Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...