Homeಮುಖಪುಟಕೇರಳದಲ್ಲಿ ಭಾರೀ ಪ್ರವಾಹ: 22 ಸಾವು, 22000 ಜನರ ಸ್ಥಳಾಂತರ.

ಕೇರಳದಲ್ಲಿ ಭಾರೀ ಪ್ರವಾಹ: 22 ಸಾವು, 22000 ಜನರ ಸ್ಥಳಾಂತರ.

- Advertisement -
- Advertisement -

ಭಾರೀ ಮಳೆಯಿಂದಾಗಿ ಕೇರಳದ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೆ ವಿಮಾನ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಪೆರಿಯಾರ್ ನದಿಯಲ್ಲಿ ನೀರಿನ ಮಟ್ಟ ಮತ್ತು ವಿಮಾನ ನಿಲ್ದಾಣದ ಬಳಿಯ ಕಾಲುವೆಯಲ್ಲಿ ನೀರಿನ ಹರಿದು ಹೆಚ್ಚುತ್ತಿದೆ. ಗುರುವಾರದಿಂದ ಪ್ರವಾಹದಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದ್ದು ಸತ್ತವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ವಯನಾಡ್, ಇಡುಕ್ಕಿ, ಮಲಪ್ಪುರಂ ಮತ್ತು ಕೋಳಿಕೋಡ್ ನಾಲ್ಕು ಜಿಲ್ಲೆಗಳಿಗೆ ಕೇರಳ ಸರ್ಕಾರ ರೆಡ್ ಅಲರ್ಟ್ ಘೋಷಿಸಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಸಮನ್ವಯದ ಮೇಲ್ವಿಚಾರಣೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ನಿಯಂತ್ರಣ ಕೊಠಡಿಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಕೆಲವು ನದಿಗಳಲ್ಲಿನ ನೀರಿನ ಮಟ್ಟ ಅಪಾಯಕಾರಿ ಹಂತಕ್ಕೆ ಏರಲಿದೆ ಎಂದು ಕೇಂದ್ರ ಜಲ ಆಯೋಗ ಹೇಳಿದೆ. ಕೇರಳದಲ್ಲಿ ಆಗಸ್ಟ್ 15 ರಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ವಯನಾಡಿನ ಟೀ ಎಸ್ಟೇಟ್ ನಲ್ಲಿ ಕಾರ್ಮಿಕರ ಮನೆಗಳ ಸಮೂಹವು ಗುರುವಾರ ಸಂಜೆ ಭೂಕುಸಿತದಿಂದ ಸಂಪೂರ್ಣ ನಾಶವಾಗಿದೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಕ್ಕಿಬಿದ್ದಿದ್ದು, 200 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೂರು ಜನರನ್ನು ರಕ್ಷಿಸಲಾಗಿದ್ದು, ಎರಡು ಶವಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆಗೆ 12 ಗಂಟೆ ತೆಗೆದುಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೈನ್ಯ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ಇಲಾಖೆಯ ತಂಡಗಳು ಸ್ಥಳದಲ್ಲಿವೆ. ಈ ಪ್ರದೇಶದಲ್ಲಿ 20 ವರ್ಷಗಳಲ್ಲಿ ಭೂಕುಸಿತ ಕಂಡುಬಂದಿಲ್ಲ. ರಕ್ಷಿಸಿದವರನ್ನು ವಿಮಾನದಲ್ಲಿ ಸಾಗಿಸುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಲವಾರು ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಸಿಲುಕಿದ ಪ್ರದೇಶಗಳಿಂದ 22,000 ಕ್ಕೂ ಹೆಚ್ಚು ಜನರನ್ನು, ವಯನಾಡು ಒಂದರಲ್ಲೇ 9,000 ಜನರನ್ನು ಸ್ಥಳಾಂತರಿಸಲಾಗಿದೆ. ರಾಜ್ಯದಾದ್ಯಂತ ಒಟ್ಟು 315 ನಿರಾಶ್ರಿತ ಶಿಬಿರಗಳಿದ್ದು ವಯನಾಡ್ ಒಂದರಲ್ಲೆ 105 ಶಿಬಿರಗಳನ್ನು ಹೊಂದಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ದಕ್ಷಿಣ ರಾಜ್ಯದ ಎಲ್ಲಾ 14 ಜಿಲ್ಲೆಗಳಲ್ಲಿ ಇಂದು ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಟ್ಟಿವೆ. ಇಂದು ಯಾವುದೇ ವಿಶ್ವವಿದ್ಯಾಲಯ ಪರೀಕ್ಷೆ ನಡೆಯುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲಪ್ಪುರಂನ ನೀಲಂಬೂರು ಗ್ರಾಮವು ಅನೇಕ ಭೂಕುಸಿತಗಳಿಂದ ಬಳಲುತ್ತಿರುವ ಪ್ರದೇಶಗಳಲ್ಲಿ ಒಂದಾಗಿದೆ ಮತ್ತು ನೀರಿನ ಮಟ್ಟವು ವೇಗವಾಗಿ ಏರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ತಂಡಗಳು ಮತ್ತು ಎನ್‌ಡಿಆರ್‌ಎಫ್ ಈ ಪ್ರದೇಶದಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗುಡುಗು ಸಹಿತ ಮಳೆ ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಮತ್ತು ತ್ರಿಶೂರ್‌ಗಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

ಎನ್‌ಡಿಆರ್‌ಎಫ್‌ನ ಇನ್ನೂ 10 ತಂಡಗಳನ್ನು ರಾಜ್ಯಕ್ಕೆ ಕಳುಹಿಸುವಂತೆ ಕೇರಳ ಕೇಂದ್ರವನ್ನು ಕೇಳಿದೆ. ಈ ಏಳು ತಂಡಗಳು ಇಂದು ತಲುಪುವ ನಿರೀಕ್ಷೆಯಿದೆ. ಒಂದು ಎನ್‌ಡಿಆರ್‌ಎಫ್ ತಂಡವನ್ನು ಈಗಾಗಲೇ ಇಡುಕಿಯಲ್ಲಿ ಇರಿಸಲಾಗಿದೆ.

“ನಿಮ್ಮ ಸಂವಹನ ಯೋಜನೆಯಲ್ಲಿ ಬ್ಯಾಕಪ್ ಸಾಧನಗಳನ್ನು ಒಳಗೊಂಡಿರಬೇಕೆಂದು ನಾವು ಬಲವಾಗಿ ಶಿಫಾರಸು ಮಾಡುತ್ತೇವೆ. ನಿಮ್ಮ ಫೋನ್ ಅನ್ನು ಚಾರ್ಜ್ ಮಾಡಿ. ಸ್ಥಳೀಯ ಅಧಿಕಾರಿಗಳ ಸೂಚನೆಗಳನ್ನು ಅನುಸರಿಸಿ. ಸ್ಥಳಾಂತರಿಸುವಿಕೆ ಅಥವಾ ಆಶ್ರಯ ನೀಡುವ ಬಗ್ಗೆ ಸೂಚನೆಗಳನ್ನು ಆಲಿಸಿ. ಸ್ಥಳಾಂತರಿಸಲು ಸಲಹೆ ನೀಡಿದರೆ ತಕ್ಷಣ ಅದನ್ನು ಮಾಡಿ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

“ರಾಜ್ಯದಲ್ಲಿ, ವಿಶೇಷವಾಗಿ ವಯನಾಡ್ ನಲ್ಲಿನ ಪ್ರವಾಹ ಮತ್ತು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಕೋರಿ ಪ್ರಧಾನಮಂತ್ರಿಯವರೊಂದಿಗೆ ಮಾತನಾಡಿದ್ದೇನೆ. ವಿಪತ್ತಿನ ಪರಿಣಾಮಗಳನ್ನು ತಗ್ಗಿಸಲು ಅಗತ್ಯವಾದ ಯಾವುದೇ ಸಹಾಯವನ್ನು ಒದಗಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ” ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...