Homeಮುಖಪುಟಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ಅಸ್ಸಾಂ ಪ್ರವಾಹ: 26 ಜಿಲ್ಲೆಗಳ 26 ಲಕ್ಷ ಜನರು ಸಂಕಷ್ಟದಲ್ಲಿ!

ಕೋಸಿ, ಬುಧಿ ಗಂಡಕ್, ಕಮಲಾ ಬಾಲನ್, ಮತ್ತು ಲಾಲ್ ಬಕೇಯ ಮುಂತಾದ ನದಿಗಳು ಅನೇಕ ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

- Advertisement -
- Advertisement -

ಅಸ್ಸಾಂ, ಬಿಹಾರ, ಉತ್ತರಾಖಂಡ, ಮತ್ತು ಉತ್ತರ ಪ್ರದೇಶದ ಪ್ರವಾಹ ಪರಿಸ್ಥಿತಿ ಗುರುವಾರ (ಜುಲೈ 23) ಹದಗೆಟ್ಟಿದ್ದು, ಅಸ್ಸಾಂ ಮತ್ತು ಬಿಹಾರದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.

ಒಟ್ಟು 16 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಅಸ್ಸಾಂ ಮತ್ತು 20 ಬಿಹಾರದಲ್ಲಿ ನಿಯೋಜಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಎಸ್. ಎನ್. ಪ್ರಧಾನ್ ತಿಳಿಸಿದ್ದಾರೆ.

ಅಸ್ಸಾಂನ 26 ಜಿಲ್ಲೆಗಳಲ್ಲಿನ 26 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಪ್ರವಾಹದಲ್ಲಿ 89 ಜನರು ಹಾಗೂ ಭೂಕುಸಿತದಲ್ಲಿ 26 ಸಾವುಗಳು ಸೇರಿದಂತೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತದಲ್ಲಿ ರಾಜ್ಯದಾದ್ಯಂತ ಪ್ರಾಣ ಕಳೆದುಕೊಂಡ ಒಟ್ಟು ಜನರ ಸಂಖ್ಯೆ 115 ಕ್ಕೆ ಏರಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ASDMA) ನೀಡಿರುವ ಬುಧವಾರದ ವರದಿಯ ಪ್ರಕಾರ, ಮೊರಿಗಾಂವ್ ಜಿಲ್ಲೆಯ ಬಾರ್‌ಪೆಟಾದ ಬಾಗ್‌ಬೋರ್ ಮತ್ತು ಮೊರಿಗಾಂವ್ ವಲಯದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಗೋಲ್ಪಾರವು 4.68 ಲಕ್ಷಕ್ಕೂ ಹೆಚ್ಚು ಪ್ರವಾಹ ಪೀಡಿತ ಜನರಿರುವ ಜಿಲ್ಲೆಯಾಗಿದ್ದು, ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಬಾರ್‌ಪೆಟಾದಲ್ಲಿ 3.82 ಲಕ್ಷ ಜನರು ಮತ್ತು ಮೊರಿಗಾಂವ್ ನಲ್ಲಿ 3.08 ಲಕ್ಷ ಜನರು ಭಾಧಿತರಾಗಿದ್ದಾರೆ. ಗೋವಾ ಮೌಜಾದ ಮೇಘಾಲಯದಿಂದ ಹರಿಯುವ ನದಿಯ ನೀರಿನ ಮಟ್ಟ ಹಠಾತ್ ಹೆಚ್ಚಳವಾಗಿದ್ದರಿಂದ ರಾತ್ರಿಯಿಡೀ ನೂರಾರು ಜನರು ನಿರಾಶ್ರಿತರಾದರು.

“ಇದು ಹಠಾತ್ತನೆ ಬಂದೆರಗಿದ ಪ್ರವಾಹವಾಗಿದ್ದು. ನಾವು ಸಧ್ಯಕ್ಕೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರಸ್ತುತ ಇಲ್ಲಿ ನೀರು ಕಡಿಮೆಯಾಗಿದೆ ಆದರೆ ಇನ್ನೊಂದು ತುದಿಯಲ್ಲಿ ಹೆಚ್ಚುತ್ತಿದೆ” ಎಂದು ಪ್ರವಾಹದಿಂದ ಬದುಕುಳಿದ ರಂಜಿತ್ ಬೈಶ್ನಾಬ್ ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ವೃದ್ಧರು, ಮಕ್ಕಳೂ ಸೇರಿದಂತೆ ಸ್ಥಳಾಂತರಿಸಲ್ಪಟ್ಟವರೆಲ್ಲರೂ ಪರಿಹಾರ ಶಿಬಿರಗಳಲ್ಲಿದ್ದಾರೆ ಎಂದು ವರದಿಯಾಗಿದೆ.

ಮೊರಿಗಾಂವ್ ಜಿಲ್ಲೆಯ 300 ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹ ಪೀಡಿತವಾಗಿವೆ. ಮೊರಿಗಾಂವ್‌ನ ಮಾಯೊಂಗ್ ವೃತ್ತವು ಹೆಚ್ಚು ಪೀಡಿತ ಗ್ರಾಮಗಳಲ್ಲಿ ಒಂದಾಗಿದೆ.

ಬುಧವಾರ ರಾತ್ರಿಯ ಹೊತ್ತಿಗೆ, ಅಸ್ಸಾಂನಾದ್ಯಂತ 2,525 ಹಳ್ಳಿಗಳು ನೀರಿನಲ್ಲಿ ಮುಳುಗಿದ್ದು, 1.15 ಲಕ್ಷಕ್ಕೂ ಹೆಚ್ಚಿನ ಹೆಕ್ಟೇರ್ ಬೆಳೆ  ನಾಶವಾಗಿದೆ ಎಂದು ASDMA ತಿಳಿಸಿದೆ.

ಪ್ರವಾಹವು ಇಲ್ಲಿಯವರೆಗೆ 120 ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ. ರಾಜ್ಯದಾದ್ಯಂತ 23,89,401 ಸಾಕು ಪ್ರಾಣಿಗಳು ಮತ್ತು ಕೋಳಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.

ಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಆರಂಭಿಕ ಅನುದಾನವಾಗಿ ಕೇಂದ್ರವು ಶೀಘ್ರದಲ್ಲೇ 346 ಕೋಟಿ ಬಿಡುಗಡೆ ಮಾಡಲಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಅವರೊಂದಿಗೆ ವಿವರವಾದ ಚರ್ಚೆ ನಡೆಸಿದ್ದು, ಈ ಸಂದರ್ಭದಲ್ಲಿ ಅವರು ಈ ನಿರ್ಧಾರವನ್ನು ತಿಳಿಸಿದ್ದಾರೆ ಎಂದು ಅದು ಹೇಳಿದೆ.

ಆದರೆ ಈ ದೀರ್ಘಕಾಲಿಕ ಸಮಸ್ಯೆಯನ್ನು ನಿಭಾಯಿಸಲು ಹಿಂದೆ ಘೋಷಿಸಿದ ಹಣವನ್ನೇ ಬಿಡುಗಡೆ ಮಾಡದಿರುವ ಮೂಲಕ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಎಐಯುಡಿಎಫ್ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ, ಬಿಹಾರದ 10 ಜಿಲ್ಲೆಗಳಲ್ಲಿ 4.6 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ. 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ ಎಂದು ರಾಜ್ಯ ಸರ್ಕಾರ ವರದಿ ಬಿಡುಗಡೆ ಮಾಡಿದೆ. ಬುಧವಾರದವರೆಗೆ ರಾಜ್ಯದಲ್ಲಿ ಪ್ರವಾಹದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಕೋಸಿ, ಬುಧಿ ಗಂಡಕ್, ಕಮಲಾ ಬಾಲನ್, ಮತ್ತು ಲಾಲ್ ಬಕೇಯ ಮುಂತಾದ ನದಿಗಳು ಅನೇಕ ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.


ಇದನ್ನೂ ಓದಿ: ಬಿಹಾರ: ರಾಜ್ಯದ 8 ಜಿಲ್ಲೆಗಳ 3 ಲಕ್ಷ ಜನರು ಪ್ರವಾಹ ಪೀಡಿತರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...