Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...