಮತ್ತು ಕರಾವಳಿಯ ಮೂರು ಜಿಲ್ಲೆಗಳೂ ಇದರಿಂದ ತೊಂದರೆಗೆ ಸಿಲುಕಿವೆ. ಅಧಿಕೃತ ಅಂಕಿಅಂಶದ ಪ್ರಕಾರವೇ ರಾಜ್ಯದ 15 ಜಿಲ್ಲೆಗಳು ಮಳೆ ಮತ್ತು ಪ್ರವಾಹದ ಕಾರಣದಿಂದ ತತ್ತರಿಸಿ ಹೋಗಿವೆ. 15 ಜಿಲ್ಲೆಗಳು ಸಂಕಟದಲ್ಲಿ ಇರುವಾಘ ರಾಜ್ಯದ 28 ಸಂಸದರು ಎಲ್ಲ ಮುಚ್ಚಿಕೊಂಡು ಸುಮ್ಮನಿದ್ದಾರೆ. ಅದರಲ್ಲೂ ಬಿಜೆಪಿಯ 25 ಸಂಸದರು ಈ ಬಗ್ಗೆ ಮಾತೇ ಆಡಿಲ್ಲ.
ನಿನ್ನೆ ಬಾಯಿ ಬಿಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುತ್ತಾರೆ: ರಾಜ್ಯದಿಂದ ಅನುದಾನ ಕೋರಿ ಕೇಂದ್ರಕ್ಕೆ ಮನವಿಯೇ ಬಂದಿಲ್ಲ ಎಂದು…..

ಶಿವನೇ, sorry, ರಾಘವೇಂದ್ರ ಸ್ವಾಮಿಯೇ, ಈ ಜೋಶಿ ಎಂಬ ಮನೆಹಾಳನಿಗೆ ಮೊದಲು ಬುದ್ಧಿ ಕೊಡು. ತಮ್ಮದೇ ಪಕ್ಷದ ರಾಜ್ಯ ಸರ್ಕಾರ ವಿಶೇಷ ನೆರವಿಗೆ ಮನವಿ ಸಲ್ಲಿಸಬೇಕಂತೆ! ಅಲ್ಲಿವರೆಗೆ ಈ ಜೋಶಿ ಸಾಹೇಬರು ಕೇಂದ್ರದ ಜೊತೆ ಮಾತಾಡಲ್ಲವಂತೆ!
ಅಲ್ರೀ, ಈ ಜೋಶಿಯೂ ಕೇಂದ್ರ ಸರ್ಕಾರದ ಭಾಗವೇ ಅಲ್ಲವೇ? ಮೂರು ದಿನದ ಹಿಂದೆ ಬೆಳಗಾವಿ ತಲುಪುವ ಮೊದಲು ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆ ಬಗ್ಗೆ ಅನುಮತಿ ಪಡೆಯಲು ಗುಲಾಮನ ತರಹ ಓಡಿ ಹೋಗಿದ್ದ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಗೃಹ ಸಚಿವರಿಗೆ ವಿಶೇಷ ನೆರವಿಗಾಗಿ ಮನವಿ ಮಾಡಬಹುದಿತ್ತಲ್ಲ? ಕಾಶ್ಮೀರದ ‘ಅಭಿವೃದ್ಧಿ’ಗಾಗಿ ಅಲ್ಲಿ ಸಂಸತ್ತಿನಲ್ಲಿ ವೋಟಿಂಗ್ ಮಾಡುವುದು ಮುಗಿದ ನಂತರವಾದರೂ ನಮ್ಮ ಸಂಸದರು ಕರ್ನಾಟಕದ ಸಂಕಷ್ಟದ ಬಗ್ಗೆ ಯೋಚಿಸಬೇಕಿತ್ತಲ್ಲವಾ? ಈ ಹೊತ್ತಿನಲ್ಲೂ ಕೇಂದ್ರ ನೆರವು ಘೋಷಿಸಿಲ್ಲ, ರಾಜ್ಯ ಸರ್ಕಾರ ಕೇಳಿಯೇ ಇಲ್ಲ…

ಸರ್ಕಾರವೇ ಪ್ರವಾಹದಲ್ಲಿ ಸಿಕ್ಕಾಗ…
ಇಲ್ಲಿ ಸರ್ಕಾರವೇ ಇಲ್ಲ ಎಂಬ ಭಾವನೆ ಜನರಿಗೆ ಬರತೊಡಗಿದೆ. ಏಕೆಂದರೆ ಆಪರೇಷನ್ ಕಮಲ ಎಂಬ ಅಸಹ್ಯ ಹಣದ ಪ್ರವಾಹ ಹರಿಸಿ ಸರ್ಕಾರ ರಚನೆ ಮಾಡಿದ ಮೇಲೆ, ಮುಖ್ಯಮಂತ್ರಿ ಬಿಟ್ಟರೆ ಬೇರಾವ ಸಚಿವರೂ ಇಲ್ಲವೇ ಇಲ್ಲ. ಹೀಗಾಗಿ ರಾಜ್ಯ ಬಿಜೆಪಿಯೇ ಈಗ ಅಧಿಕಾರ ಮತ್ತು ಕೇಂದ್ರದ ಅಡಿ ಗುಲಾಮಗಿರಿ ಎಂಬ ಪ್ರವಾಹದಲ್ಲಿ ಮುಳುಗಿದೆ. ಹೀಗಾಗಿ, ಸಚಿವ ಸ್ಥಾನ ಆಕಾಂಕ್ಷಿಗಳಾದ ಜಗದೀಶ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ ಇತ್ಯಾದಿಗಳಿಗೆ ಪ್ರವಾಹದ ಸಂಕಟ ತಟ್ಟಿಯೇ ಇಲ್ಲ.

ಗದಗ: ಶಾಶ್ವತ ಪರಿಹಾರವೇ ಇಲ್ಲವೇ?
2008-2009ರ ಪ್ರವಾಹದಲ್ಲಿ ಬಾಧೆಗೆ ಒಳಗಾದ ಗ್ರಾಮಗಳೇ ಈಗಲೂ ತೊಂದರೆಗೆ ಒಳಗಾಗಿವೆ. ಗದಗ ಜಿಲ್ಲೆಯಲ್ಲಿ ಪ್ರವಾಹ ಬಂದರೆ ನರಗುಂದ ಮತ್ತು ರೋಣ ತಾಲೂಕುಗಳ ನೂರಾರು ಗ್ರಾಮಗಳು ಸಮಸ್ಯೆಗೆ ಸಿಲುಕುತ್ತವೆ. ಬೆಣ್ಣೆಹಳ್ಳ ಮತ್ತು ಮಲಪ್ರಭೆಯ ಹರಿವು ಆರ್ಭಟಿಸಿಬಿಟ್ಟರೆ ಈ ನೂರಾರು ಹಳ್ಳಿಗಳ ಜನರ ಬದುಕು ಎಕ್ಕುಟ್ಟಿ ಹೋಗುತ್ತದೆ.

2008-09ರ ಭೀಕರ ಪ್ರವಾಹದ ನಂತರ ಮೂವರು ಇದೇ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರ್ಯಾರೂ ಈ ಹಳ್ಳಿಗಳ ಶಾಶ್ವತ ಪುನರ್ವಸತಿಗೆ ಎಂದೂ ಪ್ರಾಮಾಣಿಕ ಪ್ರಯತ್ನ ಮಾಡಲೇ ಇಲ್ಲ.

ಯಡಿಯೂರಪ್ಪ ಕೃಪೆಯಿಂದ ಸಚಿವರಾಗಿದ್ದ ನರಗುಂದ ಶಾಸಕ ಸಿ.ಸಿ. ಪಾಟೀಲ, ಜಗದೀಶ ಶೆಟ್ಟರ್ ಆಶಿರ್ವಾದದಿಂದ ಸಚಿವರಾಗಿದ್ದ ರೋಣ ಶಾಸಕ ಕಳಕಪ್ಪ ಬಂಡಿ ತಮ್ಮ ಆ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಜಿಲ್ಲೆಯಲ್ಲಿ ಪ್ರವಾಹ ಬಂದರೆ ಇವರಿಬ್ಬರ ತಾಲೂಕುಗಳೇ ತೊಂದರೆಗೆ ಸಿಲುಕುವುದು. ಆದರೆ ಈ ಇಬ್ಬರೂ ಒಂದು ಶಾಶ್ವತ ಪರಿಹಾರಕ್ಕೆ ಯತ್ನಿಸಲೇ ಇಲ್ಲ.

ಈಗ ಬನ್ನಿ, 2013-18ರ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಎಚ್.ಕೆ. ಪಾಟೀಲರು ಕಳಕಪ್ಪ ಬಂಡಿ ಮತ್ತು ಸಿ.ಸಿ. ಪಾಟಲರಂತೆ ಪಂಡರಾಪಟ್ಟಿ ಶಾಸಕ ಎಂದು ಅನಿಸಿಕೊಂಡವರಲ್ಲ. ರಾಜ್ಯ ರಾಜಕಾರಣದಲ್ಲಿ ಎಚ್‍ಕೆ ಅವರಿಗೆ ಒಂದು ಗೌರವದ ಸ್ಥಾನವಿದೆ.

ಆದರೆ, ಅವರು ಕೂಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಈ ನೆರೆ-ಪ್ರವಾಹ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ರೂಪಿಸಲೇ ಇಲ್ಲ. ಅವರು ಒಂದು ಪರಿಹಾರ ಹುಡುಕಿ ಆ ಪ್ರಸ್ತಾಪವನ್ನು ಅವರ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿಟ್ಟಿದ್ದರೂ ಸಾಕಿತ್ತು, ತಕ್ಷಣ ಅನುಮೋದನೆ ಸಿಗುತ್ತಿತ್ತು. ಗದಗಿಗೆ ನಿತ್ಯ ನೀರು ಒದಗಿಸುವ, ಗದಗ ಜಿಲ್ಲೆಯ ಎಲ್ಲ ಹಳ್ಳಿಗಳಿಗೂ ಮೇಲ್ಮೈ ನೀರು (ಸರ್ಫೆಸ್ ವಾಟರ್, ನದಿ ನೀರು) ಒದಗಿಸುವ ದೊಡ್ಡ ಯೋಜನೆಗಳಿಗೆ ಎಲ್ಲ ನೆರವು ನೀಡಿದ ಸಿದ್ದರಾಮಯ್ಯ ಪ್ರವಾಹ ಪರಿಹಾರದ ಯೋಜನೆ ರೂಪಿಸಿದ್ದರೆ ಖಂಡಿತ ಇಲ್ಲ ಅನ್ನುತ್ತಿರಲಿಲ್ಲ.


ಹೀಗಾಗಿ, ಬಂಡಿ, ಸಿಸಿ ಪಾಟೀಲರಂತಹ ತರಹೇವಾರಿ ರಾಜಕಾರಣಿಗಲನ್ನು ಬಿಟ್ಟು ಬಿಡೋಣ. ಎಚ್. ಕೆ. ಪಾಟೀಲರಂತಹ ಹಿರಿಯ, ಗೌರವಾನ್ವಿತ ರಾಜಕಾರಣಿಯನ್ನೇ ಈಗ ನಾವು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲೇಬೇಕಿದೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...