Homeಕರ್ನಾಟಕಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

ಪ್ರವಾಹದಿಂದ ಇನ್ನೂ ನರಳುತ್ತಿರುವ ಕರ್ನಾಟಕದ ಉತ್ತರ ; ಚುನಾವಣೆಯಲ್ಲಿ ಮೈಮರೆತ ಸರ್ಕಾರ

- Advertisement -
- Advertisement -

ಭಾರೀ ಪ್ರವಾಹಕ್ಕೆ ಸಿಲುಕಿ ತತ್ತರಿಸಿದ ಉತ್ತರ ಕರ್ನಾಟಕವು ತನ್ನ ಭಾರೀ ಸಂಕಷ್ಟದಿಂದ  ಇನ್ನೂ ಹೊರಬಂದಿಲ್ಲ.  ಮನೆಗಳನ್ನು, ಕುಟುಂಬದವರನ್ನು  ಕಳೆದುಕೊಂಡು ಬಿದಿಗೆ ಬಿದ್ದವರು ಆಸರೆಯ ನಿರೀಕ್ಷೆಯಲ್ಲಿದ್ದರೆ, ಸಮರ್ಪಕ ಪರಿಹಾರ ಮತ್ತು ಪುನರ್ವಸತಿಗೆ ಕೆಲಸ ಮಾಡಬೇಕಿದ್ದ ಸರ್ಕಾರ ಮಹಾರಾಷ್ಟ್ರ ಚುನಾವಣೆಯತ್ತ ಚಿತ್ತ ಹಾಯಿಸಿದೆ.

ರಾಜ್ಯದಲ್ಲಿ 16 ಜಿಲ್ಲೆಗಳ 103 ತಾಲ್ಲೂಕುಗಳು ನೆರೆ ಹಾವಳಿ ಅನುಭವಿಸುತ್ತಿದ್ದು, ಅಲ್ಲಿನ ರೈತರ ಜೀವನ ಬೀದಿಪಾಲಾಗಿದೆ. ಅನ್ನ ನೀಡುವ ಕೈಗಳು ಇಂದು ಬೇಡಿ ತಿನ್ನುವ ಸ್ಥಿತಿ ಎದುರಾಗಿದ್ದು, ರೈತರ ಗೋಳು ಕೇಳುವವರಿಲ್ಲ ಎನ್ನುವಂತಾಗಿದೆ.

ಪ್ರವಾಹದಿಂದ ಗುಡಿಕೈಗಾರಿಕೆಗಳ ಮೇಲೆಯೂ ಭಾರಿ ಪರಿಣಾಮ ಬೀರಿದೆ. ಸಣ್ಣ ಪುಟ್ಟ ವಸ್ತುಗಳನ್ನು ಮನೆಯಲ್ಲಿಯೇ ತಯಾರಿಸಿ ಜೀವನ ಸಾಗಿಸುತ್ತಿದ್ದ ಹಲವು ಮನೆಗಳಿಗೆಲ್ಲೆ ನೀರು ನುಗ್ಗಿ ಸಾವಿರಾರು ರೂ  ನಷ್ಟದ ಜೊತೆಗೆ ಅವರ ಕೆಲಸ ಬಂದ್‌ ಆಗಿದೆ. ಬೇರೆ ಉದ್ಯೋಗವೂ ಸಿಗದೇ, ಇತ್ತ ಸರ್ಕಾರದ ಸಮರ್ಪಕ ಪರಿಹಾರವೂ ಸಿಗದೆ ಜನ ಕಂಗಾಲಾಗಿದ್ದಾರೆ.

ಹೈನುಗಾರಿಕೆಯನ್ನೆ ನಂಬಿದ್ದವರ ಸ್ಥಿತಿ ಕೇಳಲೆಬಾರದು. ಹಲವರ  ದನ ಕರುಗಳೆಲ್ಲ ಕೊಚ್ಚಿ ಹೋಗಿ ಅವರ ಜೀವನಾಧಾರ ಕೈಜಾರಿದೆ.  ಉಳಿದವರ ದನ ಕರುಗಳಿಗೆ ಸೂಕ್ತ ಭದ್ರತೆ, ಮೇವು ಸಿಗದೇ ಒದ್ದಾಡುತ್ತಿದ್ದಾರೆ. ಜೀವನೋಪಾಯಕ್ಕೆ ಬರುತ್ತಿದ್ದ ನಿಗದಿತ ಆದಾಯ ಕೈತಪ್ಪಿರುವುದು ಅವರ ಚಿಂತೆಗೆ ಕಾರಣವಾಗಿದೆ.

ನೇಕಾರಿಕೆಯನ್ನೆ ನಂಬಿದವರ ಪಾಡು ಹೇಳತೀರದು. ಮಗ್ಗಗಳೆಲ್ಲ ನೀರು ಪಾಲಾಗಿ ಅವರ ಬದುಕೆ ಅತಂತ್ರ ಸ್ಥಿತಿಯಲ್ಲಿದೆ. ನೇಯ್ದ ಸೀರೆಗಳು ಕೊಚ್ಚಿ ಹೋಗಿದ್ದರೆ,  ಅನ್ನ ನೀಡುವಂತ ಮಗ್ಗಗಳು ನಿರಲ್ಲಿ ನಿಂತಿವೆ. ಇನ್ನೂ ಕೆಲವು  ದಿನಗಳ ಕಾಲ ಅವು ನೀರಲ್ಲೇ ನಿಂತರೆ ಅವರ ಹೊಟ್ಟೆಗೆ ತಣ್ಣೀರು ಬಟ್ಟೆ ಗ್ಯಾರಂಟಿ ಎನ್ನುವ ಸ್ಥಿತಿ ಬಂದೊದಗಿದೆ.

ಜಿಲ್ಲಾಡಳಿತದ ಅಂದಾಜಿನಂತೆ 1763 ಮಗ್ಗಗಳು ಭಾರೀ ಮಳೆಗೆ ಆಹುತಿಯಾಗಿವೆ.  ಒಂದು ಮಗ್ಗ ರೀಪೇರಿಗೆ 50 ಸಾವರಿದಷ್ಟು ಹಣ ಬೇಡುತ್ತದೆ. ಸರ್ಕಾರವೋ ಭಿಕ್ಷೆ ರೂಪದಲ್ಲಿ ತಲಾ 10 ಸಾವಿರ ಹಣಕೊಟ್ಟು ಕೈತೊಳೆದುಕೊಂಡಿದೆ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂಬ ಅಳಲು ಜೋರಾದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರು ತಲಾ 25ಸಾವಿರ ಹಣ ನೀಡುವಂತೆ ಆದೇಶಿಸಿದ್ದರು. ಆದರೆ ಅದಿನ್ನು ಕಾಗದಲ್ಲಿದೆಯೇ ಹೊರತು ಜಾರಿಗೆ ಬಂದಿಲ್ಲ. ನೇಕಾರರ ಗೋಳು ನಿಂತಿಲ್ಲ.

ಪ್ರವಾಹದ ಸ್ಥಿತಿ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದಿದ್ದರೂ, ಸಮರ್ಪಕ ಪರಿಹಾರ ನಿಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಇದುವರೆಗೂ ಕೇಂದ್ರ ಸರ್ಕಾರ 1200 ಕೋಟಿ ಹಣ ಬಿಡುಗಡೆ ಮಾಡಿದರೆ ರಾಜ್ಯ ಸರ್ಕಾರ ಹಲವು ಸಾವಿರ ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ. 40-50 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿರುವ ಅಂದಾಜಿದ್ದರೂ ಕೇಂದ್ರ ಸರ್ಕಾರಕ್ಕೆ ಜಾಡಿಸಿ ಕೇಳುವ ಧೈರ್ಯ ನಮ್ಮ ರಾಜ್ಯ ಸರ್ಕಾರಕ್ಕಿಲ್ಲದಿರುವುದು ನಮ್ಮೆಲ್ಲರ ದುರಂತವಾಗಿದೆ.

ಪರಿಸ್ಥಿತಿ ಇಷ್ಟು ಭೀಕರವಾಗಿರುವ ಸಂದರ್ಭದಲ್ಲಿ ಕರ್ನಾಟಕದ ಇಬ್ಬರು ಉಪಮುಖ್ಯಮಂತ್ರಿಗಳು ಮಹಾರಾಷ್ಟ್ರ ಚುನಾವಣೆಯ ಕೆಲಸಕ್ಕೆ ನಿಯೋಜಿತರಾಗಿದ್ದಾರೆ.  ಇಲ್ಲಿ ನಮ್ಮದೇ ರಾಜ್ಯದ ಜನರು ಸಾಯುತ್ತಿದ್ದರೂ ಅಲ್ಲಿ ಬಿಜೆಪಿಯನ್ನು ಗೆಲ್ಲಿಸುವುದು ಅವರ ಕರ್ತವ್ಯವಾಗಿರುವುದು ಶೋಚನೀಯ.. ಒಂದೆಡೆ ನಮ್ಮ ಸಂಸದರು ಪ್ರವಾಹ ಪರಿಹಾರ ತರುವಲ್ಲಿ ವಿಫಲವಾಗಿದ್ದರೆ, ಇನ್ನೆಂದೆಡೆ ಜನರ ಕಷ್ಟ ಕೇಳಲೂ ಸಹ ಮುಂದಾಗುತ್ತಿಲ್ಲ.. ಈ ಬಾರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಅಧಿವೇಶನ ಸಹ ಬೆಂಗಳೂರಿಗೆ ಶಿಫ್ಟ್‌ ಆಗಿದೆ.. ಒಟ್ಟಿನಲ್ಲಿ ಉತ್ತರ ಕರ್ನಾಟಕದ ಗೋಳು ನಿಂತಿಲ್ಲ.. ಆದರೆ ಅದು ಆಳುವವರಿಗೆ ಕೇಳುತ್ತಿಲ್ಲ, ಕೇಳಿದರೂ ಅವರು ಇತ್ತ ನೋಡುತ್ತಿಲ್ಲ ಎಂದರೆ ನಿರ್ಲಕ್ಷ್ಯ ಯಾವ ಪ್ರಮಾಣಕ್ಕಿದೆ ನೀವೇ ಊಹಿಸಿ..

ಪ್ರವಾಹದಿಂದ ಮನೆ, ದನ-ಕರುಗಳನ್ನು ಕಳೆದುಕೊಂಡು ಭಾರಿ ನಷ್ಟಕ್ಕಿಡಾಗಿದ್ದೇವೆ. ಸರ್ಕಾರ ವಾಸಿಸಲು ಶೆಡ್ಡುಗಳನ್ನು ನೀಡಿದ್ದರೂ, ಕಾಳು- ಕಡ್ಡಿಗಳೆಲ್ಲ ಪ್ರವಾಹದಲ್ಲಿ ಕೊಚ್ಚಿ ಹೋಗಿ ತಿನ್ನಲು ಅನ್ನ ದೊರೆಯದಂತಾಗಿದೆ. ಇನ್ನೊಂದೆಡೆ ಹಕ್ಕು ಪತ್ರಗಳೆಲ್ಲ ನೀರು ಪಾಲಾಗಿದ್ದು ಸಮಪರ್ಕ ಪರಿಹಾರ ಸಿಗುವ ನಂಬಿಕೆ ಸಹ ಇಲ್ಲ. ಜನರಿಗಿಂತ ಜಾನುವಾರುಗಳ ಸ್ಥಿತಿ ಭೀಕರವಾಗಿದೆ. ನಮಗೀಗ ದಿಕ್ಕು ತೊಚದಂತಾಗಿದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಬೆಳಗಾವಿಯ ನಿವಾಸಿ  ಶಿವರಾಜುರವರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...