Homeಮುಖಪುಟಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ಕೋಸಿ, ಬುಧಿ ಗಂಡಕ್, ಕಮಲಾ ಬಾಲನ್, ಮತ್ತು ಲಾಲ್ ಬಕೇಯ ಮುಂತಾದ ನದಿಗಳು ಅನೇಕ ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

- Advertisement -
- Advertisement -

ಅಸ್ಸಾಂ, ಬಿಹಾರ, ಉತ್ತರಾಖಂಡ, ಮತ್ತು ಉತ್ತರ ಪ್ರದೇಶದ ಪ್ರವಾಹ ಪರಿಸ್ಥಿತಿ ಗುರುವಾರ (ಜುಲೈ 23) ಹದಗೆಟ್ಟಿದ್ದು, ಅಸ್ಸಾಂ ಮತ್ತು ಬಿಹಾರದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.

ಒಟ್ಟು 16 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಅಸ್ಸಾಂ ಮತ್ತು 20 ಬಿಹಾರದಲ್ಲಿ ನಿಯೋಜಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಎಸ್. ಎನ್. ಪ್ರಧಾನ್ ತಿಳಿಸಿದ್ದಾರೆ.

ಅಸ್ಸಾಂನ 26 ಜಿಲ್ಲೆಗಳಲ್ಲಿನ 26 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರವಾಹದಲ್ಲಿ 89 ಜನರು ಹಾಗೂ ಭೂಕುಸಿತದಲ್ಲಿ 26 ಸಾವುಗಳು ಸೇರಿದಂತೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತದಲ್ಲಿ ರಾಜ್ಯದಾದ್ಯಂತ ಪ್ರಾಣ ಕಳೆದುಕೊಂಡ ಒಟ್ಟು ಜನರ ಸಂಖ್ಯೆ 115 ಕ್ಕೆ ಏರಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ನೀಡಿರುವ ಬುಧವಾರದ ವರದಿಯ ಪ್ರಕಾರ, ಮೊರಿಗಾಂವ್ ಜಿಲ್ಲೆಯ ಬಾರ್‌ಪೆಟಾದ ಬಾಗ್‌ಬೋರ್ ಮತ್ತು ಮೊರಿಗಾಂವ್ ವಲಯದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಗೋಲ್ಪಾರವು 4.68 ಲಕ್ಷಕ್ಕೂ ಹೆಚ್ಚು ಪ್ರವಾಹ ಪೀಡಿತ ಜನರಿರುವ ಜಿಲ್ಲೆಯಾಗಿದ್ದು, ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಬಾರ್‌ಪೆಟಾದಲ್ಲಿ 3.82 ಲಕ್ಷ ಜನರು ಮತ್ತು ಮೊರಿಗಾಂವ್ ನಲ್ಲಿ 3.08 ಲಕ್ಷ ಜನರು ಭಾಧಿತರಾಗಿದ್ದಾರೆ. ಗೋವಾ ಮೌಜಾದ ಮೇಘಾಲಯದಿಂದ ಹರಿಯುವ ನದಿಯ ನೀರಿನ ಮಟ್ಟ ಹಠಾತ್ ಹೆಚ್ಚಳವಾಗಿದ್ದರಿಂದ ರಾತ್ರಿಯಿಡೀ ನೂರಾರು ಜನರು ನಿರಾಶ್ರಿತರಾದರು.

“ಇದು ಹಠಾತ್ತನೆ ಬಂದೆರಗಿದ ಪ್ರವಾಹವಾಗಿದ್ದು. ನಾವು ಸಧ್ಯಕ್ಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರಸ್ತುತ ಇಲ್ಲಿ ನೀರು ಕಡಿಮೆಯಾಗಿದೆ ಆದರೆ ಇನ್ನೊಂದು ತುದಿಯಲ್ಲಿ ಹೆಚ್ಚುತ್ತಿದೆ” ಎಂದು ಪ್ರವಾಹದಿಂದ ಬದುಕುಳಿದ ರಂಜಿತ್ ಬೈಶ್ನಾಬ್ ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ವೃದ್ಧರು, ಮಕ್ಕಳೂ ಸೇರಿದಂತೆ ಸ್ಥಳಾಂತರಿಸಲ್ಪಟ್ಟವರೆಲ್ಲರೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ವರದಿಯಾಗಿದೆ.

ಮೊರಿಗಾಂವ್ ಜಿಲ್ಲೆಯ 300 ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹ ಪೀಡಿತವಾಗಿವೆ. ಮೊರಿಗಾಂವ್‌ನ ಮಾಯೊಂಗ್ ವೃತ್ತವು ಹೆಚ್ಚು ಪೀಡಿತ ಗ್ರಾಮಗಳಲ್ಲಿ ಒಂದಾಗಿದೆ.

ಬುಧವಾರ ರಾತ್ರಿಯ ಹೊತ್ತಿಗೆ, ಅಸ್ಸಾಂನಾದ್ಯಂತ 2,525 ಹಳ್ಳಿಗಳು ನೀರಿನಲ್ಲಿ ಮುಳುಗಿದ್ದು, 1.15 ಲಕ್ಷಕ್ಕೂ ಹೆಚ್ಚಿನ ಹೆಕ್ಟೇರ್ ಬೆಳೆ  ನಾಶವಾಗಿದೆ ಎಂದು ASDMA ತಿಳಿಸಿದೆ.

ಪ್ರವಾಹವು ಇಲ್ಲಿಯವರೆಗೆ 120 ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಾದ್ಯಂತ 23,89,401 ಸಾಕು ಪ್ರಾಣಿಗಳು ಮತ್ತು ಕೋಳಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಆರಂಭಿಕ ಅನುದಾನವಾಗಿ ಕೇಂದ್ರವು ಶೀಘ್ರದಲ್ಲೇ 346 ಕೋಟಿ ಬಿಡುಗಡೆ ಮಾಡಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರೊಂದಿಗೆ ವಿವರವಾದ ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಅವರು ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಅದು ಹೇಳಿದೆ.

ಆದರೆ ಈ ದೀರ್ಘಕಾಲಿಕ ಸಮಸ್ಯೆಯನ್ನು ನಿಭಾಯಿಸಲು ಹಿಂದೆ ಘೋಷಿಸಿದ ಹಣವನ್ನೇ ಬಿಡುಗಡೆ ಮಾಡದಿರುವ ಮೂಲಕ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಎಐಯುಡಿಎಫ್ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ, ಬಿಹಾರದ 10 ಜಿಲ್ಲೆಗಳಲ್ಲಿ 4.6 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ. 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ ಎಂದು ರಾಜ್ಯ ಸರ್ಕಾರ ವರದಿ ಬಿಡುಗಡೆ ಮಾಡಿದೆ. ಬುಧವಾರದವರೆಗೆ ರಾಜ್ಯದಲ್ಲಿ ಪ್ರವಾಹದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಕೋಸಿ, ಬುಧಿ ಗಂಡಕ್, ಕಮಲಾ ಬಾಲನ್, ಮತ್ತು ಲಾಲ್ ಬಕೇಯ ಮುಂತಾದ ನದಿಗಳು ಅನೇಕ ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.


ಇದನ್ನೂ ಓದಿ: ಬಿಹಾರ: ರಾಜ್ಯದ 8 ಜಿಲ್ಲೆಗಳ 3 ಲಕ್ಷ ಜನರು ಪ್ರವಾಹ ಪೀಡಿತರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...