Homeಕರ್ನಾಟಕನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

- Advertisement -
- Advertisement -

ಕರ್ನಾಟಕಕ್ಕೆ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ನೆರೆ ಅಪ್ಪಳಿಸಿದೆ. ಅರ್ಧ ಕರ್ನಾಟಕ ಪ್ರವಾಹದಿಂದಾಗಿ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ್ಪಕ ಪರಿಹಾರ ಕೊಟ್ಟಿಲ್ಲ ಎಂಬ ದೂರು ಕೇಳಿಬಂದಿದೆ. ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗಿವೆ.

ಇಂತಹ ಸಂದರ್ಭದಲ್ಲಿ ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ನೆರೆ ಪರಿಹಾರ ಕೊಡದವರು ಟಿಪ್ಪು ಬಗ್ಗೆ ಮಾತಾಡುತ್ತಾರೆ ಎಂದು ನಾಗರಾಜೇಗೌಡ ನಾಗೇಗೌಡರವರು ಅಭಿಪ್ರಾಯಪಟ್ಟಿದ್ದಾರೆ.

“ಸಾವರ್ಕರ್ ಮನೆಗೆ ಟಿಪ್ಪು ಮುನ್ನಲೆಗೆ. ಇದು ಕಣ್ರೋ ರಾಜಕೀಯ ಅಂದ್ರೆ ನಾವು ಕಲಿಯೋದು ಇನ್ನೂ ಬಾಳ ಇದೆ.” ಎಂದು ರಾಮಚಂದ್ರ ಕಲ್ಲೇರ್‌ರವರು ಸಿಡಿಮಿಡಿಗೊಂಡಿದ್ದಾರೆ.

ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯುವ ಉಪಚುನಾವಣೆ ಗೆಲ್ಲಲು ಟಿಪ್ಪು ಸುಲ್ತಾನ್ ಬರಬೇಕಾಯ್ತು ನೊಡಿ ಎಂದು ಜುಬೈರ್‌ ಎಂಬುವವರು ವ್ಯಂಗ್ಯವಾಡಿದ್ದಾರೆ.

ನವೆಂಬರ್ 10 ಟಿಪ್ಪು ಜನ್ಮದಿನ ಹತ್ತಿರ ಬರುತ್ತಿದ್ದಂತೆಯೇ ಬಿಜೆಪಿ ಎಚ್ಚೆತ್ತುಕೊಂಡಿದೆ. ಒಂದು ಕಾಲದಲ್ಲಿ ಯಡಿಯೂರಪ್ಪ, ಜಗಧೀಶ್‌ ಶೆಟ್ಟರ್‍, ಆರ್‌ ಆಶೋಕ್‌ ಸೇರಿದಂತೆ ಬಿಜೆಪಿ ಘಟಾನುಘಟಿ ನಾಯಕರು ಟಿಪ್ಪು ಜಯಂತಿ ಮಾಡಿ, ಟಿಪ್ಪು ಥರ ವೇಷ ಹಾಕಿ ಖಡ್ಗ ಹಿಡಿದು ಪೋಸು ಕೊಟ್ಟಿದ್ದವರು ಇಂದು ಟಿಪ್ಪು ಹೆಸರೇಳಿದರೆ ಮುನಿಸಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಶಾಲಾ ಪಠ್ಯಗಳಲ್ಲಿ ಟಿಪ್ಪು ಪಠ್ಯಗಳನ್ನು ಕೈಬಿಡುತ್ತೇವೆ. ಒಂದು ಸಾಲು ಸಹ ಟಿಪ್ಪು ಬಗ್ಗೆ ಇರುವುದಿಲ್ಲ. ಟಿಪ್ಪು ಇತಿಹಾಸ ತೆಗೆದುಹಾಕುವುದು 101% ಖಾತ್ರಿ ಎಂದು ಘೋಷಿಸಿದ್ದಾರೆ.

ಈಗಾಗಲೇ ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಆದರೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮಾತ್ರ ಮೊದಲು ನೆರೆ ಪರಿಹಾರ ಕೊಡಿ ನಂತರ ಸಾವರ್ಕರ್‌, ಟಿಪ್ಪು ವಿಚಾರ ಮಾತಾಡೋಣ ಎಂಬ ಜಾಣತನ ಪ್ರದರ್ಶಿಸಿದ್ದಾರೆ.

ಮತ್ತಷ್ಟು ಜನ ಬಿಜೆಪಿ ತೋಡಿರುವ ಟ್ರಾಪ್‌ಗೆ ಬೀಳಬೇಡಿ. ಟಿಪ್ಪು ವಿಚಾರ ಮುನ್ನಲೆಗೆ ತಂದು ಅಸಲಿ ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಬುದ್ದಿವಾದ ಹೇಳುತ್ತಿದ್ದಾರೆ.

ಆದರೂ ಸಾಕಷ್ಟು ಜನ ಟಿಪ್ಪುವಿನ ಸಾಧನೆಗಳು, ಟಿಪ್ಪುವಿನ ಇತಿಹಾಸ, ಟಿಪ್ಪುವಿನ ಕೊಡುಗೆಗಳ ಬಗ್ಗೆ, ಬಿಜೆಪಿಯವರ ಇಬ್ಬಗೆ ನೀತಿಯ ಬಗ್ಗೆ ಬರೆಯತೊಡಗಿದ್ದಾರೆ.

ಇನ್ನು ನವೆಂಬರ್ 17ರಂದು ಬಾಬ್ರೀ ಮಸೀದಿ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಹೊರಬರಲಿದೆ. ಆಗಲೂ ಕೋಮುಗಳ ನಡುವೆ ದ್ವೇಷ ಬಿತ್ತುವ ಕೆಲಸ ಆರಂಭವಾಗಲಿದೆ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಬಹುತೇಕ ಪ್ರಜ್ಞಾವಂತರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...