Homeಕರ್ನಾಟಕಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

ಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ 100 ಕೆರೆಗಳು ಭರ್ತಿಯಾಗಿವೆ ಎಂದು ವರದಿಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳ ಸದಸ್ಯರು ಮಾತನಾಡಿ, ಕೆರೆಗಳು ಅಪಾಯದ ಅಂಚಿನಲ್ಲಿದ್ದು, ಇನ್ನೂ ಕೂಡಾ ಮಳೆಯಾದರೆ ಪ್ರವಾಹ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರವಾಹದ ಭೀತಿ

”ಸದ್ಯ ನಗರದಲ್ಲಿ ನರೆಯಾಗಿದ್ದು ಕೆರೆಗಳು ತುಂಬಿದ ಕಾರಣಕ್ಕೆ ಅಲ್ಲ, ಬದಲಾಗಿ ಮುಚ್ಚಿರು ಚರಂಡಿ ಮತ್ತು ಒತ್ತುವರಿಯ ಕಾರಣಕ್ಕೆ ಆಗಿದೆ. ನಗರದ ಬಹುತೇಕ ಕೆರೆಗಳು ಭರ್ತಿಯಾಗಿದ್ದು ಇದೇ ಮೊದಲಲ್ಲ. ಆದರೆ ಮಳೆಯ ತೀವ್ರತೆ ಇದೇ ರೀತಿ ಮುಂದುವರಿದರೆ ತೊಂದರೆಯಾಗಲಿದೆ” ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರದವರೆಗೆ ಸುಮಾರು 80-85 ಕೆರೆಗಳು ತುಂಬಿದ್ದವು, ಆದರೆ ಈಗ ಬುಧವಾರದಂದು ಇದರ ಸಂಖ್ಯೆ 100 ಕ್ಕೆ ತಲುಪಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಕ್ಷೇತ್ರ ಎಂಜಿನಿಯರ್‌ಗಳಿಂದ ನಿಯಮಿತವಾಗಿ ಗ್ರೌಂಡ್ ರಿಪೋರ್ಟ್ ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಕಲ್ಕೆರೆ, ರಾಮಾಪುರ ಸೇರಿದಂತೆ ಯಲಹಂಕ ಮತ್ತು ಮಹದೇವಪುರದ ಎಲ್ಲ ಸಣ್ಣ ಮತ್ತು ಮಧ್ಯಮ ಗಾತ್ರದ ಕೆರೆಗಳು ತುಂಬಿವೆ. ನಗರದ ಇತರ ಭಾಗಗಳಾದ ಮಡಿವಾಳ, ಬನ್ನೇರುಘಟ್ಟದ ಕೆರೆಗಳೂ ತುಂಬಿವೆ ಎಂದು ಅವರು ಹೇಳಿದ್ದಾರೆ.

ಬೊಮ್ಮನಹಳ್ಳಿಯಂತೆ ಸುಮಾರು 10-15 ಕೆರೆಗಳು ಇನ್ನೂ ತುಂಬಿಲ್ಲ. ಅದರ ಮೇಲೂ ತೀವ್ರ ನಿಗಾ ಇರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 80 ರಷ್ಟು ಕೆರೆಗಳ ಹೂಳು ತೆಗೆದು ಸ್ವಚ್ಛಗೊಳಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಉಳಿದವುಗಳು ಭರ್ತಿಯಾಗಿರುವುದರಿಂದ ಈಗ ಕೆಲಸ ಕಷ್ಟಕರವಾಗಿದೆ ಅವರು ತಿಳಿಸಿದ್ದಾರೆ.

ಈ ನಡುವೆ, ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಪ್ರದೇಶಕ್ಕೆ ಬುಧವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದಾರೆ. ಭಾರಿ ಮಳೆಯ ಕಾರಣಕ್ಕೆ ಪ್ರವಾಹ ಇದ್ದರೂ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 20 ಫ್ಲ್ಯಾಟ್‌ಗಳ ಮಾಲೀಕರು ಒಳಗೆ ಬೀಗ ಜಡಿದು ತೆರವಿಗೆ ನಿರಾಕರಿಸಿದ್ದರಿಂದ ಬಾಗಿಲು ಒಡೆದು ಒಳನುಗ್ಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚಿಸಿದ್ದಾರೆ. ಪ್ರವಾಹದ ಭೀತಿ

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “95%ದಷ್ಟು ತೆರವು ಕಾರ್ಯ ಪೂರ್ಣಗೊಂಡಿದ್ದು, 5%ದಷ್ಟು ಮಾತ್ರ ಬಾಕಿ ಇದೆ. 603 ಫ್ಲಾಟ್‌ಗಳಲ್ಲಿ ಸಾವಿರಾರು ಜನರು ವಾಸಿಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕೇಂದ್ರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಾಗಿವೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಅಪಾರ್ಟ್‌ಮೆಂಟ್‌ನ ಆಡಳಿತದೊಂದಿಗೆ ಮಾತುಕತೆ ನಡೆಸಿ ತುರ್ತು ಕಾರ್ಯಾಚರಣೆಗಾಗಿ ಬಿಬಿಎಂಪಿ ಅಪಾರ್ಟ್ಮೆಂಟ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

“ನೀರು, ವಿದ್ಯುತ್ ಮತ್ತು ಆಹಾರ ಇಲ್ಲದೆ, ಮನೆಯೊಳಗೆ ಬೀಗ ಹಾಕಿಕೊಂಡಿರುವ ಸುಮಾರು 20 ಫ್ಲ್ಯಾಟ್ ಇವೆ. ಅದರಲ್ಲಿರುವ ಜನರ ಆರೋಗ್ಯಕ್ಕೆ ಅಪಾಯ ಇರುವುದರಿಂದ ಒಕ್ಕಲಿಗರ ಸಂಘ ಮತ್ತು ಪೊಲೀಸರ ನೆರವು ಪಡೆದು ಬಾಗಿಲು ಒಡೆದು ಅವರನ್ನು ರಕ್ಷಿಸಲು ಬಿಬಿಎಂಪಿಗೆ ಆದೇಶ ನೀಡಲಾಗಿದೆ’’ ಎಂದು ಶಿವಕುಮಾರ್ ಹೇಳಿದ್ದಾರೆ.

ನಿವಾಸಿಗಳು ತಮ್ಮ ಮನೆಗಳೊಂದಿಗೆ ಇರುವ ಭಾವನಾತ್ಮಕ ಸಂಬಂಧದ ಕಾರಣಕ್ಕೆ ಅದರಿಂದ ಹೊರಗೆ ಬರಲು ನಿರಾಕರಿಸಿರಬಹುದು, ಆದರೆ ಅವರ ಸುರಕ್ಷತೆಯೂ ನಮಗೆ ಮುಖ್ಯ ಎಂದು ಅವರು ಹೇಳಿದ್ದಾರೆ. ಅವರನ್ನು ಒಂದು ವಾರದವರೆಗೆ ಹತ್ತಿರದ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಮತ್ತು ಪರಿಸ್ಥಿತಿ ಸಹಜವಾದ ನಂತರ ಅವರನ್ನು ತಮ್ಮ ಮನೆಗಳಿಗೆ ಹಿಂತಿರುಗುವಂತೆ ಕೇಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...