Homeಕರ್ನಾಟಕನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ?

- Advertisement -
- Advertisement -

ಕರ್ನಾಟಕಕ್ಕೆ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ನೆರೆ ಅಪ್ಪಳಿಸಿದೆ. ಅರ್ಧ ಕರ್ನಾಟಕ ಪ್ರವಾಹದಿಂದಾಗಿ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ್ಪಕ ಪರಿಹಾರ ಕೊಟ್ಟಿಲ್ಲ ಎಂಬ ದೂರು ಕೇಳಿಬಂದಿದೆ. ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆಗಳು ಎದುರಾಗಿವೆ.

ಇಂತಹ ಸಂದರ್ಭದಲ್ಲಿ ನೆರೆ ಪರಿಹಾರ ಕೊಡಲಾಗದ ಬಿಜೆಪಿ ಜನರನ್ನು ಡೈವರ್ಟ್‌ ಮಾಡಲು ಟಿಪ್ಪು ವಿಷಯ ಮುನ್ನಲೆಗೆ ತಂದಿದೆಯೇ? ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ನೆರೆ ಪರಿಹಾರ ಕೊಡದವರು ಟಿಪ್ಪು ಬಗ್ಗೆ ಮಾತಾಡುತ್ತಾರೆ ಎಂದು ನಾಗರಾಜೇಗೌಡ ನಾಗೇಗೌಡರವರು ಅಭಿಪ್ರಾಯಪಟ್ಟಿದ್ದಾರೆ.

“ಸಾವರ್ಕರ್ ಮನೆಗೆ ಟಿಪ್ಪು ಮುನ್ನಲೆಗೆ. ಇದು ಕಣ್ರೋ ರಾಜಕೀಯ ಅಂದ್ರೆ ನಾವು ಕಲಿಯೋದು ಇನ್ನೂ ಬಾಳ ಇದೆ.” ಎಂದು ರಾಮಚಂದ್ರ ಕಲ್ಲೇರ್‌ರವರು ಸಿಡಿಮಿಡಿಗೊಂಡಿದ್ದಾರೆ.

ನೆರೆ ಸಂತ್ರಸ್ತರಿಗೆ ಪರಿಹಾರ ಹಾಗೂ ಅನರ್ಹ ಶಾಸಕರ ಸ್ಥಾನಕ್ಕೆ ನಡೆಯುವ ಉಪಚುನಾವಣೆ ಗೆಲ್ಲಲು ಟಿಪ್ಪು ಸುಲ್ತಾನ್ ಬರಬೇಕಾಯ್ತು ನೊಡಿ ಎಂದು ಜುಬೈರ್‌ ಎಂಬುವವರು ವ್ಯಂಗ್ಯವಾಡಿದ್ದಾರೆ.

ನವೆಂಬರ್ 10 ಟಿಪ್ಪು ಜನ್ಮದಿನ ಹತ್ತಿರ ಬರುತ್ತಿದ್ದಂತೆಯೇ ಬಿಜೆಪಿ ಎಚ್ಚೆತ್ತುಕೊಂಡಿದೆ. ಒಂದು ಕಾಲದಲ್ಲಿ ಯಡಿಯೂರಪ್ಪ, ಜಗಧೀಶ್‌ ಶೆಟ್ಟರ್‍, ಆರ್‌ ಆಶೋಕ್‌ ಸೇರಿದಂತೆ ಬಿಜೆಪಿ ಘಟಾನುಘಟಿ ನಾಯಕರು ಟಿಪ್ಪು ಜಯಂತಿ ಮಾಡಿ, ಟಿಪ್ಪು ಥರ ವೇಷ ಹಾಕಿ ಖಡ್ಗ ಹಿಡಿದು ಪೋಸು ಕೊಟ್ಟಿದ್ದವರು ಇಂದು ಟಿಪ್ಪು ಹೆಸರೇಳಿದರೆ ಮುನಿಸಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಶಾಲಾ ಪಠ್ಯಗಳಲ್ಲಿ ಟಿಪ್ಪು ಪಠ್ಯಗಳನ್ನು ಕೈಬಿಡುತ್ತೇವೆ. ಒಂದು ಸಾಲು ಸಹ ಟಿಪ್ಪು ಬಗ್ಗೆ ಇರುವುದಿಲ್ಲ. ಟಿಪ್ಪು ಇತಿಹಾಸ ತೆಗೆದುಹಾಕುವುದು 101% ಖಾತ್ರಿ ಎಂದು ಘೋಷಿಸಿದ್ದಾರೆ.

ಈಗಾಗಲೇ ಈ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಆದರೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮಾತ್ರ ಮೊದಲು ನೆರೆ ಪರಿಹಾರ ಕೊಡಿ ನಂತರ ಸಾವರ್ಕರ್‌, ಟಿಪ್ಪು ವಿಚಾರ ಮಾತಾಡೋಣ ಎಂಬ ಜಾಣತನ ಪ್ರದರ್ಶಿಸಿದ್ದಾರೆ.

ಮತ್ತಷ್ಟು ಜನ ಬಿಜೆಪಿ ತೋಡಿರುವ ಟ್ರಾಪ್‌ಗೆ ಬೀಳಬೇಡಿ. ಟಿಪ್ಪು ವಿಚಾರ ಮುನ್ನಲೆಗೆ ತಂದು ಅಸಲಿ ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ಬುದ್ದಿವಾದ ಹೇಳುತ್ತಿದ್ದಾರೆ.

ಆದರೂ ಸಾಕಷ್ಟು ಜನ ಟಿಪ್ಪುವಿನ ಸಾಧನೆಗಳು, ಟಿಪ್ಪುವಿನ ಇತಿಹಾಸ, ಟಿಪ್ಪುವಿನ ಕೊಡುಗೆಗಳ ಬಗ್ಗೆ, ಬಿಜೆಪಿಯವರ ಇಬ್ಬಗೆ ನೀತಿಯ ಬಗ್ಗೆ ಬರೆಯತೊಡಗಿದ್ದಾರೆ.

ಇನ್ನು ನವೆಂಬರ್ 17ರಂದು ಬಾಬ್ರೀ ಮಸೀದಿ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಹೊರಬರಲಿದೆ. ಆಗಲೂ ಕೋಮುಗಳ ನಡುವೆ ದ್ವೇಷ ಬಿತ್ತುವ ಕೆಲಸ ಆರಂಭವಾಗಲಿದೆ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಬಹುತೇಕ ಪ್ರಜ್ಞಾವಂತರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...