Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...