Homeಕರ್ನಾಟಕನಿಲ್ಲದ ಮಳೆ, ಜಲಾಶಯಗಳಿಂದ ಮತ್ತಷ್ಟು ನೀರು ಹೊರಕ್ಕೆ: ತುರ್ತು ಎಚ್ಚರಿಕೆ ನೀಡಿದ ನೀರಾವರಿ ನಿಗಮ

ನಿಲ್ಲದ ಮಳೆ, ಜಲಾಶಯಗಳಿಂದ ಮತ್ತಷ್ಟು ನೀರು ಹೊರಕ್ಕೆ: ತುರ್ತು ಎಚ್ಚರಿಕೆ ನೀಡಿದ ನೀರಾವರಿ ನಿಗಮ

- Advertisement -
- Advertisement -

ಮಹಾರಾಷ್ಟ್ರದಿಂದ ಹರಿದುಬರುತ್ತಿರುವ ಜಲದೊಂದಿಗೆ ಬೆಳಗಾವಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಕ್ಷರಶಃ ಪ್ರವಾಹ ಉಂಟಾಗಿದೆ. ಈ ನಡುವೆ ಧುಪದಾಳ ಸೇರಿದಂತೆ ಹಲವು ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿದ್ದು ಕಾಲುವೆ ತೀರಗಳಲ್ಲಿ ಜನ ಓಡಾಡಬಾರದೆಂದು ಕರ್ನಾಟಕ ನಿರಾವರಿ ನಿಗಮ ನಿಯಮಿತ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ತುರ್ತು ಪತ್ರ ಬರೆಯಲಾಗಿದೆ.

ಈಗಾಗಲೇ ಧುಪದಾಳ ಜಲಾಶಯಕ್ಕೆ ಘಟಪ್ರಭಾ ಮತ್ತು ಹಿರಣ್ಯಕೇಶಿ ನದಿಯಿಂದ ಭಾರೀ ನೀರು ಹರಿದುಬರುತ್ತಿರುವುದರಿಂದ ಕಾಲುವೆಗಳಿಗೆ ಮತ್ತಷ್ಟು ನೀರು ಬಿಡುವುದು ಅನಿವಾರ್ಯವಾಗಿದ್ದು ಜನ ಎಚ್ಚರಿಕೆಯಿಂದರಬೇಕು ಮತ್ತು ಜನ ಜಾನುವಾರುಗಳ ಪ್ರಾಣ ಕಾಪಾಡಲು ನಿಗಾ ವಹಿಸಲು ಕೋರಿದ್ದಾರೆ.

ತುಂಬಿ ಹರಿಯುತ್ತಿದೆ ಭೀಮಾತೀರ: ಬರ ಎದುರಿಸುತ್ತಿರುವ ಬಿಜಾಪುರ
ಉತ್ತರ ಕರ್ನಾಟಕ, ಮಲೆನಾಡು ದಕ್ಷಿಣ ಕನ್ನಡ ಉತ್ತರ ಕರ್ನಾಟಕ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಎಲ್ಲೆಡೆ ಪ್ರವಾಹ ಉಂಟಾಗಿ ಜನರನ್ನು ಗಂಜಿ ಕೇಂದ್ರಕ್ಕೆ ರವಾನಿಸಲಾಗಿದೆ. ಮತ್ತು ಇದುವರೆಗೆ 60 ಕ್ಕೂ ಹೆಚ್ಚು ಜನ ಬೆಳಗಾವಿ ಪ್ರವಾಹದಲ್ಲಿ ಕಾಣೆ ಆಗಿದ್ದು, ಶಿವಮೊಗ್ಗ ಜಿಲ್ಲೆಯ ಓರ್ವ ಮಹಿಳೆ ತುಂಗೆಯಲ್ಲಿ ಹರಿದು ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇನ್ನು ಭೀಮಾ ತೀರಕ್ಕೆ ಬರುವುದಾದರೆ ದೇವಣಗಾಂವ, ತಾರಾಪೂರ, ತಾವರಖೇಡ, ಬ್ಯಾಡಗಿಹಾಳ, ಕಡ್ಲೇವಾಡ, ಶಂಬೇವಾಡ, ಬಗಲೂರ, ಗ್ರಾಮಗಳು ಭೀಮಾ ನದಿ ನೀರಿನ ಪ್ರವಾಹದಲ್ಲಿ  ಸಿಲುಕುವ ಅಪಾಯದಲ್ಲಿವೆ. ದೇವಣಗಾಂವ ಭೀಮಾ ಸೇತುವೆ ಮಾಪನ ಪಟ್ಟಿ ಯಲ್ಲಿ ಸದ್ಯ 7.5 ಮೀ.ನೀರು ಹರಿಯುತ್ತಿದ್ದು ಹಂತ ಹಂತವಾಗಿ ನೀರು ಏರುತ್ತಾ ಸಾಗಿರುವದರಿಂದ ಸಂಜೆ ವೇಳೆಗೆ 8 ಮೀ ದಾಟುವ ಸಾಧ್ಯತೆ ಇದೆ 8 ಮೀ.ಕ್ಕೂ ಹೆಚ್ಚು ನೀರು ನದಿಯಲ್ಲಿ ಹರಿದರೆ ಅದು ಅಪಾಯದ ಮಟ್ಟ ಎಂದು ಗುರುತಿಸಲಾಗಿದೆ. ಆದ್ದರಿಂದ ಭೀಮಾ ನದಿ ತೀರದ ಜನರಲ್ಲಿ  ಆತಂಕ ಮನೆ ಮಾಡಿದೆ. ಮತ್ತು ಉಳಿದಂತೆ ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಏರಿಕೆ ಕಂಡಿದೆ.

ಬಿಜಾಪುರ ಜಿಲ್ಲೆಯಲ್ಲಿ ಮಳೆನೇ ಇಲ್ಲ? 
ಇನ್ನೂ ಉತ್ತರ ಕರ್ನಾಟಕದ 4 ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಇದ್ದರೆ  ಗುಮ್ಮಟ ನಗರಿ ವಿಜಯಪುರದಲ್ಲಿ  ಮಳೆ ಆಗುವ ಯಾವ ಲಕ್ಷಣ ಕಾಣುತ್ತಿಲ್ಲ ಸ್ಥಳೀಯರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...