Homeಕರ್ನಾಟಕಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? :...

ಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? : ಸಿದ್ದು

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ.

- Advertisement -
- Advertisement -

ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರ 4 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೊಳಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅಕ್ಕಿಯನ್ನು ಕಡಿಮೆ ಮಾಡಲು ಚರ್ಚೆ ನಡೆಸಿದೆ ಎಂಬ ಮಾಹಿತಿ ಬಂದಿದೆ. ಈ ರೀತಿಯೇನಾದರೂ ಮಾಡಿದರೆ ನಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕಾವೇರಿನಿವಾಸದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ. ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು‌ ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ. ಹಾಗಾಗಿ ಅಕ್ಕಿ ಕಡಿತಗೊಳಿಸುವ ಆಲೋಚನೆಯೇನಾದರೂ ಯಡಿಯೂರಪ್ಪನವರಿಗೆ ಇದ್ದಲ್ಲಿ ತಕ್ಷಣವೇ ಅದನ್ನು ಕೈಬಿಡಲಿ ಎಂದರು.

ಇಂದಿರಾ ಕ್ಯಾಂಟೀನ್‌ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ, ಅಲ್ಲಿ ಗುಣಮಟ್ಟದ‌ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ. ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಾಗಲಾರದು. ಈ ಕೂಡಲೇ ಬಿಬಿಎಂಪಿಗೆ ಅನುದಾನ ಬಿಡುಗಡೆ ಮಾಡಲಿ ಎಂದು ತಿಳಿಸಿದರು.

ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ.20 ಕಡಿಮೆ ಆಗಿದೆ. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು ಆದರೆ, ಇನ್ನೂ ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಇಲ್ಲ. ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗುವುದಿಲ್ಲ. ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ.‌ ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ. ಸರ್ಕಾರ‌ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು. ದನಕರುಗಳಿಗೆ ಮೇವು ಕೊಡುತ್ತಿಲ್ಲ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ.‌ ರೈತರಿಗೆ, ಬಡವರಿಗೆ ಸಹಾಯ ಮಾಡುತ್ತಿಲ್ಲ.‌ ಹಾಗಿದ್ದಲ್ಲಿ ಈ ಸರ್ಕಾರ ಯಾಕೆ ಇರಬೇಕು? ಎಂದು ಪ್ರಶ್ನಿಸಿದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಯಡಿಯೂರಪ್ಪನವರ ಏಕಚಕ್ರಾಧಿಪತ್ಯದಲ್ಲಿ ಸಂವಿಧಾನ, ಕಾನೂನು ಇವುಗಳಿಗೆ ಬೆಲೆ ಇಲ್ಲದಂತಾಗಿ, ರಾಜ್ಯದ ಜನರ ಕಷ್ಟ ಕೇಳುವವರಿಲ್ಲ. ಇಂಥ ನಿರ್ಲಜ್ಜ ಸರ್ಕಾರವನ್ನೇ ನಾನು ಎಂದೂ ನೋಡಿಲ್ಲ. ಯಡಿಯೂರಪ್ಪನವರದು ಮಾತು ಮಾತ್ರ ಜಾಸ್ತಿ. ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಎಂದರು.

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ. ಇಷ್ಟೆಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕಿತ್ತು, ಅದನ್ನೂ ಮುಖ್ಯಮಂತ್ರಿಗಳು ಮಾಡಿಲ್ಲ. ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ.
ಪ್ರಧಾನಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ, ರಾಜ್ಯದ ಬಗ್ಗೆ ಏಕಿಷ್ಟು ತಾತ್ಸಾರ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕೂಡಲೇ ರೂ.5 ಸಾವಿರ ಕೋಟಿ ನೆರವು ಘೋಷಿಸಲಿ ಎಂದು ಆಗ್ರಹಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...