Homeಕರ್ನಾಟಕನಿಲ್ಲದ ಮಳೆ, ಜಲಾಶಯಗಳಿಂದ ಮತ್ತಷ್ಟು ನೀರು ಹೊರಕ್ಕೆ: ತುರ್ತು ಎಚ್ಚರಿಕೆ ನೀಡಿದ ನೀರಾವರಿ ನಿಗಮ

ನಿಲ್ಲದ ಮಳೆ, ಜಲಾಶಯಗಳಿಂದ ಮತ್ತಷ್ಟು ನೀರು ಹೊರಕ್ಕೆ: ತುರ್ತು ಎಚ್ಚರಿಕೆ ನೀಡಿದ ನೀರಾವರಿ ನಿಗಮ

- Advertisement -
- Advertisement -

ಮಹಾರಾಷ್ಟ್ರದಿಂದ ಹರಿದುಬರುತ್ತಿರುವ ಜಲದೊಂದಿಗೆ ಬೆಳಗಾವಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಕ್ಷರಶಃ ಪ್ರವಾಹ ಉಂಟಾಗಿದೆ. ಈ ನಡುವೆ ಧುಪದಾಳ ಸೇರಿದಂತೆ ಹಲವು ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿದ್ದು ಕಾಲುವೆ ತೀರಗಳಲ್ಲಿ ಜನ ಓಡಾಡಬಾರದೆಂದು ಕರ್ನಾಟಕ ನಿರಾವರಿ ನಿಗಮ ನಿಯಮಿತ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ತುರ್ತು ಪತ್ರ ಬರೆಯಲಾಗಿದೆ.

ಈಗಾಗಲೇ ಧುಪದಾಳ ಜಲಾಶಯಕ್ಕೆ ಘಟಪ್ರಭಾ ಮತ್ತು ಹಿರಣ್ಯಕೇಶಿ ನದಿಯಿಂದ ಭಾರೀ ನೀರು ಹರಿದುಬರುತ್ತಿರುವುದರಿಂದ ಕಾಲುವೆಗಳಿಗೆ ಮತ್ತಷ್ಟು ನೀರು ಬಿಡುವುದು ಅನಿವಾರ್ಯವಾಗಿದ್ದು ಜನ ಎಚ್ಚರಿಕೆಯಿಂದರಬೇಕು ಮತ್ತು ಜನ ಜಾನುವಾರುಗಳ ಪ್ರಾಣ ಕಾಪಾಡಲು ನಿಗಾ ವಹಿಸಲು ಕೋರಿದ್ದಾರೆ.

ತುಂಬಿ ಹರಿಯುತ್ತಿದೆ ಭೀಮಾತೀರ: ಬರ ಎದುರಿಸುತ್ತಿರುವ ಬಿಜಾಪುರ
ಉತ್ತರ ಕರ್ನಾಟಕ, ಮಲೆನಾಡು ದಕ್ಷಿಣ ಕನ್ನಡ ಉತ್ತರ ಕರ್ನಾಟಕ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಎಲ್ಲೆಡೆ ಪ್ರವಾಹ ಉಂಟಾಗಿ ಜನರನ್ನು ಗಂಜಿ ಕೇಂದ್ರಕ್ಕೆ ರವಾನಿಸಲಾಗಿದೆ. ಮತ್ತು ಇದುವರೆಗೆ 60 ಕ್ಕೂ ಹೆಚ್ಚು ಜನ ಬೆಳಗಾವಿ ಪ್ರವಾಹದಲ್ಲಿ ಕಾಣೆ ಆಗಿದ್ದು, ಶಿವಮೊಗ್ಗ ಜಿಲ್ಲೆಯ ಓರ್ವ ಮಹಿಳೆ ತುಂಗೆಯಲ್ಲಿ ಹರಿದು ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇನ್ನು ಭೀಮಾ ತೀರಕ್ಕೆ ಬರುವುದಾದರೆ ದೇವಣಗಾಂವ, ತಾರಾಪೂರ, ತಾವರಖೇಡ, ಬ್ಯಾಡಗಿಹಾಳ, ಕಡ್ಲೇವಾಡ, ಶಂಬೇವಾಡ, ಬಗಲೂರ, ಗ್ರಾಮಗಳು ಭೀಮಾ ನದಿ ನೀರಿನ ಪ್ರವಾಹದಲ್ಲಿ  ಸಿಲುಕುವ ಅಪಾಯದಲ್ಲಿವೆ. ದೇವಣಗಾಂವ ಭೀಮಾ ಸೇತುವೆ ಮಾಪನ ಪಟ್ಟಿ ಯಲ್ಲಿ ಸದ್ಯ 7.5 ಮೀ.ನೀರು ಹರಿಯುತ್ತಿದ್ದು ಹಂತ ಹಂತವಾಗಿ ನೀರು ಏರುತ್ತಾ ಸಾಗಿರುವದರಿಂದ ಸಂಜೆ ವೇಳೆಗೆ 8 ಮೀ ದಾಟುವ ಸಾಧ್ಯತೆ ಇದೆ 8 ಮೀ.ಕ್ಕೂ ಹೆಚ್ಚು ನೀರು ನದಿಯಲ್ಲಿ ಹರಿದರೆ ಅದು ಅಪಾಯದ ಮಟ್ಟ ಎಂದು ಗುರುತಿಸಲಾಗಿದೆ. ಆದ್ದರಿಂದ ಭೀಮಾ ನದಿ ತೀರದ ಜನರಲ್ಲಿ  ಆತಂಕ ಮನೆ ಮಾಡಿದೆ. ಮತ್ತು ಉಳಿದಂತೆ ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಏರಿಕೆ ಕಂಡಿದೆ.

ಬಿಜಾಪುರ ಜಿಲ್ಲೆಯಲ್ಲಿ ಮಳೆನೇ ಇಲ್ಲ? 
ಇನ್ನೂ ಉತ್ತರ ಕರ್ನಾಟಕದ 4 ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಇದ್ದರೆ  ಗುಮ್ಮಟ ನಗರಿ ವಿಜಯಪುರದಲ್ಲಿ  ಮಳೆ ಆಗುವ ಯಾವ ಲಕ್ಷಣ ಕಾಣುತ್ತಿಲ್ಲ ಸ್ಥಳೀಯರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...