Homeಕರ್ನಾಟಕನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

- Advertisement -
- Advertisement -

ಕರ್ನಾಟಕಕ್ಕೆ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ನೆರೆ ಅಪ್ಪಳಿಸಿದೆ. ಅರ್ಧ ಕರ್ನಾಟಕ ಪ್ರವಾಹದಿಂದಾಗಿ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ್ಪಕ ಪರಿಹಾರ ಕೊಟ್ಟಿಲ್ಲ ಎಂಬ ದೂರು ಕೇಳಿಬಂದಿದೆ. ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗಿವೆ.

ಇಂತಹ ಸಂದರ್ಭದಲ್ಲಿ ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ನೆರೆ ಪರಿಹಾರ ಕೊಡದವರು ಟಿಪ್ಪು ಬಗ್ಗೆ ಮಾತಾಡುತ್ತಾರೆ ಎಂದು ನಾಗರಾಜೇಗೌಡ ನಾಗೇಗೌಡರವರು ಅಭಿಪ್ರಾಯಪಟ್ಟಿದ್ದಾರೆ.

“ಸಾವರ್ಕರ್ ಮನೆಗೆ ಟಿಪ್ಪು ಮುನ್ನಲೆಗೆ. ಇದು ಕಣ್ರೋ ರಾಜಕೀಯ ಅಂದ್ರೆ ನಾವು ಕಲಿಯೋದು ಇನ್ನೂ ಬಾಳ ಇದೆ.” ಎಂದು ರಾಮಚಂದ್ರ ಕಲ್ಲೇರ್‌ರವರು ಸಿಡಿಮಿಡಿಗೊಂಡಿದ್ದಾರೆ.

ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯುವ ಉಪಚುನಾವಣೆ ಗೆಲ್ಲಲು ಟಿಪ್ಪು ಸುಲ್ತಾನ್ ಬರಬೇಕಾಯ್ತು ನೊಡಿ ಎಂದು ಜುಬೈರ್‌ ಎಂಬುವವರು ವ್ಯಂಗ್ಯವಾಡಿದ್ದಾರೆ.

ನವೆಂಬರ್ 10 ಟಿಪ್ಪು ಜನ್ಮದಿನ ಹತ್ತಿರ ಬರುತ್ತಿದ್ದಂತೆಯೇ ಬಿಜೆಪಿ ಎಚ್ಚೆತ್ತುಕೊಂಡಿದೆ. ಒಂದು ಕಾಲದಲ್ಲಿ ಯಡಿಯೂರಪ್ಪ, ಜಗಧೀಶ್‌ ಶೆಟ್ಟರ್‍, ಆರ್‌ ಆಶೋಕ್‌ ಸೇರಿದಂತೆ ಬಿಜೆಪಿ ಘಟಾನುಘಟಿ ನಾಯಕರು ಟಿಪ್ಪು ಜಯಂತಿ ಮಾಡಿ, ಟಿಪ್ಪು ಥರ ವೇಷ ಹಾಕಿ ಖಡ್ಗ ಹಿಡಿದು ಪೋಸು ಕೊಟ್ಟಿದ್ದವರು ಇಂದು ಟಿಪ್ಪು ಹೆಸರೇಳಿದರೆ ಮುನಿಸಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಶಾಲಾ ಪಠ್ಯಗಳಲ್ಲಿ ಟಿಪ್ಪು ಪಠ್ಯಗಳನ್ನು ಕೈಬಿಡುತ್ತೇವೆ. ಒಂದು ಸಾಲು ಸಹ ಟಿಪ್ಪು ಬಗ್ಗೆ ಇರುವುದಿಲ್ಲ. ಟಿಪ್ಪು ಇತಿಹಾಸ ತೆಗೆದುಹಾಕುವುದು 101% ಖಾತ್ರಿ ಎಂದು ಘೋಷಿಸಿದ್ದಾರೆ.

ಈಗಾಗಲೇ ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಆದರೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮಾತ್ರ ಮೊದಲು ನೆರೆ ಪರಿಹಾರ ಕೊಡಿ ನಂತರ ಸಾವರ್ಕರ್‌, ಟಿಪ್ಪು ವಿಚಾರ ಮಾತಾಡೋಣ ಎಂಬ ಜಾಣತನ ಪ್ರದರ್ಶಿಸಿದ್ದಾರೆ.

ಮತ್ತಷ್ಟು ಜನ ಬಿಜೆಪಿ ತೋಡಿರುವ ಟ್ರಾಪ್‌ಗೆ ಬೀಳಬೇಡಿ. ಟಿಪ್ಪು ವಿಚಾರ ಮುನ್ನಲೆಗೆ ತಂದು ಅಸಲಿ ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಬುದ್ದಿವಾದ ಹೇಳುತ್ತಿದ್ದಾರೆ.

ಆದರೂ ಸಾಕಷ್ಟು ಜನ ಟಿಪ್ಪುವಿನ ಸಾಧನೆಗಳು, ಟಿಪ್ಪುವಿನ ಇತಿಹಾಸ, ಟಿಪ್ಪುವಿನ ಕೊಡುಗೆಗಳ ಬಗ್ಗೆ, ಬಿಜೆಪಿಯವರ ಇಬ್ಬಗೆ ನೀತಿಯ ಬಗ್ಗೆ ಬರೆಯತೊಡಗಿದ್ದಾರೆ.

ಇನ್ನು ನವೆಂಬರ್ 17ರಂದು ಬಾಬ್ರೀ ಮಸೀದಿ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಹೊರಬರಲಿದೆ. ಆಗಲೂ ಕೋಮುಗಳ ನಡುವೆ ದ್ವೇಷ ಬಿತ್ತುವ ಕೆಲಸ ಆರಂಭವಾಗಲಿದೆ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಬಹುತೇಕ ಪ್ರಜ್ಞಾವಂತರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....