Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...