Homeಕರ್ನಾಟಕಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? :...

ಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? : ಸಿದ್ದು

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ.

- Advertisement -
- Advertisement -

ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರ 4 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೊಳಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅಕ್ಕಿಯನ್ನು ಕಡಿಮೆ ಮಾಡಲು ಚರ್ಚೆ ನಡೆಸಿದೆ ಎಂಬ ಮಾಹಿತಿ ಬಂದಿದೆ. ಈ ರೀತಿಯೇನಾದರೂ ಮಾಡಿದರೆ ನಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕಾವೇರಿನಿವಾಸದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ. ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು‌ ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ. ಹಾಗಾಗಿ ಅಕ್ಕಿ ಕಡಿತಗೊಳಿಸುವ ಆಲೋಚನೆಯೇನಾದರೂ ಯಡಿಯೂರಪ್ಪನವರಿಗೆ ಇದ್ದಲ್ಲಿ ತಕ್ಷಣವೇ ಅದನ್ನು ಕೈಬಿಡಲಿ ಎಂದರು.

ಇಂದಿರಾ ಕ್ಯಾಂಟೀನ್‌ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ, ಅಲ್ಲಿ ಗುಣಮಟ್ಟದ‌ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ. ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಾಗಲಾರದು. ಈ ಕೂಡಲೇ ಬಿಬಿಎಂಪಿಗೆ ಅನುದಾನ ಬಿಡುಗಡೆ ಮಾಡಲಿ ಎಂದು ತಿಳಿಸಿದರು.

ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ.20 ಕಡಿಮೆ ಆಗಿದೆ. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು ಆದರೆ, ಇನ್ನೂ ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಇಲ್ಲ. ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗುವುದಿಲ್ಲ. ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ.‌ ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ. ಸರ್ಕಾರ‌ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು. ದನಕರುಗಳಿಗೆ ಮೇವು ಕೊಡುತ್ತಿಲ್ಲ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ.‌ ರೈತರಿಗೆ, ಬಡವರಿಗೆ ಸಹಾಯ ಮಾಡುತ್ತಿಲ್ಲ.‌ ಹಾಗಿದ್ದಲ್ಲಿ ಈ ಸರ್ಕಾರ ಯಾಕೆ ಇರಬೇಕು? ಎಂದು ಪ್ರಶ್ನಿಸಿದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಯಡಿಯೂರಪ್ಪನವರ ಏಕಚಕ್ರಾಧಿಪತ್ಯದಲ್ಲಿ ಸಂವಿಧಾನ, ಕಾನೂನು ಇವುಗಳಿಗೆ ಬೆಲೆ ಇಲ್ಲದಂತಾಗಿ, ರಾಜ್ಯದ ಜನರ ಕಷ್ಟ ಕೇಳುವವರಿಲ್ಲ. ಇಂಥ ನಿರ್ಲಜ್ಜ ಸರ್ಕಾರವನ್ನೇ ನಾನು ಎಂದೂ ನೋಡಿಲ್ಲ. ಯಡಿಯೂರಪ್ಪನವರದು ಮಾತು ಮಾತ್ರ ಜಾಸ್ತಿ. ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಎಂದರು.

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ. ಇಷ್ಟೆಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕಿತ್ತು, ಅದನ್ನೂ ಮುಖ್ಯಮಂತ್ರಿಗಳು ಮಾಡಿಲ್ಲ. ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ.
ಪ್ರಧಾನಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ, ರಾಜ್ಯದ ಬಗ್ಗೆ ಏಕಿಷ್ಟು ತಾತ್ಸಾರ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕೂಡಲೇ ರೂ.5 ಸಾವಿರ ಕೋಟಿ ನೆರವು ಘೋಷಿಸಲಿ ಎಂದು ಆಗ್ರಹಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...