Homeಕರ್ನಾಟಕಸಾಕಾಗದ ಪರಿಹಾರ ಹಣ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿಲ್ಲದ ಟೀಕೆ..

ಸಾಕಾಗದ ಪರಿಹಾರ ಹಣ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಿಲ್ಲದ ಟೀಕೆ..

- Advertisement -
- Advertisement -

ಪ್ರವಾಹ ಪರಿಹಾರ ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ, ಒತ್ತಾಯ ಮತ್ತು ಟೀಕೆಯ ನಂತರ ಕೇಂದ್ರ ಸರ್ಕಾರ 1200 ಕೋಟಿ ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿತು. ಅದಕ್ಕೂ ಬಿಜೆಪಿ ಶಾಸಕರು, ಬೆಂಬಲಿಗರೂ ಸೇರಿದಂತೆ ಉತ್ತರ ಕರ್ನಾಟಕದ ಜನ ಬಹಳಷ್ಟು ಹೋರಾಟ ಮಾಡಬೇಕಾಗಿ ಬಂದಿತ್ತು. ಈ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ ಎಂದು ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.

“ಹೊದ್ಕೊಳ್ಳೊಕೆ ಕಂಬಳೀ ಕೇಳ್ದ್ರೆ .. ಕರ್ಚೀಪ್ ಭಿಕ್ಷೆ ಕೊಟ್ಟು ಬೀಗ್ತಾ ಇದಾರೆ ಉತ್ತರಕುಮಾರರು…ಪ್ರಜೆಗಳೇ.. ಮರುಳಾಗದಿರಿ ..ದೇಶದ ದುಡ್ಡು ನಮ್ದು.. ಸಂಕಷ್ಟದಲ್ಲಿ ಪಕ್ಷಾತೀತರಾಗಿರಿ… ಪ್ರಶ್ನಿಸೋದನ್ನ ನಿಲ್ಲಿಸ್ಬೇಡಿ… ಯಾರೇ ಆದ್ರು ನಾವು ಉಗೀತಿದ್ರೇನೆ ಕೆಲಸ ಮಾಡೊದು ಅಲ್ವಾ?? ಜಸ್ಟ್ ಆಸ್ಕಿಂಗ್” ಎಂದು ಚಿತ್ರನಟ ಎಂದು ಪ್ರಕಾಶ್ ರಾಜ್ ಮತ್ತೆ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

“ಹಿಂದೆಂದೂ ಕಂಡರಿಯದ ನೆರೆ ಪರಿಸ್ಥಿತಿಯಿಂದ ಆಗಿರುವ ನಷ್ಟ ಅಂದಾಜು ರೂ.50,000‌ ಕೋಟಿ, ರಾಜ್ಯ ಸರ್ಕಾರ ಕೇಳಿದ್ದು ರೂ.35,000 ಕೋಟಿ. ಕೇಂದ್ರ ಕೊಟ್ಟಿರುವುದು ರೂ.1200 ಕೋಟಿ. ಇದು ಬ್ರಹ್ಮಾಂಡ ಹಸಿವಿಗೆ ಅರೆಕಾಸಿನ ಮಜ್ಜಿಗೆಯಂತೆ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ರತಿಭಟನೆ, ಒತ್ತಾಯಗಳಿಗೆ ಮಣಿದು, ಅಳೆದು ತೂಗಿ ಕೇಂದ್ರ ಸರ್ಕಾರ 1200 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಆದರೆ ಬೊಕ್ಕಸದಲ್ಲಿ ಹಣವಿದ್ದರೂ ರಾಜ್ಯ ಸರ್ಕಾರ ಎರಡು ತಿಂಗಳುಗಳಿಂದ ನೆರೆ ಸಂತ್ರಸ್ಥರನ್ನು ಮರೆತಿದ್ದದ್ದು ನಮ್ಮ ದುರಂತ. ಈಗಲಾದರೂ ಎಚ್ಚೆತ್ತುಕೊಳ್ಳಲಿ.” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಕೇಂದ್ರದ ಗೃಹ ಇಲಾಖೆ 1200 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಅಂತ ಶಿಫಾರಸ್ಸು ಮಾಡಿದ್ದೆ ಹೊರತು ಕರ್ನಾಟಕಕ್ಕೆ ಕೊಟ್ಟೆ ಕೊಡಬೇಕು ಅಂತಲ್ಲ. ಗೃಹ ಇಲಾಖೆ ಶಿಫಾರಸ್ಸನ್ನು ಪರಿಗಣಿಸಿದ NDRF ಕೊಟ್ಟ ಅನುದಾನ 897 ಕೋಟಿ ರೂಪಾಯಿ. ಒಟ್ಟಿನಲ್ಲಿ ಬಿಜೆಪಿಗೆ ಕನ್ನಡಿಗರ ವೋಟ್ ಬೇಕೆ ಹೊರತು ಕನ್ನಡಿಗರ ಹಿತಾಸಕ್ತಿ ಅಲ್ಲ ಕಣ್ರಪ್ಪ” ಎಂದು ಪ್ರಾಧ್ಯಾಪಕರಾದ ನಾಗೇಗೌಡ ಕೀಲಾರರವರು ಬೇಸರ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಒಂದು ದಿನಕ್ಕೆ ಕೇಂದ್ರ ಸರಕಾರಕ್ಕೆ ಕಟ್ಟೋ ತೆರಿಗೆ, ನೆರೆ ಪರಿಹಾರಕ್ಕೆ ನೀಡಿರೋ ದುಡ್ಡಿಗಿಂತ ಹೆಚ್ಚು ಕೊನೆಪಕ್ಷ ಅದುನ್ನಾದ್ರೂ ಕೊಟ್ರಲ್ಲಾ.. ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ. ನಮ್ಮ ತೆರಿಗೆ ಹಣಕ್ಕೆ ನಾವು ಭಿಕ್ಷೆ ಬೇಡಿದ್ದು ಸಾಕು. ಕರ್ನಾಟಕಕ್ಕೆ ಆರ್ಥಿಕ ಸ್ವಾಯತ್ತತೆ ಬೇಕು” ಎಂದು ಪತ್ರಕರ್ತರಾದ ದಿನೇಶ್ ಕುಮಾರ್‌ ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...