Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...