Homeಮುಖಪುಟದೆಹಲಿಯಲ್ಲಿ ಮಿತಿ ಮೀರಿದ ಪ್ರವಾಹ ಪರಿಸ್ಥಿತಿ, ಅಪಾಯದ ಮಟ್ಟ ತಲುಪಿದ ಯಮುನಾ ನದಿ - ಕಾರಣಗಳೇನು?

ದೆಹಲಿಯಲ್ಲಿ ಮಿತಿ ಮೀರಿದ ಪ್ರವಾಹ ಪರಿಸ್ಥಿತಿ, ಅಪಾಯದ ಮಟ್ಟ ತಲುಪಿದ ಯಮುನಾ ನದಿ – ಕಾರಣಗಳೇನು?

- Advertisement -
- Advertisement -

ಕಳೆದೆರಡು ದಿನಗಳಿಂದ ಮಳೆಯಾಗದಿದ್ದರೂ ಸಹ ದೆಹಲಿಯ ಯಮುನಾ ನದಿ ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ. ಏಕೆಂದರೆ ಪಕ್ಕದ ಹರಿಯಾಣದಲ್ಲಿ ಹೆಚ್ಚಿನ ಮಳೆಯಾಗಿದ್ದು, ಹಥ್ನಿ ಕುಂಡ್ ಬ್ಯಾರೇಜ್‌ನಿಂದ ನೀರು ಬಿಡುತ್ತಿರುವುದರಿಂದ ದೆಹಲಿಯ ರಸ್ತೆಗಳು ನೀರಿನಿಂದ ಆವೃತವಾಗು ಪರಿಸ್ಥಿತಿ ಎದುರಾಗಿದೆ. ದೆಹಲಿಯಿಂದ 180 ಕಿ.ಮೀ ದೂರದಲ್ಲಿರುವ ಈ ಬ್ಯಾರೇಜ್‌ನಿಂದ ಪ್ರತಿ ವರ್ಷದ ಮಾನ್ಸೂನ್ ವೇಳೆ ಈ ಹಥ್ನಿ ಕುಂಡ್ ಬ್ಯಾರೇಜ್‌ನಿಂದ ಬಿಡುತ್ತಿದ್ದರೂ ಸಹ ಈ ಬಾರಿ ಅತಿ ಹೆಚ್ಚಿನ ಮಳೆಯಾಗಿರುವುದರಿಂದ ದೆಹಲಿ ನೀರಿನಿಂದ ಆವೃತವಾಗುವ ಪರಸ್ಥಿತಿ ಎದುರಾಗಿದೆ. ಪರಿಣಾಮ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೇಂದ್ರ ಜಲ ಆಯೋಗದ ಅಧಿಕಾರಿಗಳ ಪ್ರಕಾರ, ಈ ವರ್ಷ ಹಥ್ನಿ ಕುಂಡ್ ಬ್ಯಾರೇಜ್‌ನಿಂದ ಬಿಡುಗಡೆಯಾದ ನೀರು ಅತಿ ಕಡಿಮೆ ಸಮಯದಲ್ಲಿ ದೆಹಲಿ ತಲುಪಿದೆ ಎನ್ನಲಾಗಿದೆ. ಏಕೆಂದರೆ ನದಿ ಪಾತ್ರದ ಪ್ರವಾಹದ ಪ್ರದೇಶದ ಅತಿಕ್ರಮಣವಾಗಿರುವುದು, ನದಿಯ ಹೂಳೆತ್ತದೆ ಇರುವುದರಿಂದ ನೀರು ಅತಿ ಬೇಗನೆ ತಲುಪಿ ಪ್ರವಾಹ ಉಂಟಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ದೆಹಲಿಯು ಶನಿವಾರ ಮತ್ತು ಭಾನುವಾರದಂದು ವಿಪರೀತ ಮಳೆಗೆ ಸಾಕ್ಷಿಯಾಯಿತು. 40 ವರ್ಷಗಳಲ್ಲಿ ಜುಲೈ ತಿಂಗಳಿನಲ್ಲಿ ಅತಿ ಹೆಚ್ಚಿನ ಮಳೆಯನ್ನು ದೆಹಲಿ ದಾಖಲಿಸಿದೆ. ದೆಹಲಿಯಲ್ಲಿ ಶನಿವಾರ 100 ಮಿ.ಮೀ ಮಳೆಯಾದರೆ, ಭಾನುವಾರ ಬೆಳಗ್ಗೆ 8.30ಕ್ಕೆ 153 ಮಿ.ಮೀ ಮಳೆ ದಾಖಲಾಗಿದೆ. ಇಷ್ಟು ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ಪ್ರವಾಹಕ್ಕೆ ಕಾರಣವಾಗಿದೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹತ್ನಿಕುಂಡ್ ಬ್ಯಾರೇಜ್‌ನಿಂದ ಬಿಡುಗಡೆಯಾದ ನೀರು ದೆಹಲಿಗೆ ತಲುಪಲು ಕಡಿಮೆ ಸಮಯ ತೆಗೆದುಕೊಂಡಿರುವುದನ್ನು ನಾವು ಗಮನಿಸಿದ್ದೇವೆ. ಅತಿಕ್ರಮಣ ಮತ್ತು ಹೂಳು ತುಂಬಿರುವುದು ಮುಖ್ಯ ಕಾರಣ. ಮೊದಲು ನೀರು ಹರಿಯಲು ಹೆಚ್ಚು ಸ್ಥಳಾವಕಾಶವನ್ನು ಹೊಂದಿತ್ತು. ಸುಮಾರು 180 ಕಿಲೋಮೀಟರ್ ದೂರದಲ್ಲಿರುವ ಹರಿಯಾಣದ ಯಮುನಾನಗರದ ಬ್ಯಾರೇಜ್‌ನಿಂದ ನೀರು ದೆಹಲಿಯನ್ನು ತಲುಪಲು ಸುಮಾರು ಎರಡರಿಂದ ಮೂರು ದಿನಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಈಗ ಬೇಗನೇ ಹರಿದುಬಂದಿದ್ದು ಪ್ರವಾಹಕ್ಕೆ ಕಾರಣವಾಗಿದೆ ಎಂದು ಜಲ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರವರು ಗೃಹ ಸಚಿವ ಅಮಿತ್‌ ಶಾರವರಿಗೆ ಪತ್ರ ಬರೆದಿದ್ದು, ಜಿ20 ಸಮ್ಮೇಳನ ನಡೆಯುವುದರಿಂದ ಹಥ್ನಿ ಕುಂಡ್ ಬ್ಯಾರೇಜ್‌ನಿಂದ ನಿಧಾನಗತಿಯಿಂದ ನೀರು ಹರಿಸಬೇಕೆಂದು ಮನವಿ ಮಾಡಿದ್ದಾರೆ.

“ಅಗತ್ಯವಿಲ್ಲದಿದ್ದರೆ ಜನರು ಹೊರಗೆ ಹೋಗಬೇಡಿ ಮತ್ತು ಮನೆಯಿಂದ ಕೆಲಸ ಮಾಡುವಂತೆ ನಾನು ವಿನಂತಿಸುತ್ತೇನೆ. ನಾವು ಪೀಡಿತ ಪ್ರದೇಶಗಳಲ್ಲಿ ಶಾಲೆಗಳನ್ನು ಮುಚ್ಚಿದ್ದೇವೆ. ನಾವು ಪರಿಹಾರ ಶಿಬಿರಗಳಲ್ಲಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸುತ್ತಿದ್ದೇವೆ. ಮಧ್ಯಾಹ್ನದ ವೇಳೆಗೆ ಪ್ರವಾಹ ಪರಿಸ್ಥಿತಿ ತಗ್ಗುವ ಸಂಭವವಿದೆ ಎಂದು ಜಲ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ: ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...