Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...