Homeಕರ್ನಾಟಕನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

- Advertisement -
- Advertisement -

ಕರ್ನಾಟಕಕ್ಕೆ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ನೆರೆ ಅಪ್ಪಳಿಸಿದೆ. ಅರ್ಧ ಕರ್ನಾಟಕ ಪ್ರವಾಹದಿಂದಾಗಿ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ್ಪಕ ಪರಿಹಾರ ಕೊಟ್ಟಿಲ್ಲ ಎಂಬ ದೂರು ಕೇಳಿಬಂದಿದೆ. ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗಿವೆ.

ಇಂತಹ ಸಂದರ್ಭದಲ್ಲಿ ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ನೆರೆ ಪರಿಹಾರ ಕೊಡದವರು ಟಿಪ್ಪು ಬಗ್ಗೆ ಮಾತಾಡುತ್ತಾರೆ ಎಂದು ನಾಗರಾಜೇಗೌಡ ನಾಗೇಗೌಡರವರು ಅಭಿಪ್ರಾಯಪಟ್ಟಿದ್ದಾರೆ.

“ಸಾವರ್ಕರ್ ಮನೆಗೆ ಟಿಪ್ಪು ಮುನ್ನಲೆಗೆ. ಇದು ಕಣ್ರೋ ರಾಜಕೀಯ ಅಂದ್ರೆ ನಾವು ಕಲಿಯೋದು ಇನ್ನೂ ಬಾಳ ಇದೆ.” ಎಂದು ರಾಮಚಂದ್ರ ಕಲ್ಲೇರ್‌ರವರು ಸಿಡಿಮಿಡಿಗೊಂಡಿದ್ದಾರೆ.

ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯುವ ಉಪಚುನಾವಣೆ ಗೆಲ್ಲಲು ಟಿಪ್ಪು ಸುಲ್ತಾನ್ ಬರಬೇಕಾಯ್ತು ನೊಡಿ ಎಂದು ಜುಬೈರ್‌ ಎಂಬುವವರು ವ್ಯಂಗ್ಯವಾಡಿದ್ದಾರೆ.

ನವೆಂಬರ್ 10 ಟಿಪ್ಪು ಜನ್ಮದಿನ ಹತ್ತಿರ ಬರುತ್ತಿದ್ದಂತೆಯೇ ಬಿಜೆಪಿ ಎಚ್ಚೆತ್ತುಕೊಂಡಿದೆ. ಒಂದು ಕಾಲದಲ್ಲಿ ಯಡಿಯೂರಪ್ಪ, ಜಗಧೀಶ್‌ ಶೆಟ್ಟರ್‍, ಆರ್‌ ಆಶೋಕ್‌ ಸೇರಿದಂತೆ ಬಿಜೆಪಿ ಘಟಾನುಘಟಿ ನಾಯಕರು ಟಿಪ್ಪು ಜಯಂತಿ ಮಾಡಿ, ಟಿಪ್ಪು ಥರ ವೇಷ ಹಾಕಿ ಖಡ್ಗ ಹಿಡಿದು ಪೋಸು ಕೊಟ್ಟಿದ್ದವರು ಇಂದು ಟಿಪ್ಪು ಹೆಸರೇಳಿದರೆ ಮುನಿಸಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಶಾಲಾ ಪಠ್ಯಗಳಲ್ಲಿ ಟಿಪ್ಪು ಪಠ್ಯಗಳನ್ನು ಕೈಬಿಡುತ್ತೇವೆ. ಒಂದು ಸಾಲು ಸಹ ಟಿಪ್ಪು ಬಗ್ಗೆ ಇರುವುದಿಲ್ಲ. ಟಿಪ್ಪು ಇತಿಹಾಸ ತೆಗೆದುಹಾಕುವುದು 101% ಖಾತ್ರಿ ಎಂದು ಘೋಷಿಸಿದ್ದಾರೆ.

ಈಗಾಗಲೇ ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಆದರೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮಾತ್ರ ಮೊದಲು ನೆರೆ ಪರಿಹಾರ ಕೊಡಿ ನಂತರ ಸಾವರ್ಕರ್‌, ಟಿಪ್ಪು ವಿಚಾರ ಮಾತಾಡೋಣ ಎಂಬ ಜಾಣತನ ಪ್ರದರ್ಶಿಸಿದ್ದಾರೆ.

ಮತ್ತಷ್ಟು ಜನ ಬಿಜೆಪಿ ತೋಡಿರುವ ಟ್ರಾಪ್‌ಗೆ ಬೀಳಬೇಡಿ. ಟಿಪ್ಪು ವಿಚಾರ ಮುನ್ನಲೆಗೆ ತಂದು ಅಸಲಿ ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಬುದ್ದಿವಾದ ಹೇಳುತ್ತಿದ್ದಾರೆ.

ಆದರೂ ಸಾಕಷ್ಟು ಜನ ಟಿಪ್ಪುವಿನ ಸಾಧನೆಗಳು, ಟಿಪ್ಪುವಿನ ಇತಿಹಾಸ, ಟಿಪ್ಪುವಿನ ಕೊಡುಗೆಗಳ ಬಗ್ಗೆ, ಬಿಜೆಪಿಯವರ ಇಬ್ಬಗೆ ನೀತಿಯ ಬಗ್ಗೆ ಬರೆಯತೊಡಗಿದ್ದಾರೆ.

ಇನ್ನು ನವೆಂಬರ್ 17ರಂದು ಬಾಬ್ರೀ ಮಸೀದಿ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಹೊರಬರಲಿದೆ. ಆಗಲೂ ಕೋಮುಗಳ ನಡುವೆ ದ್ವೇಷ ಬಿತ್ತುವ ಕೆಲಸ ಆರಂಭವಾಗಲಿದೆ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಬಹುತೇಕ ಪ್ರಜ್ಞಾವಂತರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...