Homeಕರ್ನಾಟಕಗದಗ ಪ್ರವಾಹ ಭೀಕರವಲ್ಲ: ಬಿಜೆಪಿ ಮತ್ತು ಮಾಜಿ ಸಚಿವರ ಮುಠ್ಠಾಳತನ ಭೀಕರ!

ಗದಗ ಪ್ರವಾಹ ಭೀಕರವಲ್ಲ: ಬಿಜೆಪಿ ಮತ್ತು ಮಾಜಿ ಸಚಿವರ ಮುಠ್ಠಾಳತನ ಭೀಕರ!

- Advertisement -
- Advertisement -

(ಇಂಟ್ರೋ: ಶ್ರವಣಕುಮಾರ್ ಹಡಗಲಿ ಮತ್ತು ರಫೀಕ್ ಕೊಣ್ಣೂರು- ಗೌರಿ ಲಂಕೇಶ್ ರವರ ಅಭಿಮಾನಿಗಳಾದ ಈ ಇಬ್ಬರು ಗದಗ ಜಿಲ್ಲೆಯ ರೋಣ ಮತ್ತು ನರಗುಂದ ತಾಲೂಕುಗಳ ಪ್ರವಾಹಪೀಡಿತ ಊರುಗಳಿಗೆ ಭೇಟಿ ಕೊಟ್ಟು ಫೋಟೊ ಮತ್ತು ವಿಡಿಯೋ ಒದಗಿಸಿದ್ದಾರೆ. ಅವರಿಗೆ ನಮ್ಮ ತಂಡದಿಂದ ಧನ್ಯವಾದಗಳು)

ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಹೋಲಿಸಿದರೆ ಮಳೆ-ಪ್ರವಾಹದ ಕಾರಣಕ್ಕೆ ಗದಗ ಜಿಲ್ಲೆಗೇನೂ ದೊಡ್ಡ ನಷ್ಟ (ಸಾಪೇಕ್ಷವಾಗಿ) ಸಂಭವಿಸಿಲ್ಲ. ಧಾರವಾಡ-ಹುಬ್ಬಳ್ಳಿ ಕಡೆ ಹದಿನೈದು ದಿನಗಟ್ಟಲೇ ಮಳೆ ಹಿಡಿಯಿತೆಂದರೆ ಬೆಣ್ಣೆಹಳ್ಳ ಭರಪೂರ ಹರಿಯುತ್ತದೆ, ನವಿಲುತೀರ್ಥದಿಂದ ನೀರು ಬಿಡುಗಡೆ ಹೆಚ್ಚಾದಂತೆ ಮಲಪ್ರಭೆ ಉಕ್ಕತೊಡಗುತ್ತಾಳೆ.

ಮಹಾರಾಷ್ಟ್ರದ ಕೋಯ್ನಾದಿಂದ ಯಾವಾಗ ಎಷ್ಟು ಪ್ರಮಾಣದ ನೀರು ಬಿಡುತ್ತಾರೋ ಎಂಬುದರ ಮಾಹಿತಿ ಅಸಮರ್ಪಕವಾಗಿರುವುದರಿಂದ ಬೆಳಗಾವಿಯ ಜಿಲ್ಲಾಡಳಿತ ತತ್ತರಿಸಿ ಹೋಗುತ್ತದೆ. ಆದರೆ, ಗದಗಿಗೆ ಮೊದಲೇ ಮುನ್ಸೂಚನೆ ಸಿಗುವುದರಿಂದ ಇಲ್ಲಿ ಮೊದಲೇ ನಿಗಾ ವಹಿಸಲು ಸಾಧ್ಯ. ಈ ಸಲ ಜಿಲ್ಲಾಡಳಿತ ಮೊದಲೇ ಎಚ್ಚೆತ್ತ ಪರಿಣಾಮವಾಗಿ ಅಂತಹ ಹಾನಿಯೇನೂ ಸಂಭವಿಸಿಲ್ಲ.

ಎಲ್ಲಿ ಜನಪ್ರತಿನಿಧಿಗಳು?
ಅಂಡು ಸುಟ್ಟ ಬೆಕ್ಕಿನಂತೆ ಈಗ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ತಲೆ ತುಂಬ ಸಂಪುಟ ವಿಸ್ತರಣೆಯನ್ನೆ ತುಂಬಿಕೊಂಡ ಪರಿಣಾಮ ಅವರ ಆಗಮನದಿಂದ ಅಧಿಕಾರಿಗಳ ಮೇಲೆ ಯಾವ ಪರಿಣಾಮವೂ ಆಗಿಲ್ಲ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳ ಶಾಸಕರಿಗೆ ಪ್ರವಾಹ ದುರಂತ ತಾಕಿಯೇ ಇಲ್ಲ. ಬಿಜೆಪಿಯ ಶಾಸಕರಂತೂ ಸಚಿವಗಿರಿ ಪಡೆಯುವ ಉಮೇದಿನಲ್ಲೇ ಇದ್ದಾರೆ.

ಮಳೆ ಮತ್ತು ಪ್ರವಾಹ ಕೇವಲ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಕಲಬುರಗಿ, ಗದಗ ಜಿಲ್ಲೆಗಳಿಗೆ ಅಷ್ಟೇ ಸೀಮಿತವಾಗಿಲ್ಲ. ಕೊಡಗು ಮತ್ತು ಕರಾವಳಿಯ ಮೂರು ಜಿಲ್ಲೆಗಳೂ ಇದರಿಂದ ತೊಂದರೆಗೆ ಸಿಲುಕಿವೆ. ಅಧಿಕೃತ ಅಂಕಿಅಂಶದ ಪ್ರಕಾರವೇ ರಾಜ್ಯದ 15 ಜಿಲ್ಲೆಗಳು ಮಳೆ ಮತ್ತು ಪ್ರವಾಹದ ಕಾರಣದಿಂದ ತತ್ತರಿಸಿ ಹೋಗಿವೆ. 15 ಜಿಲ್ಲೆಗಳು ಸಂಕಟದಲ್ಲಿ ಇರುವಾಘ ರಾಜ್ಯದ 28 ಸಂಸದರು ಎಲ್ಲ ಮುಚ್ಚಿಕೊಂಡು ಸುಮ್ಮನಿದ್ದಾರೆ. ಅದರಲ್ಲೂ ಬಿಜೆಪಿಯ 25 ಸಂಸದರು ಈ ಬಗ್ಗೆ ಮಾತೇ ಆಡಿಲ್ಲ.
ನಿನ್ನೆ ಬಾಯಿ ಬಿಟ್ಟಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳುತ್ತಾರೆ: ರಾಜ್ಯದಿಂದ ಅನುದಾನ ಕೋರಿ ಕೇಂದ್ರಕ್ಕೆ ಮನವಿಯೇ ಬಂದಿಲ್ಲ ಎಂದು…..

ಶಿವನೇ, sorry, ರಾಘವೇಂದ್ರ ಸ್ವಾಮಿಯೇ, ಈ ಜೋಶಿ ಎಂಬ ಮನೆಹಾಳನಿಗೆ ಮೊದಲು ಬುದ್ಧಿ ಕೊಡು. ತಮ್ಮದೇ ಪಕ್ಷದ ರಾಜ್ಯ ಸರ್ಕಾರ ವಿಶೇಷ ನೆರವಿಗೆ ಮನವಿ ಸಲ್ಲಿಸಬೇಕಂತೆ! ಅಲ್ಲಿವರೆಗೆ ಈ ಜೋಶಿ ಸಾಹೇಬರು ಕೇಂದ್ರದ ಜೊತೆ ಮಾತಾಡಲ್ಲವಂತೆ!
ಅಲ್ರೀ, ಈ ಜೋಶಿಯೂ ಕೇಂದ್ರ ಸರ್ಕಾರದ ಭಾಗವೇ ಅಲ್ಲವೇ? ಮೂರು ದಿನದ ಹಿಂದೆ ಬೆಳಗಾವಿ ತಲುಪುವ ಮೊದಲು ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ರಚನೆ ಬಗ್ಗೆ ಅನುಮತಿ ಪಡೆಯಲು ಗುಲಾಮನ ತರಹ ಓಡಿ ಹೋಗಿದ್ದ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಗೃಹ ಸಚಿವರಿಗೆ ವಿಶೇಷ ನೆರವಿಗಾಗಿ ಮನವಿ ಮಾಡಬಹುದಿತ್ತಲ್ಲ? ಕಾಶ್ಮೀರದ ‘ಅಭಿವೃದ್ಧಿ’ಗಾಗಿ ಅಲ್ಲಿ ಸಂಸತ್ತಿನಲ್ಲಿ ವೋಟಿಂಗ್ ಮಾಡುವುದು ಮುಗಿದ ನಂತರವಾದರೂ ನಮ್ಮ ಸಂಸದರು ಕರ್ನಾಟಕದ ಸಂಕಷ್ಟದ ಬಗ್ಗೆ ಯೋಚಿಸಬೇಕಿತ್ತಲ್ಲವಾ? ಈ ಹೊತ್ತಿನಲ್ಲೂ ಕೇಂದ್ರ ನೆರವು ಘೋಷಿಸಿಲ್ಲ, ರಾಜ್ಯ ಸರ್ಕಾರ ಕೇಳಿಯೇ ಇಲ್ಲ…

ಸರ್ಕಾರವೇ ಪ್ರವಾಹದಲ್ಲಿ ಸಿಕ್ಕಾಗ…
ಇಲ್ಲಿ ಸರ್ಕಾರವೇ ಇಲ್ಲ ಎಂಬ ಭಾವನೆ ಜನರಿಗೆ ಬರತೊಡಗಿದೆ. ಏಕೆಂದರೆ ಆಪರೇಷನ್ ಕಮಲ ಎಂಬ ಅಸಹ್ಯ ಹಣದ ಪ್ರವಾಹ ಹರಿಸಿ ಸರ್ಕಾರ ರಚನೆ ಮಾಡಿದ ಮೇಲೆ, ಮುಖ್ಯಮಂತ್ರಿ ಬಿಟ್ಟರೆ ಬೇರಾವ ಸಚಿವರೂ ಇಲ್ಲವೇ ಇಲ್ಲ. ಹೀಗಾಗಿ ರಾಜ್ಯ ಬಿಜೆಪಿಯೇ ಈಗ ಅಧಿಕಾರ ಮತ್ತು ಕೇಂದ್ರದ ಅಡಿ ಗುಲಾಮಗಿರಿ ಎಂಬ ಪ್ರವಾಹದಲ್ಲಿ ಮುಳುಗಿದೆ. ಹೀಗಾಗಿ, ಸಚಿವ ಸ್ಥಾನ ಆಕಾಂಕ್ಷಿಗಳಾದ ಜಗದೀಶ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಉಮೇಶ ಕತ್ತಿ, ಬಾಲಚಂದ್ರ ಜಾರಕಿಹೊಳಿ ಇತ್ಯಾದಿಗಳಿಗೆ ಪ್ರವಾಹದ ಸಂಕಟ ತಟ್ಟಿಯೇ ಇಲ್ಲ.

ಗದಗ: ಶಾಶ್ವತ ಪರಿಹಾರವೇ ಇಲ್ಲವೇ?
2008-2009ರ ಪ್ರವಾಹದಲ್ಲಿ ಬಾಧೆಗೆ ಒಳಗಾದ ಗ್ರಾಮಗಳೇ ಈಗಲೂ ತೊಂದರೆಗೆ ಒಳಗಾಗಿವೆ. ಗದಗ ಜಿಲ್ಲೆಯಲ್ಲಿ ಪ್ರವಾಹ ಬಂದರೆ ನರಗುಂದ ಮತ್ತು ರೋಣ ತಾಲೂಕುಗಳ ನೂರಾರು ಗ್ರಾಮಗಳು ಸಮಸ್ಯೆಗೆ ಸಿಲುಕುತ್ತವೆ. ಬೆಣ್ಣೆಹಳ್ಳ ಮತ್ತು ಮಲಪ್ರಭೆಯ ಹರಿವು ಆರ್ಭಟಿಸಿಬಿಟ್ಟರೆ ಈ ನೂರಾರು ಹಳ್ಳಿಗಳ ಜನರ ಬದುಕು ಎಕ್ಕುಟ್ಟಿ ಹೋಗುತ್ತದೆ.

2008-09ರ ಭೀಕರ ಪ್ರವಾಹದ ನಂತರ ಮೂವರು ಇದೇ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಇವರ್ಯಾರೂ ಈ ಹಳ್ಳಿಗಳ ಶಾಶ್ವತ ಪುನರ್ವಸತಿಗೆ ಎಂದೂ ಪ್ರಾಮಾಣಿಕ ಪ್ರಯತ್ನ ಮಾಡಲೇ ಇಲ್ಲ.

ಯಡಿಯೂರಪ್ಪ ಕೃಪೆಯಿಂದ ಸಚಿವರಾಗಿದ್ದ ನರಗುಂದ ಶಾಸಕ ಸಿ.ಸಿ. ಪಾಟೀಲ, ಜಗದೀಶ ಶೆಟ್ಟರ್ ಆಶಿರ್ವಾದದಿಂದ ಸಚಿವರಾಗಿದ್ದ ರೋಣ ಶಾಸಕ ಕಳಕಪ್ಪ ಬಂಡಿ ತಮ್ಮ ಆ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಜಿಲ್ಲೆಯಲ್ಲಿ ಪ್ರವಾಹ ಬಂದರೆ ಇವರಿಬ್ಬರ ತಾಲೂಕುಗಳೇ ತೊಂದರೆಗೆ ಸಿಲುಕುವುದು. ಆದರೆ ಈ ಇಬ್ಬರೂ ಒಂದು ಶಾಶ್ವತ ಪರಿಹಾರಕ್ಕೆ ಯತ್ನಿಸಲೇ ಇಲ್ಲ.

ಈಗ ಬನ್ನಿ, 2013-18ರ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಎಚ್.ಕೆ. ಪಾಟೀಲರು ಕಳಕಪ್ಪ ಬಂಡಿ ಮತ್ತು ಸಿ.ಸಿ. ಪಾಟಲರಂತೆ ಪಂಡರಾಪಟ್ಟಿ ಶಾಸಕ ಎಂದು ಅನಿಸಿಕೊಂಡವರಲ್ಲ. ರಾಜ್ಯ ರಾಜಕಾರಣದಲ್ಲಿ ಎಚ್‍ಕೆ ಅವರಿಗೆ ಒಂದು ಗೌರವದ ಸ್ಥಾನವಿದೆ.

ಆದರೆ, ಅವರು ಕೂಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಈ ನೆರೆ-ಪ್ರವಾಹ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ರೂಪಿಸಲೇ ಇಲ್ಲ. ಅವರು ಒಂದು ಪರಿಹಾರ ಹುಡುಕಿ ಆ ಪ್ರಸ್ತಾಪವನ್ನು ಅವರ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿಟ್ಟಿದ್ದರೂ ಸಾಕಿತ್ತು, ತಕ್ಷಣ ಅನುಮೋದನೆ ಸಿಗುತ್ತಿತ್ತು. ಗದಗಿಗೆ ನಿತ್ಯ ನೀರು ಒದಗಿಸುವ, ಗದಗ ಜಿಲ್ಲೆಯ ಎಲ್ಲ ಹಳ್ಳಿಗಳಿಗೂ ಮೇಲ್ಮೈ ನೀರು (ಸರ್ಫೆಸ್ ವಾಟರ್, ನದಿ ನೀರು) ಒದಗಿಸುವ ದೊಡ್ಡ ಯೋಜನೆಗಳಿಗೆ ಎಲ್ಲ ನೆರವು ನೀಡಿದ ಸಿದ್ದರಾಮಯ್ಯ ಪ್ರವಾಹ ಪರಿಹಾರದ ಯೋಜನೆ ರೂಪಿಸಿದ್ದರೆ ಖಂಡಿತ ಇಲ್ಲ ಅನ್ನುತ್ತಿರಲಿಲ್ಲ.


ಹೀಗಾಗಿ, ಬಂಡಿ, ಸಿಸಿ ಪಾಟೀಲರಂತಹ ತರಹೇವಾರಿ ರಾಜಕಾರಣಿಗಲನ್ನು ಬಿಟ್ಟು ಬಿಡೋಣ. ಎಚ್. ಕೆ. ಪಾಟೀಲರಂತಹ ಹಿರಿಯ, ಗೌರವಾನ್ವಿತ ರಾಜಕಾರಣಿಯನ್ನೇ ಈಗ ನಾವು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲೇಬೇಕಿದೆ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...