Homeಕರ್ನಾಟಕಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? :...

ಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? : ಸಿದ್ದು

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ.

- Advertisement -
- Advertisement -

ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರ 4 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೊಳಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅಕ್ಕಿಯನ್ನು ಕಡಿಮೆ ಮಾಡಲು ಚರ್ಚೆ ನಡೆಸಿದೆ ಎಂಬ ಮಾಹಿತಿ ಬಂದಿದೆ. ಈ ರೀತಿಯೇನಾದರೂ ಮಾಡಿದರೆ ನಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕಾವೇರಿನಿವಾಸದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ. ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು‌ ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ. ಹಾಗಾಗಿ ಅಕ್ಕಿ ಕಡಿತಗೊಳಿಸುವ ಆಲೋಚನೆಯೇನಾದರೂ ಯಡಿಯೂರಪ್ಪನವರಿಗೆ ಇದ್ದಲ್ಲಿ ತಕ್ಷಣವೇ ಅದನ್ನು ಕೈಬಿಡಲಿ ಎಂದರು.

ಇಂದಿರಾ ಕ್ಯಾಂಟೀನ್‌ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ, ಅಲ್ಲಿ ಗುಣಮಟ್ಟದ‌ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ. ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಾಗಲಾರದು. ಈ ಕೂಡಲೇ ಬಿಬಿಎಂಪಿಗೆ ಅನುದಾನ ಬಿಡುಗಡೆ ಮಾಡಲಿ ಎಂದು ತಿಳಿಸಿದರು.

ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ.20 ಕಡಿಮೆ ಆಗಿದೆ. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು ಆದರೆ, ಇನ್ನೂ ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಇಲ್ಲ. ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗುವುದಿಲ್ಲ. ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ.‌ ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ. ಸರ್ಕಾರ‌ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು. ದನಕರುಗಳಿಗೆ ಮೇವು ಕೊಡುತ್ತಿಲ್ಲ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ.‌ ರೈತರಿಗೆ, ಬಡವರಿಗೆ ಸಹಾಯ ಮಾಡುತ್ತಿಲ್ಲ.‌ ಹಾಗಿದ್ದಲ್ಲಿ ಈ ಸರ್ಕಾರ ಯಾಕೆ ಇರಬೇಕು? ಎಂದು ಪ್ರಶ್ನಿಸಿದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಯಡಿಯೂರಪ್ಪನವರ ಏಕಚಕ್ರಾಧಿಪತ್ಯದಲ್ಲಿ ಸಂವಿಧಾನ, ಕಾನೂನು ಇವುಗಳಿಗೆ ಬೆಲೆ ಇಲ್ಲದಂತಾಗಿ, ರಾಜ್ಯದ ಜನರ ಕಷ್ಟ ಕೇಳುವವರಿಲ್ಲ. ಇಂಥ ನಿರ್ಲಜ್ಜ ಸರ್ಕಾರವನ್ನೇ ನಾನು ಎಂದೂ ನೋಡಿಲ್ಲ. ಯಡಿಯೂರಪ್ಪನವರದು ಮಾತು ಮಾತ್ರ ಜಾಸ್ತಿ. ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಎಂದರು.

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ. ಇಷ್ಟೆಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕಿತ್ತು, ಅದನ್ನೂ ಮುಖ್ಯಮಂತ್ರಿಗಳು ಮಾಡಿಲ್ಲ. ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ.
ಪ್ರಧಾನಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ, ರಾಜ್ಯದ ಬಗ್ಗೆ ಏಕಿಷ್ಟು ತಾತ್ಸಾರ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕೂಡಲೇ ರೂ.5 ಸಾವಿರ ಕೋಟಿ ನೆರವು ಘೋಷಿಸಲಿ ಎಂದು ಆಗ್ರಹಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...