Homeಕರ್ನಾಟಕನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

- Advertisement -
- Advertisement -

ಕರ್ನಾಟಕಕ್ಕೆ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ನೆರೆ ಅಪ್ಪಳಿಸಿದೆ. ಅರ್ಧ ಕರ್ನಾಟಕ ಪ್ರವಾಹದಿಂದಾಗಿ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ್ಪಕ ಪರಿಹಾರ ಕೊಟ್ಟಿಲ್ಲ ಎಂಬ ದೂರು ಕೇಳಿಬಂದಿದೆ. ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗಿವೆ.

ಇಂತಹ ಸಂದರ್ಭದಲ್ಲಿ ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ನೆರೆ ಪರಿಹಾರ ಕೊಡದವರು ಟಿಪ್ಪು ಬಗ್ಗೆ ಮಾತಾಡುತ್ತಾರೆ ಎಂದು ನಾಗರಾಜೇಗೌಡ ನಾಗೇಗೌಡರವರು ಅಭಿಪ್ರಾಯಪಟ್ಟಿದ್ದಾರೆ.

“ಸಾವರ್ಕರ್ ಮನೆಗೆ ಟಿಪ್ಪು ಮುನ್ನಲೆಗೆ. ಇದು ಕಣ್ರೋ ರಾಜಕೀಯ ಅಂದ್ರೆ ನಾವು ಕಲಿಯೋದು ಇನ್ನೂ ಬಾಳ ಇದೆ.” ಎಂದು ರಾಮಚಂದ್ರ ಕಲ್ಲೇರ್‌ರವರು ಸಿಡಿಮಿಡಿಗೊಂಡಿದ್ದಾರೆ.

ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯುವ ಉಪಚುನಾವಣೆ ಗೆಲ್ಲಲು ಟಿಪ್ಪು ಸುಲ್ತಾನ್ ಬರಬೇಕಾಯ್ತು ನೊಡಿ ಎಂದು ಜುಬೈರ್‌ ಎಂಬುವವರು ವ್ಯಂಗ್ಯವಾಡಿದ್ದಾರೆ.

ನವೆಂಬರ್ 10 ಟಿಪ್ಪು ಜನ್ಮದಿನ ಹತ್ತಿರ ಬರುತ್ತಿದ್ದಂತೆಯೇ ಬಿಜೆಪಿ ಎಚ್ಚೆತ್ತುಕೊಂಡಿದೆ. ಒಂದು ಕಾಲದಲ್ಲಿ ಯಡಿಯೂರಪ್ಪ, ಜಗಧೀಶ್‌ ಶೆಟ್ಟರ್‍, ಆರ್‌ ಆಶೋಕ್‌ ಸೇರಿದಂತೆ ಬಿಜೆಪಿ ಘಟಾನುಘಟಿ ನಾಯಕರು ಟಿಪ್ಪು ಜಯಂತಿ ಮಾಡಿ, ಟಿಪ್ಪು ಥರ ವೇಷ ಹಾಕಿ ಖಡ್ಗ ಹಿಡಿದು ಪೋಸು ಕೊಟ್ಟಿದ್ದವರು ಇಂದು ಟಿಪ್ಪು ಹೆಸರೇಳಿದರೆ ಮುನಿಸಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಶಾಲಾ ಪಠ್ಯಗಳಲ್ಲಿ ಟಿಪ್ಪು ಪಠ್ಯಗಳನ್ನು ಕೈಬಿಡುತ್ತೇವೆ. ಒಂದು ಸಾಲು ಸಹ ಟಿಪ್ಪು ಬಗ್ಗೆ ಇರುವುದಿಲ್ಲ. ಟಿಪ್ಪು ಇತಿಹಾಸ ತೆಗೆದುಹಾಕುವುದು 101% ಖಾತ್ರಿ ಎಂದು ಘೋಷಿಸಿದ್ದಾರೆ.

ಈಗಾಗಲೇ ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಆದರೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮಾತ್ರ ಮೊದಲು ನೆರೆ ಪರಿಹಾರ ಕೊಡಿ ನಂತರ ಸಾವರ್ಕರ್‌, ಟಿಪ್ಪು ವಿಚಾರ ಮಾತಾಡೋಣ ಎಂಬ ಜಾಣತನ ಪ್ರದರ್ಶಿಸಿದ್ದಾರೆ.

ಮತ್ತಷ್ಟು ಜನ ಬಿಜೆಪಿ ತೋಡಿರುವ ಟ್ರಾಪ್‌ಗೆ ಬೀಳಬೇಡಿ. ಟಿಪ್ಪು ವಿಚಾರ ಮುನ್ನಲೆಗೆ ತಂದು ಅಸಲಿ ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಬುದ್ದಿವಾದ ಹೇಳುತ್ತಿದ್ದಾರೆ.

ಆದರೂ ಸಾಕಷ್ಟು ಜನ ಟಿಪ್ಪುವಿನ ಸಾಧನೆಗಳು, ಟಿಪ್ಪುವಿನ ಇತಿಹಾಸ, ಟಿಪ್ಪುವಿನ ಕೊಡುಗೆಗಳ ಬಗ್ಗೆ, ಬಿಜೆಪಿಯವರ ಇಬ್ಬಗೆ ನೀತಿಯ ಬಗ್ಗೆ ಬರೆಯತೊಡಗಿದ್ದಾರೆ.

ಇನ್ನು ನವೆಂಬರ್ 17ರಂದು ಬಾಬ್ರೀ ಮಸೀದಿ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಹೊರಬರಲಿದೆ. ಆಗಲೂ ಕೋಮುಗಳ ನಡುವೆ ದ್ವೇಷ ಬಿತ್ತುವ ಕೆಲಸ ಆರಂಭವಾಗಲಿದೆ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಬಹುತೇಕ ಪ್ರಜ್ಞಾವಂತರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...