Homeಕರ್ನಾಟಕನಿಲ್ಲದ ಮಳೆ, ಜಲಾಶಯಗಳಿಂದ ಮತ್ತಷ್ಟು ನೀರು ಹೊರಕ್ಕೆ: ತುರ್ತು ಎಚ್ಚರಿಕೆ ನೀಡಿದ ನೀರಾವರಿ ನಿಗಮ

ನಿಲ್ಲದ ಮಳೆ, ಜಲಾಶಯಗಳಿಂದ ಮತ್ತಷ್ಟು ನೀರು ಹೊರಕ್ಕೆ: ತುರ್ತು ಎಚ್ಚರಿಕೆ ನೀಡಿದ ನೀರಾವರಿ ನಿಗಮ

- Advertisement -
- Advertisement -

ಮಹಾರಾಷ್ಟ್ರದಿಂದ ಹರಿದುಬರುತ್ತಿರುವ ಜಲದೊಂದಿಗೆ ಬೆಳಗಾವಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಕ್ಷರಶಃ ಪ್ರವಾಹ ಉಂಟಾಗಿದೆ. ಈ ನಡುವೆ ಧುಪದಾಳ ಸೇರಿದಂತೆ ಹಲವು ಜಲಾಶಯಗಳಿಂದ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿದ್ದು ಕಾಲುವೆ ತೀರಗಳಲ್ಲಿ ಜನ ಓಡಾಡಬಾರದೆಂದು ಕರ್ನಾಟಕ ನಿರಾವರಿ ನಿಗಮ ನಿಯಮಿತ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ತುರ್ತು ಪತ್ರ ಬರೆಯಲಾಗಿದೆ.

ಈಗಾಗಲೇ ಧುಪದಾಳ ಜಲಾಶಯಕ್ಕೆ ಘಟಪ್ರಭಾ ಮತ್ತು ಹಿರಣ್ಯಕೇಶಿ ನದಿಯಿಂದ ಭಾರೀ ನೀರು ಹರಿದುಬರುತ್ತಿರುವುದರಿಂದ ಕಾಲುವೆಗಳಿಗೆ ಮತ್ತಷ್ಟು ನೀರು ಬಿಡುವುದು ಅನಿವಾರ್ಯವಾಗಿದ್ದು ಜನ ಎಚ್ಚರಿಕೆಯಿಂದರಬೇಕು ಮತ್ತು ಜನ ಜಾನುವಾರುಗಳ ಪ್ರಾಣ ಕಾಪಾಡಲು ನಿಗಾ ವಹಿಸಲು ಕೋರಿದ್ದಾರೆ.

ತುಂಬಿ ಹರಿಯುತ್ತಿದೆ ಭೀಮಾತೀರ: ಬರ ಎದುರಿಸುತ್ತಿರುವ ಬಿಜಾಪುರ
ಉತ್ತರ ಕರ್ನಾಟಕ, ಮಲೆನಾಡು ದಕ್ಷಿಣ ಕನ್ನಡ ಉತ್ತರ ಕರ್ನಾಟಕ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದ್ದು, ಬೆಳಗಾವಿ ಜಿಲ್ಲೆಯ ಎಲ್ಲೆಡೆ ಪ್ರವಾಹ ಉಂಟಾಗಿ ಜನರನ್ನು ಗಂಜಿ ಕೇಂದ್ರಕ್ಕೆ ರವಾನಿಸಲಾಗಿದೆ. ಮತ್ತು ಇದುವರೆಗೆ 60 ಕ್ಕೂ ಹೆಚ್ಚು ಜನ ಬೆಳಗಾವಿ ಪ್ರವಾಹದಲ್ಲಿ ಕಾಣೆ ಆಗಿದ್ದು, ಶಿವಮೊಗ್ಗ ಜಿಲ್ಲೆಯ ಓರ್ವ ಮಹಿಳೆ ತುಂಗೆಯಲ್ಲಿ ಹರಿದು ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇನ್ನು ಭೀಮಾ ತೀರಕ್ಕೆ ಬರುವುದಾದರೆ ದೇವಣಗಾಂವ, ತಾರಾಪೂರ, ತಾವರಖೇಡ, ಬ್ಯಾಡಗಿಹಾಳ, ಕಡ್ಲೇವಾಡ, ಶಂಬೇವಾಡ, ಬಗಲೂರ, ಗ್ರಾಮಗಳು ಭೀಮಾ ನದಿ ನೀರಿನ ಪ್ರವಾಹದಲ್ಲಿ  ಸಿಲುಕುವ ಅಪಾಯದಲ್ಲಿವೆ. ದೇವಣಗಾಂವ ಭೀಮಾ ಸೇತುವೆ ಮಾಪನ ಪಟ್ಟಿ ಯಲ್ಲಿ ಸದ್ಯ 7.5 ಮೀ.ನೀರು ಹರಿಯುತ್ತಿದ್ದು ಹಂತ ಹಂತವಾಗಿ ನೀರು ಏರುತ್ತಾ ಸಾಗಿರುವದರಿಂದ ಸಂಜೆ ವೇಳೆಗೆ 8 ಮೀ ದಾಟುವ ಸಾಧ್ಯತೆ ಇದೆ 8 ಮೀ.ಕ್ಕೂ ಹೆಚ್ಚು ನೀರು ನದಿಯಲ್ಲಿ ಹರಿದರೆ ಅದು ಅಪಾಯದ ಮಟ್ಟ ಎಂದು ಗುರುತಿಸಲಾಗಿದೆ. ಆದ್ದರಿಂದ ಭೀಮಾ ನದಿ ತೀರದ ಜನರಲ್ಲಿ  ಆತಂಕ ಮನೆ ಮಾಡಿದೆ. ಮತ್ತು ಉಳಿದಂತೆ ಆಲಮಟ್ಟಿ ಜಲಾಶಯದ ನೀರಿನ ಮಟ್ಟ ಏರಿಕೆ ಕಂಡಿದೆ.

ಬಿಜಾಪುರ ಜಿಲ್ಲೆಯಲ್ಲಿ ಮಳೆನೇ ಇಲ್ಲ? 
ಇನ್ನೂ ಉತ್ತರ ಕರ್ನಾಟಕದ 4 ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಇದ್ದರೆ  ಗುಮ್ಮಟ ನಗರಿ ವಿಜಯಪುರದಲ್ಲಿ  ಮಳೆ ಆಗುವ ಯಾವ ಲಕ್ಷಣ ಕಾಣುತ್ತಿಲ್ಲ ಸ್ಥಳೀಯರು ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...