Homeಕರ್ನಾಟಕಸಾಕಾಗದ ಪರಿಹಾರ ಹಣ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿಲ್ಲದ ಟೀಕೆ..

ಸಾಕಾಗದ ಪರಿಹಾರ ಹಣ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿಲ್ಲದ ಟೀಕೆ..

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ, ಒತ್ತಾಯ ಮತ್ತು ಟೀಕೆಯ ನಂತರ ಕೇಂದ್ರ ಸರ್ಕಾರ 1200 ಕೋಟಿ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿತು. ಅದಕ್ಕೂ ಬಿಜೆಪಿ ಶಾಸಕರು, ಬೆಂಬಲಿಗರೂ ಸೇರಿದಂತೆ ಉತ್ತರ ಕರ್ನಾಟಕದ ಜನ ಬಹಳಷ್ಟು ಹೋರಾಟ ಮಾಡಬೇಕಾಗಿ ಬಂದಿತ್ತು. ಈ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ ಎಂದು ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.

“ಹೊದ್ಕೊಳ್ಳೊಕೆ ಕಂಬಳೀ ಕೇಳ್ದ್ರೆ .. ಕರ್ಚೀಪ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ ಉತ್ತರಕುಮಾರರು…ಪ್ರಜೆಗಳೇ.. ಮರುಳಾಗದಿರಿ ..ದೇಶದ ದುಡ್ಡು ನಮ್ದು.. ಸಂಕಷ್ಟದಲ್ಲಿ ಪಕ್ಷಾತೀತರಾಗಿರಿ… ಪ್ರಶ್ನಿಸೋದನ್ನ ನಿಲ್ಲಿಸ್ಬೇಡಿ… ಯಾರೇ ಆದ್ರು ನಾವು ಉಗೀತಿದ್ರೇನೆ ಕೆಲಸ ಮಾಡೊದು ಅಲ್ವಾ?? ಜಸ್ಟ್ ಆಸ್ಕಿಂಗ್” ಎಂದು ಚಿತ್ರನಟ ಎಂದು ಪ್ರಕಾಶ್ ರಾಜ್ ಮತ್ತೆ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ಹಿಂದೆಂದೂ ಕಂಡರಿಯದ ನೆರೆ ಪರಿಸ್ಥಿತಿಯಿಂದ ಆಗಿರುವ ನಷ್ಟ ಅಂದಾಜು ರೂ.50,000‌ ಕೋಟಿ, ರಾಜ್ಯ ಸರ್ಕಾರ ಕೇಳಿದ್ದು ರೂ.35,000 ಕೋಟಿ. ಕೇಂದ್ರ ಕೊಟ್ಟಿರುವುದು ರೂ.1200 ಕೋಟಿ. ಇದು ಬ್ರಹ್ಮಾಂಡ ಹಸಿವಿಗೆ ಅರೆಕಾಸಿನ ಮಜ್ಜಿಗೆಯಂತೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ರತಿಭಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ಥರನ್ನು ಮರೆತಿದ್ದದ್ದು ನಮ್ಮ ದುರಂತ. ಈಗಲಾದರೂ ಎಚ್ಚೆತ್ತುಕೊಳ್ಳಲಿ.” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಕೇಂದ್ರದ ಗೃಹ ಇಲಾಖೆ 1200 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಅಂತ ಶಿಫಾರಸ್ಸು ಮಾಡಿದ್ದೆ ಹೊರತು ಕರ್ನಾಟಕಕ್ಕೆ ಕೊಟ್ಟೆ ಕೊಡಬೇಕು ಅಂತಲ್ಲ. ಗೃಹ ಇಲಾಖೆ ಶಿಫಾರಸ್ಸನ್ನು ಪರಿಗಣಿಸಿದ NDRF ಕೊಟ್ಟ ಅನುದಾನ 897 ಕೋಟಿ ರೂಪಾಯಿ. ಒಟ್ಟಿನಲ್ಲಿ ಬಿಜೆಪಿಗೆ ಕನ್ನಡಿಗರ ವೋಟ್ ಬೇಕೆ ಹೊರತು ಕನ್ನಡಿಗರ ಹಿತಾಸಕ್ತಿ ಅಲ್ಲ ಕಣ್ರಪ್ಪ” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರರವರು ಬೇಸರ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಒಂದು ದಿನಕ್ಕೆ ಕೇಂದ್ರ ಸರಕಾರಕ್ಕೆ ಕಟ್ಟೋ ತೆರಿಗೆ, ನೆರೆ ಪರಿಹಾರಕ್ಕೆ ನೀಡಿರೋ ದುಡ್ಡಿಗಿಂತ ಹೆಚ್ಚು ಕೊನೆಪಕ್ಷ ಅದುನ್ನಾದ್ರೂ ಕೊಟ್ರಲ್ಲಾ.. ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ. ನಮ್ಮ ತೆರಿಗೆ ಹಣಕ್ಕೆ ನಾವು ಭಿಕ್ಷೆ ಬೇಡಿದ್ದು ಸಾಕು. ಕರ್ನಾಟಕಕ್ಕೆ ಆರ್ಥಿಕ ಸ್ವಾಯತ್ತತೆ ಬೇಕು” ಎಂದು ಪತ್ರಕರ್ತರಾದ ದಿನೇಶ್ ಕುಮಾರ್‌ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...