Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...