Homeಮುಖಪುಟಕೇರಳದಲ್ಲಿ ಭಾರೀ ಪ್ರವಾಹ: 22 ಸಾವು, 22000 ಜನರ ಸ್ಥಳಾಂತರ.

ಕೇರಳದಲ್ಲಿ ಭಾರೀ ಪ್ರವಾಹ: 22 ಸಾವು, 22000 ಜನರ ಸ್ಥಳಾಂತರ.

- Advertisement -
- Advertisement -

ಭಾರೀ ಮಳೆಯಿಂದಾಗಿ ಕೇರಳದ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೆ ವಿಮಾನ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಪೆರಿಯಾರ್ ನದಿಯಲ್ಲಿ ನೀರಿನ ಮಟ್ಟ ಮತ್ತು ವಿಮಾನ ನಿಲ್ದಾಣದ ಬಳಿಯ ಕಾಲುವೆಯಲ್ಲಿ ನೀರಿನ ಹರಿದು ಹೆಚ್ಚುತ್ತಿದೆ. ಗುರುವಾರದಿಂದ ಪ್ರವಾಹದಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದ್ದು ಸತ್ತವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ವಯನಾಡ್, ಇಡುಕ್ಕಿ, ಮಲಪ್ಪುರಂ ಮತ್ತು ಕೋಳಿಕೋಡ್ ನಾಲ್ಕು ಜಿಲ್ಲೆಗಳಿಗೆ ಕೇರಳ ಸರ್ಕಾರ ರೆಡ್ ಅಲರ್ಟ್ ಘೋಷಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಮನ್ವಯದ ಮೇಲ್ವಿಚಾರಣೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ನಿಯಂತ್ರಣ ಕೊಠಡಿಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕೆಲವು ನದಿಗಳಲ್ಲಿನ ನೀರಿನ ಮಟ್ಟ ಅಪಾಯಕಾರಿ ಹಂತಕ್ಕೆ ಏರಲಿದೆ ಎಂದು ಕೇಂದ್ರ ಜಲ ಆಯೋಗ ಹೇಳಿದೆ. ಕೇರಳದಲ್ಲಿ ಆಗಸ್ಟ್ 15 ರಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ವಯನಾಡಿನ ಟೀ ಎಸ್ಟೇಟ್ ನಲ್ಲಿ ಕಾರ್ಮಿಕರ ಮನೆಗಳ ಸಮೂಹವು ಗುರುವಾರ ಸಂಜೆ ಭೂಕುಸಿತದಿಂದ ಸಂಪೂರ್ಣ ನಾಶವಾಗಿದೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿದ್ದು, 200 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೂರು ಜನರನ್ನು ರಕ್ಷಿಸಲಾಗಿದ್ದು, ಎರಡು ಶವಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆಗೆ 12 ಗಂಟೆ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೈನ್ಯ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ಇಲಾಖೆಯ ತಂಡಗಳು ಸ್ಥಳದಲ್ಲಿವೆ. ಈ ಪ್ರದೇಶದಲ್ಲಿ 20 ವರ್ಷಗಳಲ್ಲಿ ಭೂಕುಸಿತ ಕಂಡುಬಂದಿಲ್ಲ. ರಕ್ಷಿಸಿದವರನ್ನು ವಿಮಾನದಲ್ಲಿ ಸಾಗಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವಾರು ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿದ ಪ್ರದೇಶಗಳಿಂದ 22,000 ಕ್ಕೂ ಹೆಚ್ಚು ಜನರನ್ನು, ವಯನಾಡು ಒಂದರಲ್ಲೇ 9,000 ಜನರನ್ನು ಸ್ಥಳಾಂತರಿಸಲಾಗಿದೆ. ರಾಜ್ಯದಾದ್ಯಂತ ಒಟ್ಟು 315 ನಿರಾಶ್ರಿತ ಶಿಬಿರಗಳಿದ್ದು ವಯನಾಡ್ ಒಂದರಲ್ಲೆ 105 ಶಿಬಿರಗಳನ್ನು ಹೊಂದಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ದಕ್ಷಿಣ ರಾಜ್ಯದ ಎಲ್ಲಾ 14 ಜಿಲ್ಲೆಗಳಲ್ಲಿ ಇಂದು ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಟ್ಟಿವೆ. ಇಂದು ಯಾವುದೇ ವಿಶ್ವವಿದ್ಯಾಲಯ ಪರೀಕ್ಷೆ ನಡೆಯುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲಪ್ಪುರಂನ ನೀಲಂಬೂರು ಗ್ರಾಮವು ಅನೇಕ ಭೂಕುಸಿತಗಳಿಂದ ಬಳಲುತ್ತಿರುವ ಪ್ರದೇಶಗಳಲ್ಲಿ ಒಂದಾಗಿದೆ ಮತ್ತು ನೀರಿನ ಮಟ್ಟವು ವೇಗವಾಗಿ ಏರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ತಂಡಗಳು ಮತ್ತು ಎನ್‌ಡಿಆರ್‌ಎಫ್ ಈ ಪ್ರದೇಶದಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗುಡುಗು ಸಹಿತ ಮಳೆ ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಮತ್ತು ತ್ರಿಶೂರ್‌ಗಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

ಎನ್‌ಡಿಆರ್‌ಎಫ್‌ನ ಇನ್ನೂ 10 ತಂಡಗಳನ್ನು ರಾಜ್ಯಕ್ಕೆ ಕಳುಹಿಸುವಂತೆ ಕೇರಳ ಕೇಂದ್ರವನ್ನು ಕೇಳಿದೆ. ಈ ಏಳು ತಂಡಗಳು ಇಂದು ತಲುಪುವ ನಿರೀಕ್ಷೆಯಿದೆ. ಒಂದು ಎನ್‌ಡಿಆರ್‌ಎಫ್ ತಂಡವನ್ನು ಈಗಾಗಲೇ ಇಡುಕಿಯಲ್ಲಿ ಇರಿಸಲಾಗಿದೆ.

“ನಿಮ್ಮ ಸಂವಹನ ಯೋಜನೆಯಲ್ಲಿ ಬ್ಯಾಕಪ್ ಸಾಧನಗಳನ್ನು ಒಳಗೊಂಡಿರಬೇಕೆಂದು ನಾವು ಬಲವಾಗಿ ಶಿಫಾರಸು ಮಾಡುತ್ತೇವೆ. ನಿಮ್ಮ ಫೋನ್ ಅನ್ನು ಚಾರ್ಜ್ ಮಾಡಿ. ಸ್ಥಳೀಯ ಅಧಿಕಾರಿಗಳ ಸೂಚನೆಗಳನ್ನು ಅನುಸರಿಸಿ. ಸ್ಥಳಾಂತರಿಸುವಿಕೆ ಅಥವಾ ಆಶ್ರಯ ನೀಡುವ ಬಗ್ಗೆ ಸೂಚನೆಗಳನ್ನು ಆಲಿಸಿ. ಸ್ಥಳಾಂತರಿಸಲು ಸಲಹೆ ನೀಡಿದರೆ ತಕ್ಷಣ ಅದನ್ನು ಮಾಡಿ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

“ರಾಜ್ಯದಲ್ಲಿ, ವಿಶೇಷವಾಗಿ ವಯನಾಡ್ ನಲ್ಲಿನ ಪ್ರವಾಹ ಮತ್ತು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಕೋರಿ ಪ್ರಧಾನಮಂತ್ರಿಯವರೊಂದಿಗೆ ಮಾತನಾಡಿದ್ದೇನೆ. ವಿಪತ್ತಿನ ಪರಿಣಾಮಗಳನ್ನು ತಗ್ಗಿಸಲು ಅಗತ್ಯವಾದ ಯಾವುದೇ ಸಹಾಯವನ್ನು ಒದಗಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ” ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...