Homeಮುಖಪುಟಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ.

- Advertisement -
- Advertisement -

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉಂಟಾಗುತ್ತಿರುವ ಪ್ರವಾಹ ಮತ್ತು ಪ್ರವಾಹ ಸಂಬಂಧಿತ ಘಟನೆಗಳಿಂದಾಗಿ ದೇಶಾದ್ಯಂತ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 1.26 ಕೋಟಿ ಜನರು ಬಾಧಿತರಾಗಿದ್ದಾರೆ. ಅಂದಾಜು 5,22,908 ಜನರು ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.

ಮುಖ್ಯವಾಗಿ ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ. ನೇಪಾಳದಿಂದ ನದಿ ಉಕ್ಕಿ ಹರಿಯುವುದರಿಂದ ಬಿಹಾರದ ಹೆಚ್ಚಿನ ಪ್ರದೇಶಗಳು ಮುಳುಗಿ ಪ್ರವಾಹಕ್ಕೆ ಒಳಗಾಗಿವೆ.

ಆಗಸ್ಟ್ 4 ರಂದು ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗವು ಪ್ರಕಟಿಸಿದ ಪರಿಸ್ಥಿತಿ ವರದಿಯ ಪ್ರಕಾರ, 59.68 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದೆ.

1118 ಗ್ರಾಮಗಳಿಗೆ ತೊಂದರೆಯಾಗಿದೆ. ಒಟ್ಟು 4,40,507 ಜನರನ್ನು ಸ್ಥಳಾಂತರಿಸಲಾಗಿದ್ದು, 38 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪರಿಹಾರ ಶಿಬಿರಗಳಲ್ಲಿ ಪ್ರಸ್ತುತ 28,664 ಜನರು ಆಶ್ರಯ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಅಸ್ಸಾಂನಲ್ಲಿ 30 ಜಿಲ್ಲೆಗಳ 56,89,584 ಜನರು ಪ್ರವಾಹದಿಂದ ಬಳಲುತ್ತಿದ್ದಾರೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ 107, ಭೂಕುಸಿತದಿಂದಾಗಿ 26 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ 5,000 ಕ್ಕೂ ಹೆಚ್ಚು ಗ್ರಾಮಗಳು ಬಾಧಿತವಾಗಿದ್ದು, 81,696 ಜನರನ್ನು ಸ್ಥಳಾಂತರಿಸಲಾಗಿದೆ.

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉತ್ತರ ಪ್ರದೇಶದಲ್ಲಿಯೂ ಭಾರಿ ಮಳೆಯಾಗಿದೆ. 16 ಜಿಲ್ಲೆಗಳು ಮತ್ತು 960 ಗ್ರಾಮಗಳಿಂದ ಐದು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಜುಲೈ 1 ರಿಂದ 6 ಜನರು ಸಾವನ್ನಪ್ಪಿದ್ದಾರೆ. 552 ಮನೆಗಳಿಗೆ ಹಾನಿಯಾಗಿದೆ.

956 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 4,340 ಜನರು ಈ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸುಮಾರು 38,000 ಹೆಕ್ಟೇರ್ ಬೆಳೆ ಪ್ರದೇಶ ಹಾನಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಪ್ರಸಕ್ತ ಮಳೆಗಾಲದಲ್ಲಿ 233 ಜನ ಸಾವನ್ನಪ್ಪಿದ್ದು, ಇನ್ನೂ 6 ಜನರು ಕಾಣೆಯಾಗಿದ್ದಾರೆ. ಮೇ 2020 ರಲ್ಲಿ ದಕ್ಷಿಣ ಬಂಗಾಳದ ಮೂಲಕ ಅಮ್ಫಾನ್ ಎಂಬ ಚಂಡಮಾರುತ ಅಪ್ಪಳಿಸಿದಾಗ ಹೆಚ್ಚಿನ ಜನ ಕಳೆದು ಹೋಗಿದ್ದಾರೆ.

23 ಜಿಲ್ಲೆಗಳು ಮತ್ತು 1,868 ಗ್ರಾಮಗಳಿಂದ 2,18,000 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ, ಮತ್ತು 10,000 ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನೂರ ಮೂವತ್ತೆಂಟು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರಸ್ತುತ 13,771 ಜನರಿಗೆ ವಸತಿ ಕಲ್ಪಿಸಲಾಗಿದೆ.

ಈ ನಾಲ್ಕು ರಾಜ್ಯಗಳಲ್ಲದೆ, ಕೇರಳ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ ಕ್ರಮವಾಗಿ 28, 18, ಮತ್ತು 68 ಆಗಿದೆ. 10 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ದೇಶಾದ್ಯಂತ ನೆರವು ನೀಡುತ್ತಿವೆ.

ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ 1.75 ಕೋಟಿಗೂ ಹೆಚ್ಚು ಜನರು ಪ್ರವಾಹದಿಂದ ಪ್ರಭಾವಿತರಾಗಿದ್ದಾರೆ ಮತ್ತು ಸಾಂಕ್ರಾಮಿಕ ರೋಗದಿಂದ ಭಯಕ್ಕೆ ಒಳಗಾಗಿದ್ದಾರೆ. 630 ಕ್ಕೂ ಹೆಚ್ಚು ಜನರು ಭಾರತ, ಬಾಂಗ್ಲಾದೇಶ ಮತ್ತು ನೇಪಾಳದ ಪ್ರಮುಖ ಪ್ರವಾಹದಿಂದ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶದ ಅರ್ಧದಷ್ಟು ಜಿಲ್ಲೆಗಳು ನೀರಿನೊಳಗಿವೆ. ಪ್ರವಾಹದಿಂದಾಗಿ ಸುಮಾರು 1 ಮಿಲಿಯನ್ ಕುಟುಂಬಗಳು ತಮ್ಮ ಹಳ್ಳಿಗಳಲ್ಲಿ ಸಿಕ್ಕಿಹಾಕಿಕೊಂಡಿವೆ. ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 200 ಜನರು ಸತ್ತಿದ್ದಾರೆ.

ಮಳೆಗಾಲದ ಪ್ರವಾಹ ಬಂದರೆ, ದಕ್ಷಿಣ ಏಷ್ಯಾದ ಹೆಚ್ಚಿನ ಜನಸಂಖ್ಯೆಯು ಡೆಂಗ್ಯೂ, ಮಲೇರಿಯಾ, ಲೆಪ್ಟೊಸ್ಪಿರೋಸಿಸ್ ಮತ್ತು ಕಾಲರಾ ಮುಂತಾದ ಕಾಯಿಲೆಗಳಿಗೆ ಗುರಿಯಾಗುತ್ತದೆ.

2019 ರಲ್ಲಿ ಭಾರತದಲ್ಲಿ 1,36,000 ಜನರು ಡೆಂಗ್ಯೂ ಸೋಂಕಿಗೆ ಒಳಗಾಗಿದ್ದರು ಮತ್ತು ಅನೇಕರು ಆಸ್ಪತ್ರೆಗೆ ದಾಖಲಾಗಿದ್ದರು.

ಈ ವರ್ಷದ ಮಾನ್ಸೂನ್ ಗೆ ಮುಂಚಿತವಾಗಿ ಡೆಂಗ್ಯೂ ಮತ್ತು ಮಲೇರಿಯಾ ಮುಂತಾದ ರೋಗಗಳ ಹರಡುವಿಕೆಯನ್ನು ಹೇಗೆ ತಡೆಗಟ್ಟಬಹುದು ಎಂಬ ಬಗ್ಗೆ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಇದನ್ನೂ ಓದಿ: ಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...