Homeಮುಖಪುಟಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ಕೋಸಿ, ಬುಧಿ ಗಂಡಕ್, ಕಮಲಾ ಬಾಲನ್, ಮತ್ತು ಲಾಲ್ ಬಕೇಯ ಮುಂತಾದ ನದಿಗಳು ಅನೇಕ ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

- Advertisement -
- Advertisement -

ಅಸ್ಸಾಂ, ಬಿಹಾರ, ಉತ್ತರಾಖಂಡ, ಮತ್ತು ಉತ್ತರ ಪ್ರದೇಶದ ಪ್ರವಾಹ ಪರಿಸ್ಥಿತಿ ಗುರುವಾರ (ಜುಲೈ 23) ಹದಗೆಟ್ಟಿದ್ದು, ಅಸ್ಸಾಂ ಮತ್ತು ಬಿಹಾರದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.

ಒಟ್ಟು 16 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಅಸ್ಸಾಂ ಮತ್ತು 20 ಬಿಹಾರದಲ್ಲಿ ನಿಯೋಜಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಎಸ್. ಎನ್. ಪ್ರಧಾನ್ ತಿಳಿಸಿದ್ದಾರೆ.

ಅಸ್ಸಾಂನ 26 ಜಿಲ್ಲೆಗಳಲ್ಲಿನ 26 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರವಾಹದಲ್ಲಿ 89 ಜನರು ಹಾಗೂ ಭೂಕುಸಿತದಲ್ಲಿ 26 ಸಾವುಗಳು ಸೇರಿದಂತೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತದಲ್ಲಿ ರಾಜ್ಯದಾದ್ಯಂತ ಪ್ರಾಣ ಕಳೆದುಕೊಂಡ ಒಟ್ಟು ಜನರ ಸಂಖ್ಯೆ 115 ಕ್ಕೆ ಏರಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ನೀಡಿರುವ ಬುಧವಾರದ ವರದಿಯ ಪ್ರಕಾರ, ಮೊರಿಗಾಂವ್ ಜಿಲ್ಲೆಯ ಬಾರ್‌ಪೆಟಾದ ಬಾಗ್‌ಬೋರ್ ಮತ್ತು ಮೊರಿಗಾಂವ್ ವಲಯದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಗೋಲ್ಪಾರವು 4.68 ಲಕ್ಷಕ್ಕೂ ಹೆಚ್ಚು ಪ್ರವಾಹ ಪೀಡಿತ ಜನರಿರುವ ಜಿಲ್ಲೆಯಾಗಿದ್ದು, ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಬಾರ್‌ಪೆಟಾದಲ್ಲಿ 3.82 ಲಕ್ಷ ಜನರು ಮತ್ತು ಮೊರಿಗಾಂವ್ ನಲ್ಲಿ 3.08 ಲಕ್ಷ ಜನರು ಭಾಧಿತರಾಗಿದ್ದಾರೆ. ಗೋವಾ ಮೌಜಾದ ಮೇಘಾಲಯದಿಂದ ಹರಿಯುವ ನದಿಯ ನೀರಿನ ಮಟ್ಟ ಹಠಾತ್ ಹೆಚ್ಚಳವಾಗಿದ್ದರಿಂದ ರಾತ್ರಿಯಿಡೀ ನೂರಾರು ಜನರು ನಿರಾಶ್ರಿತರಾದರು.

“ಇದು ಹಠಾತ್ತನೆ ಬಂದೆರಗಿದ ಪ್ರವಾಹವಾಗಿದ್ದು. ನಾವು ಸಧ್ಯಕ್ಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರಸ್ತುತ ಇಲ್ಲಿ ನೀರು ಕಡಿಮೆಯಾಗಿದೆ ಆದರೆ ಇನ್ನೊಂದು ತುದಿಯಲ್ಲಿ ಹೆಚ್ಚುತ್ತಿದೆ” ಎಂದು ಪ್ರವಾಹದಿಂದ ಬದುಕುಳಿದ ರಂಜಿತ್ ಬೈಶ್ನಾಬ್ ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ವೃದ್ಧರು, ಮಕ್ಕಳೂ ಸೇರಿದಂತೆ ಸ್ಥಳಾಂತರಿಸಲ್ಪಟ್ಟವರೆಲ್ಲರೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ವರದಿಯಾಗಿದೆ.

ಮೊರಿಗಾಂವ್ ಜಿಲ್ಲೆಯ 300 ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹ ಪೀಡಿತವಾಗಿವೆ. ಮೊರಿಗಾಂವ್‌ನ ಮಾಯೊಂಗ್ ವೃತ್ತವು ಹೆಚ್ಚು ಪೀಡಿತ ಗ್ರಾಮಗಳಲ್ಲಿ ಒಂದಾಗಿದೆ.

ಬುಧವಾರ ರಾತ್ರಿಯ ಹೊತ್ತಿಗೆ, ಅಸ್ಸಾಂನಾದ್ಯಂತ 2,525 ಹಳ್ಳಿಗಳು ನೀರಿನಲ್ಲಿ ಮುಳುಗಿದ್ದು, 1.15 ಲಕ್ಷಕ್ಕೂ ಹೆಚ್ಚಿನ ಹೆಕ್ಟೇರ್ ಬೆಳೆ  ನಾಶವಾಗಿದೆ ಎಂದು ASDMA ತಿಳಿಸಿದೆ.

ಪ್ರವಾಹವು ಇಲ್ಲಿಯವರೆಗೆ 120 ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಾದ್ಯಂತ 23,89,401 ಸಾಕು ಪ್ರಾಣಿಗಳು ಮತ್ತು ಕೋಳಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಆರಂಭಿಕ ಅನುದಾನವಾಗಿ ಕೇಂದ್ರವು ಶೀಘ್ರದಲ್ಲೇ 346 ಕೋಟಿ ಬಿಡುಗಡೆ ಮಾಡಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರೊಂದಿಗೆ ವಿವರವಾದ ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಅವರು ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಅದು ಹೇಳಿದೆ.

ಆದರೆ ಈ ದೀರ್ಘಕಾಲಿಕ ಸಮಸ್ಯೆಯನ್ನು ನಿಭಾಯಿಸಲು ಹಿಂದೆ ಘೋಷಿಸಿದ ಹಣವನ್ನೇ ಬಿಡುಗಡೆ ಮಾಡದಿರುವ ಮೂಲಕ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಎಐಯುಡಿಎಫ್ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ, ಬಿಹಾರದ 10 ಜಿಲ್ಲೆಗಳಲ್ಲಿ 4.6 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ. 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ ಎಂದು ರಾಜ್ಯ ಸರ್ಕಾರ ವರದಿ ಬಿಡುಗಡೆ ಮಾಡಿದೆ. ಬುಧವಾರದವರೆಗೆ ರಾಜ್ಯದಲ್ಲಿ ಪ್ರವಾಹದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಕೋಸಿ, ಬುಧಿ ಗಂಡಕ್, ಕಮಲಾ ಬಾಲನ್, ಮತ್ತು ಲಾಲ್ ಬಕೇಯ ಮುಂತಾದ ನದಿಗಳು ಅನೇಕ ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.


ಇದನ್ನೂ ಓದಿ: ಬಿಹಾರ: ರಾಜ್ಯದ 8 ಜಿಲ್ಲೆಗಳ 3 ಲಕ್ಷ ಜನರು ಪ್ರವಾಹ ಪೀಡಿತರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...