Homeಕರ್ನಾಟಕಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? :...

ಯಡಿಯೂರಪ್ಪನವರಿಗೆ ಮೋದಿ ಕಂಡ್ರೆ ಭಯ. ಹಾಗಾಗಿ ಪ್ರವಾಹ ಪರಿಹಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರುತ್ತಿಲ್ಲ? : ಸಿದ್ದು

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ.

- Advertisement -
- Advertisement -

ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡುದಾರ 4 ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗೊಳಿಸಿತ್ತು. ರಾಜ್ಯ ಬಿಜೆಪಿ ಸರ್ಕಾರ ಈ ಅಕ್ಕಿಯನ್ನು ಕಡಿಮೆ ಮಾಡಲು ಚರ್ಚೆ ನಡೆಸಿದೆ ಎಂಬ ಮಾಹಿತಿ ಬಂದಿದೆ. ಈ ರೀತಿಯೇನಾದರೂ ಮಾಡಿದರೆ ನಾನು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಕಾವೇರಿನಿವಾಸದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಅನ್ನಭಾಗ್ಯ ಯೋಜನೆಯ ಕಡಿತ ಮಾಡಿದ ಅಕ್ಕಿ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ, ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡುತ್ತೇವೆ ಎನ್ನುವುದು ಬಡವರ ವಿರೋಧಿ ಧೋರಣೆಯಾಗುತ್ತದೆ. ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು‌ ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ. ಹಾಗಾಗಿ ಅಕ್ಕಿ ಕಡಿತಗೊಳಿಸುವ ಆಲೋಚನೆಯೇನಾದರೂ ಯಡಿಯೂರಪ್ಪನವರಿಗೆ ಇದ್ದಲ್ಲಿ ತಕ್ಷಣವೇ ಅದನ್ನು ಕೈಬಿಡಲಿ ಎಂದರು.

ಇಂದಿರಾ ಕ್ಯಾಂಟೀನ್‌ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ, ಅಲ್ಲಿ ಗುಣಮಟ್ಟದ‌ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಎಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ. ಬಡಜನರ ಹಸಿವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ವರ್ಷಕ್ಕೆ ರೂ.2,000 ಕೋಟಿ ಹಣ ದೊಡ್ಡ ಹೊರೆಯಾಗಲಾರದು. ಈ ಕೂಡಲೇ ಬಿಬಿಎಂಪಿಗೆ ಅನುದಾನ ಬಿಡುಗಡೆ ಮಾಡಲಿ ಎಂದು ತಿಳಿಸಿದರು.

ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ.20 ಕಡಿಮೆ ಆಗಿದೆ. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು ಆದರೆ, ಇನ್ನೂ ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಇಲ್ಲ. ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗುವುದಿಲ್ಲ. ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ.‌ ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ. ಸರ್ಕಾರ‌ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಿ, ಅಗತ್ಯ ಪ್ರಮಾಣದ ಅನುದಾನ ಬಿಡುಗಡೆ ಮಾಡಬೇಕು. ದನಕರುಗಳಿಗೆ ಮೇವು ಕೊಡುತ್ತಿಲ್ಲ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ.‌ ರೈತರಿಗೆ, ಬಡವರಿಗೆ ಸಹಾಯ ಮಾಡುತ್ತಿಲ್ಲ.‌ ಹಾಗಿದ್ದಲ್ಲಿ ಈ ಸರ್ಕಾರ ಯಾಕೆ ಇರಬೇಕು? ಎಂದು ಪ್ರಶ್ನಿಸಿದರು.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ, ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಇನ್ನೂ ಇದೆಯೇ? ಯಡಿಯೂರಪ್ಪನವರ ಏಕಚಕ್ರಾಧಿಪತ್ಯದಲ್ಲಿ ಸಂವಿಧಾನ, ಕಾನೂನು ಇವುಗಳಿಗೆ ಬೆಲೆ ಇಲ್ಲದಂತಾಗಿ, ರಾಜ್ಯದ ಜನರ ಕಷ್ಟ ಕೇಳುವವರಿಲ್ಲ. ಇಂಥ ನಿರ್ಲಜ್ಜ ಸರ್ಕಾರವನ್ನೇ ನಾನು ಎಂದೂ ನೋಡಿಲ್ಲ. ಯಡಿಯೂರಪ್ಪನವರದು ಮಾತು ಮಾತ್ರ ಜಾಸ್ತಿ. ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ? ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ? ಎಂದರು.

ಯಡಿಯೂರಪ್ಪನವರು ಪ್ರಧಾನ ಮಂತ್ರಿಗಳಿಗೆ ತುಂಬಾ ಹೆದರುತ್ತಾರೆ ಎನಿಸುತ್ತಿದೆ. ಅವರಿಗೆ ಭಯವಿದ್ದರೆ ಸರ್ವ ಪಕ್ಷ ನಿಯೋಗವನ್ನಾದರೂ ಕರೆದುಕೊಂಡು ಹೋಗಲಿ, ಪ್ರಧಾನಿಯವರ ಬಳಿ ನಾವೇ ಮಾತಾಡುತ್ತೇವೆ. ಇಷ್ಟೆಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನವನ್ನು ಕರೆಯಬೇಕಿತ್ತು, ಅದನ್ನೂ ಮುಖ್ಯಮಂತ್ರಿಗಳು ಮಾಡಿಲ್ಲ. ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ.
ಪ್ರಧಾನಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ, ರಾಜ್ಯದ ಬಗ್ಗೆ ಏಕಿಷ್ಟು ತಾತ್ಸಾರ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕೂಡಲೇ ರೂ.5 ಸಾವಿರ ಕೋಟಿ ನೆರವು ಘೋಷಿಸಲಿ ಎಂದು ಆಗ್ರಹಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...