Homeಕರ್ನಾಟಕಗದಗ ಪ್ರವಾಹ ಭೀಕರವಲ್ಲ: ಬಿಜೆಪಿ ಮತ್ತು ಮಾಜಿ ಸಚಿವರ ಮುಠ್ಠಾಳತನ ಭೀಕರ!

ಗದಗ ಪ್ರವಾಹ ಭೀಕರವಲ್ಲ: ಬಿಜೆಪಿ ಮತ್ತು ಮಾಜಿ ಸಚಿವರ ಮುಠ್ಠಾಳತನ ಭೀಕರ!

- Advertisement -
- Advertisement -

(ಇಂಟ್ರೋ: ಶ್ರವಣಕುಮಾರ್ ಹಡಗಲಿ ಮತ್ತು ರಫೀಕ್ ಕೊಣ್ಣೂರು- ಗೌರಿ ಲಂಕೇಶ್ ರವರ ಅಭಿಮಾನಿಗಳಾದ ಈ ಇಬ್ಬರು ಗದಗ ಜಿಲ್ಲೆಯ ರೋಣ ಮತ್ತು ನರಗುಂದ ತಾಲೂಕುಗಳ ಪ್ರವಾಹಪೀಡಿತ ಊರುಗಳಿಗೆ ಭೇಟಿ ಕೊಟ್ಟು ಫೋಟೊ ಮತ್ತು ವಿಡಿಯೋ ಒದಗಿಸಿದ್ದಾರೆ. ಅವರಿಗೆ ನಮ್ಮ ತಂಡದಿಂದ ಧನ್ಯವಾದಗಳು)

ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಹೋಲಿಸಿದರೆ ಮಳೆ-ಪ್ರವಾಹದ ಕಾರಣಕ್ಕೆ ಗದಗ ಜಿಲ್ಲೆಗೇನೂ ದೊಡ್ಡ ನಷ್ಟ (ಸಾಪೇಕ್ಷವಾಗಿ) ಸಂಭವಿಸಿಲ್ಲ. ಧಾರವಾಡ-ಹುಬ್ಬಳ್ಳಿ ಕಡೆ ಹದಿನೈದು ದಿನಗಟ್ಟಲೇ ಮಳೆ ಹಿಡಿಯಿತೆಂದರೆ ಬೆಣ್ಣೆಹಳ್ಳ ಭರಪೂರ ಹರಿಯುತ್ತದೆ, ನವಿಲುತೀರ್ಥದಿಂದ ನೀರು ಬಿಡುಗಡೆ ಹೆಚ್ಚಾದಂತೆ ಮಲಪ್ರಭೆ ಉಕ್ಕತೊಡಗುತ್ತಾಳೆ.

ಮಹಾರಾಷ್ಟ್ರದ ಕೋಯ್ನಾದಿಂದ ಯಾವಾಗ ಎಷ್ಟು ಪ್ರಮಾಣದ ನೀರು ಬಿಡುತ್ತಾರೋ ಎಂಬುದರ ಮಾಹಿತಿ ಅಸಮರ್ಪಕವಾಗಿರುವುದರಿಂದ ಬೆಳಗಾವಿಯ ಜಿಲ್ಲಾಡಳಿತ ತತ್ತರಿಸಿ ಹೋಗುತ್ತದೆ. ಆದರೆ, ಗದಗಿಗೆ ಮೊದಲೇ ಮುನ್ಸೂಚನೆ ಸಿಗುವುದರಿಂದ ಇಲ್ಲಿ ಮೊದಲೇ ನಿಗಾ ವಹಿಸಲು ಸಾಧ್ಯ. ಈ ಸಲ ಜಿಲ್ಲಾಡಳಿತ ಮೊದಲೇ ಎಚ್ಚೆತ್ತ ಪರಿಣಾಮವಾಗಿ ಅಂತಹ ಹಾನಿಯೇನೂ ಸಂಭವಿಸಿಲ್ಲ.

ಎಲ್ಲಿ ಜನಪ್ರತಿನಿಧಿಗಳು?
ಅಂಡು ಸುಟ್ಟ ಬೆಕ್ಕಿನಂತೆ ಈಗ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಲೆ ತುಂಬ ಸಂಪುಟ ವಿಸ್ತರಣೆಯನ್ನೆ ತುಂಬಿಕೊಂಡ ಪರಿಣಾಮ ಅವರ ಆಗಮನದಿಂದ ಅಧಿಕಾರಿಗಳ ಮೇಲೆ ಯಾವ ಪರಿಣಾಮವೂ ಆಗಿಲ್ಲ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳ ಶಾಸಕರಿಗೆ ಪ್ರವಾಹ ದುರಂತ ತಾಕಿಯೇ ಇಲ್ಲ. ಬಿಜೆಪಿಯ ಶಾಸಕರಂತೂ ಸಚಿವಗಿರಿ ಪಡೆಯುವ ಉಮೇದಿನಲ್ಲೇ ಇದ್ದಾರೆ.

ಮಳೆ ಮತ್ತು ಪ್ರವಾಹ ಕೇವಲ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಕಲಬುರಗಿ, ಗದಗ ಜಿಲ್ಲೆಗಳಿಗೆ ಅಷ್ಟೇ ಸೀಮಿತವಾಗಿಲ್ಲ. ಕೊಡಗು ಮತ್ತು ಕರಾವಳಿಯ ಮೂರು ಜಿಲ್ಲೆಗಳೂ ಇದರಿಂದ ತೊಂದರೆಗೆ ಸಿಲುಕಿವೆ. ಅಧಿಕೃತ ಅಂಕಿಅಂಶದ ಪ್ರಕಾರವೇ ರಾಜ್ಯದ 15 ಜಿಲ್ಲೆಗಳು ಮಳೆ ಮತ್ತು ಪ್ರವಾಹದ ಕಾರಣದಿಂದ ತತ್ತರಿಸಿ ಹೋಗಿವೆ. 15 ಜಿಲ್ಲೆಗಳು ಸಂಕಟದಲ್ಲಿ ಇರುವಾಘ ರಾಜ್ಯದ 28 ಸಂಸದರು ಎಲ್ಲ ಮುಚ್ಚಿಕೊಂಡು ಸುಮ್ಮನಿದ್ದಾರೆ. ಅದರಲ್ಲೂ ಬಿಜೆಪಿಯ 25 ಸಂಸದರು ಈ ಬಗ್ಗೆ ಮಾತೇ ಆಡಿಲ್ಲ.
ನಿನ್ನೆ ಬಾಯಿ ಬಿಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುತ್ತಾರೆ: ರಾಜ್ಯದಿಂದ ಅನುದಾನ ಕೋರಿ ಕೇಂದ್ರಕ್ಕೆ ಮನವಿಯೇ ಬಂದಿಲ್ಲ ಎಂದು…..

ಶಿವನೇ, sorry, ರಾಘವೇಂದ್ರ ಸ್ವಾಮಿಯೇ, ಈ ಜೋಶಿ ಎಂಬ ಮನೆಹಾಳನಿಗೆ ಮೊದಲು ಬುದ್ಧಿ ಕೊಡು. ತಮ್ಮದೇ ಪಕ್ಷದ ರಾಜ್ಯ ಸರ್ಕಾರ ವಿಶೇಷ ನೆರವಿಗೆ ಮನವಿ ಸಲ್ಲಿಸಬೇಕಂತೆ! ಅಲ್ಲಿವರೆಗೆ ಈ ಜೋಶಿ ಸಾಹೇಬರು ಕೇಂದ್ರದ ಜೊತೆ ಮಾತಾಡಲ್ಲವಂತೆ!
ಅಲ್ರೀ, ಈ ಜೋಶಿಯೂ ಕೇಂದ್ರ ಸರ್ಕಾರದ ಭಾಗವೇ ಅಲ್ಲವೇ? ಮೂರು ದಿನದ ಹಿಂದೆ ಬೆಳಗಾವಿ ತಲುಪುವ ಮೊದಲು ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆ ಬಗ್ಗೆ ಅನುಮತಿ ಪಡೆಯಲು ಗುಲಾಮನ ತರಹ ಓಡಿ ಹೋಗಿದ್ದ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಗೃಹ ಸಚಿವರಿಗೆ ವಿಶೇಷ ನೆರವಿಗಾಗಿ ಮನವಿ ಮಾಡಬಹುದಿತ್ತಲ್ಲ? ಕಾಶ್ಮೀರದ ‘ಅಭಿವೃದ್ಧಿ’ಗಾಗಿ ಅಲ್ಲಿ ಸಂಸತ್ತಿನಲ್ಲಿ ವೋಟಿಂಗ್ ಮಾಡುವುದು ಮುಗಿದ ನಂತರವಾದರೂ ನಮ್ಮ ಸಂಸದರು ಕರ್ನಾಟಕದ ಸಂಕಷ್ಟದ ಬಗ್ಗೆ ಯೋಚಿಸಬೇಕಿತ್ತಲ್ಲವಾ? ಈ ಹೊತ್ತಿನಲ್ಲೂ ಕೇಂದ್ರ ನೆರವು ಘೋಷಿಸಿಲ್ಲ, ರಾಜ್ಯ ಸರ್ಕಾರ ಕೇಳಿಯೇ ಇಲ್ಲ…

ಸರ್ಕಾರವೇ ಪ್ರವಾಹದಲ್ಲಿ ಸಿಕ್ಕಾಗ…
ಇಲ್ಲಿ ಸರ್ಕಾರವೇ ಇಲ್ಲ ಎಂಬ ಭಾವನೆ ಜನರಿಗೆ ಬರತೊಡಗಿದೆ. ಏಕೆಂದರೆ ಆಪರೇಷನ್ ಕಮಲ ಎಂಬ ಅಸಹ್ಯ ಹಣದ ಪ್ರವಾಹ ಹರಿಸಿ ಸರ್ಕಾರ ರಚನೆ ಮಾಡಿದ ಮೇಲೆ, ಮುಖ್ಯಮಂತ್ರಿ ಬಿಟ್ಟರೆ ಬೇರಾವ ಸಚಿವರೂ ಇಲ್ಲವೇ ಇಲ್ಲ. ಹೀಗಾಗಿ ರಾಜ್ಯ ಬಿಜೆಪಿಯೇ ಈಗ ಅಧಿಕಾರ ಮತ್ತು ಕೇಂದ್ರದ ಅಡಿ ಗುಲಾಮಗಿರಿ ಎಂಬ ಪ್ರವಾಹದಲ್ಲಿ ಮುಳುಗಿದೆ. ಹೀಗಾಗಿ, ಸಚಿವ ಸ್ಥಾನ ಆಕಾಂಕ್ಷಿಗಳಾದ ಜಗದೀಶ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ ಇತ್ಯಾದಿಗಳಿಗೆ ಪ್ರವಾಹದ ಸಂಕಟ ತಟ್ಟಿಯೇ ಇಲ್ಲ.

ಗದಗ: ಶಾಶ್ವತ ಪರಿಹಾರವೇ ಇಲ್ಲವೇ?
2008-2009ರ ಪ್ರವಾಹದಲ್ಲಿ ಬಾಧೆಗೆ ಒಳಗಾದ ಗ್ರಾಮಗಳೇ ಈಗಲೂ ತೊಂದರೆಗೆ ಒಳಗಾಗಿವೆ. ಗದಗ ಜಿಲ್ಲೆಯಲ್ಲಿ ಪ್ರವಾಹ ಬಂದರೆ ನರಗುಂದ ಮತ್ತು ರೋಣ ತಾಲೂಕುಗಳ ನೂರಾರು ಗ್ರಾಮಗಳು ಸಮಸ್ಯೆಗೆ ಸಿಲುಕುತ್ತವೆ. ಬೆಣ್ಣೆಹಳ್ಳ ಮತ್ತು ಮಲಪ್ರಭೆಯ ಹರಿವು ಆರ್ಭಟಿಸಿಬಿಟ್ಟರೆ ಈ ನೂರಾರು ಹಳ್ಳಿಗಳ ಜನರ ಬದುಕು ಎಕ್ಕುಟ್ಟಿ ಹೋಗುತ್ತದೆ.

2008-09ರ ಭೀಕರ ಪ್ರವಾಹದ ನಂತರ ಮೂವರು ಇದೇ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರ್ಯಾರೂ ಈ ಹಳ್ಳಿಗಳ ಶಾಶ್ವತ ಪುನರ್ವಸತಿಗೆ ಎಂದೂ ಪ್ರಾಮಾಣಿಕ ಪ್ರಯತ್ನ ಮಾಡಲೇ ಇಲ್ಲ.

ಯಡಿಯೂರಪ್ಪ ಕೃಪೆಯಿಂದ ಸಚಿವರಾಗಿದ್ದ ನರಗುಂದ ಶಾಸಕ ಸಿ.ಸಿ. ಪಾಟೀಲ, ಜಗದೀಶ ಶೆಟ್ಟರ್ ಆಶಿರ್ವಾದದಿಂದ ಸಚಿವರಾಗಿದ್ದ ರೋಣ ಶಾಸಕ ಕಳಕಪ್ಪ ಬಂಡಿ ತಮ್ಮ ಆ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಜಿಲ್ಲೆಯಲ್ಲಿ ಪ್ರವಾಹ ಬಂದರೆ ಇವರಿಬ್ಬರ ತಾಲೂಕುಗಳೇ ತೊಂದರೆಗೆ ಸಿಲುಕುವುದು. ಆದರೆ ಈ ಇಬ್ಬರೂ ಒಂದು ಶಾಶ್ವತ ಪರಿಹಾರಕ್ಕೆ ಯತ್ನಿಸಲೇ ಇಲ್ಲ.

ಈಗ ಬನ್ನಿ, 2013-18ರ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಎಚ್.ಕೆ. ಪಾಟೀಲರು ಕಳಕಪ್ಪ ಬಂಡಿ ಮತ್ತು ಸಿ.ಸಿ. ಪಾಟಲರಂತೆ ಪಂಡರಾಪಟ್ಟಿ ಶಾಸಕ ಎಂದು ಅನಿಸಿಕೊಂಡವರಲ್ಲ. ರಾಜ್ಯ ರಾಜಕಾರಣದಲ್ಲಿ ಎಚ್‍ಕೆ ಅವರಿಗೆ ಒಂದು ಗೌರವದ ಸ್ಥಾನವಿದೆ.

ಆದರೆ, ಅವರು ಕೂಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಈ ನೆರೆ-ಪ್ರವಾಹ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ರೂಪಿಸಲೇ ಇಲ್ಲ. ಅವರು ಒಂದು ಪರಿಹಾರ ಹುಡುಕಿ ಆ ಪ್ರಸ್ತಾಪವನ್ನು ಅವರ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿಟ್ಟಿದ್ದರೂ ಸಾಕಿತ್ತು, ತಕ್ಷಣ ಅನುಮೋದನೆ ಸಿಗುತ್ತಿತ್ತು. ಗದಗಿಗೆ ನಿತ್ಯ ನೀರು ಒದಗಿಸುವ, ಗದಗ ಜಿಲ್ಲೆಯ ಎಲ್ಲ ಹಳ್ಳಿಗಳಿಗೂ ಮೇಲ್ಮೈ ನೀರು (ಸರ್ಫೆಸ್ ವಾಟರ್, ನದಿ ನೀರು) ಒದಗಿಸುವ ದೊಡ್ಡ ಯೋಜನೆಗಳಿಗೆ ಎಲ್ಲ ನೆರವು ನೀಡಿದ ಸಿದ್ದರಾಮಯ್ಯ ಪ್ರವಾಹ ಪರಿಹಾರದ ಯೋಜನೆ ರೂಪಿಸಿದ್ದರೆ ಖಂಡಿತ ಇಲ್ಲ ಅನ್ನುತ್ತಿರಲಿಲ್ಲ.


ಹೀಗಾಗಿ, ಬಂಡಿ, ಸಿಸಿ ಪಾಟೀಲರಂತಹ ತರಹೇವಾರಿ ರಾಜಕಾರಣಿಗಲನ್ನು ಬಿಟ್ಟು ಬಿಡೋಣ. ಎಚ್. ಕೆ. ಪಾಟೀಲರಂತಹ ಹಿರಿಯ, ಗೌರವಾನ್ವಿತ ರಾಜಕಾರಣಿಯನ್ನೇ ಈಗ ನಾವು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲೇಬೇಕಿದೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...