Homeಕರ್ನಾಟಕಸಾಕಾಗದ ಪರಿಹಾರ ಹಣ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿಲ್ಲದ ಟೀಕೆ..

ಸಾಕಾಗದ ಪರಿಹಾರ ಹಣ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿಲ್ಲದ ಟೀಕೆ..

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ, ಒತ್ತಾಯ ಮತ್ತು ಟೀಕೆಯ ನಂತರ ಕೇಂದ್ರ ಸರ್ಕಾರ 1200 ಕೋಟಿ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿತು. ಅದಕ್ಕೂ ಬಿಜೆಪಿ ಶಾಸಕರು, ಬೆಂಬಲಿಗರೂ ಸೇರಿದಂತೆ ಉತ್ತರ ಕರ್ನಾಟಕದ ಜನ ಬಹಳಷ್ಟು ಹೋರಾಟ ಮಾಡಬೇಕಾಗಿ ಬಂದಿತ್ತು. ಈ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ ಎಂದು ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.

“ಹೊದ್ಕೊಳ್ಳೊಕೆ ಕಂಬಳೀ ಕೇಳ್ದ್ರೆ .. ಕರ್ಚೀಪ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ ಉತ್ತರಕುಮಾರರು…ಪ್ರಜೆಗಳೇ.. ಮರುಳಾಗದಿರಿ ..ದೇಶದ ದುಡ್ಡು ನಮ್ದು.. ಸಂಕಷ್ಟದಲ್ಲಿ ಪಕ್ಷಾತೀತರಾಗಿರಿ… ಪ್ರಶ್ನಿಸೋದನ್ನ ನಿಲ್ಲಿಸ್ಬೇಡಿ… ಯಾರೇ ಆದ್ರು ನಾವು ಉಗೀತಿದ್ರೇನೆ ಕೆಲಸ ಮಾಡೊದು ಅಲ್ವಾ?? ಜಸ್ಟ್ ಆಸ್ಕಿಂಗ್” ಎಂದು ಚಿತ್ರನಟ ಎಂದು ಪ್ರಕಾಶ್ ರಾಜ್ ಮತ್ತೆ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ಹಿಂದೆಂದೂ ಕಂಡರಿಯದ ನೆರೆ ಪರಿಸ್ಥಿತಿಯಿಂದ ಆಗಿರುವ ನಷ್ಟ ಅಂದಾಜು ರೂ.50,000‌ ಕೋಟಿ, ರಾಜ್ಯ ಸರ್ಕಾರ ಕೇಳಿದ್ದು ರೂ.35,000 ಕೋಟಿ. ಕೇಂದ್ರ ಕೊಟ್ಟಿರುವುದು ರೂ.1200 ಕೋಟಿ. ಇದು ಬ್ರಹ್ಮಾಂಡ ಹಸಿವಿಗೆ ಅರೆಕಾಸಿನ ಮಜ್ಜಿಗೆಯಂತೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ರತಿಭಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ಥರನ್ನು ಮರೆತಿದ್ದದ್ದು ನಮ್ಮ ದುರಂತ. ಈಗಲಾದರೂ ಎಚ್ಚೆತ್ತುಕೊಳ್ಳಲಿ.” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಕೇಂದ್ರದ ಗೃಹ ಇಲಾಖೆ 1200 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಅಂತ ಶಿಫಾರಸ್ಸು ಮಾಡಿದ್ದೆ ಹೊರತು ಕರ್ನಾಟಕಕ್ಕೆ ಕೊಟ್ಟೆ ಕೊಡಬೇಕು ಅಂತಲ್ಲ. ಗೃಹ ಇಲಾಖೆ ಶಿಫಾರಸ್ಸನ್ನು ಪರಿಗಣಿಸಿದ NDRF ಕೊಟ್ಟ ಅನುದಾನ 897 ಕೋಟಿ ರೂಪಾಯಿ. ಒಟ್ಟಿನಲ್ಲಿ ಬಿಜೆಪಿಗೆ ಕನ್ನಡಿಗರ ವೋಟ್ ಬೇಕೆ ಹೊರತು ಕನ್ನಡಿಗರ ಹಿತಾಸಕ್ತಿ ಅಲ್ಲ ಕಣ್ರಪ್ಪ” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರರವರು ಬೇಸರ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಒಂದು ದಿನಕ್ಕೆ ಕೇಂದ್ರ ಸರಕಾರಕ್ಕೆ ಕಟ್ಟೋ ತೆರಿಗೆ, ನೆರೆ ಪರಿಹಾರಕ್ಕೆ ನೀಡಿರೋ ದುಡ್ಡಿಗಿಂತ ಹೆಚ್ಚು ಕೊನೆಪಕ್ಷ ಅದುನ್ನಾದ್ರೂ ಕೊಟ್ರಲ್ಲಾ.. ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ. ನಮ್ಮ ತೆರಿಗೆ ಹಣಕ್ಕೆ ನಾವು ಭಿಕ್ಷೆ ಬೇಡಿದ್ದು ಸಾಕು. ಕರ್ನಾಟಕಕ್ಕೆ ಆರ್ಥಿಕ ಸ್ವಾಯತ್ತತೆ ಬೇಕು” ಎಂದು ಪತ್ರಕರ್ತರಾದ ದಿನೇಶ್ ಕುಮಾರ್‌ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...