Homeಮುಖಪುಟಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ.

- Advertisement -
- Advertisement -

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉಂಟಾಗುತ್ತಿರುವ ಪ್ರವಾಹ ಮತ್ತು ಪ್ರವಾಹ ಸಂಬಂಧಿತ ಘಟನೆಗಳಿಂದಾಗಿ ದೇಶಾದ್ಯಂತ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 1.26 ಕೋಟಿ ಜನರು ಬಾಧಿತರಾಗಿದ್ದಾರೆ. ಅಂದಾಜು 5,22,908 ಜನರು ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.

ಮುಖ್ಯವಾಗಿ ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ. ನೇಪಾಳದಿಂದ ನದಿ ಉಕ್ಕಿ ಹರಿಯುವುದರಿಂದ ಬಿಹಾರದ ಹೆಚ್ಚಿನ ಪ್ರದೇಶಗಳು ಮುಳುಗಿ ಪ್ರವಾಹಕ್ಕೆ ಒಳಗಾಗಿವೆ.

ಆಗಸ್ಟ್ 4 ರಂದು ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗವು ಪ್ರಕಟಿಸಿದ ಪರಿಸ್ಥಿತಿ ವರದಿಯ ಪ್ರಕಾರ, 59.68 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದೆ.

1118 ಗ್ರಾಮಗಳಿಗೆ ತೊಂದರೆಯಾಗಿದೆ. ಒಟ್ಟು 4,40,507 ಜನರನ್ನು ಸ್ಥಳಾಂತರಿಸಲಾಗಿದ್ದು, 38 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪರಿಹಾರ ಶಿಬಿರಗಳಲ್ಲಿ ಪ್ರಸ್ತುತ 28,664 ಜನರು ಆಶ್ರಯ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಅಸ್ಸಾಂನಲ್ಲಿ 30 ಜಿಲ್ಲೆಗಳ 56,89,584 ಜನರು ಪ್ರವಾಹದಿಂದ ಬಳಲುತ್ತಿದ್ದಾರೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ 107, ಭೂಕುಸಿತದಿಂದಾಗಿ 26 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ 5,000 ಕ್ಕೂ ಹೆಚ್ಚು ಗ್ರಾಮಗಳು ಬಾಧಿತವಾಗಿದ್ದು, 81,696 ಜನರನ್ನು ಸ್ಥಳಾಂತರಿಸಲಾಗಿದೆ.

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉತ್ತರ ಪ್ರದೇಶದಲ್ಲಿಯೂ ಭಾರಿ ಮಳೆಯಾಗಿದೆ. 16 ಜಿಲ್ಲೆಗಳು ಮತ್ತು 960 ಗ್ರಾಮಗಳಿಂದ ಐದು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಜುಲೈ 1 ರಿಂದ 6 ಜನರು ಸಾವನ್ನಪ್ಪಿದ್ದಾರೆ. 552 ಮನೆಗಳಿಗೆ ಹಾನಿಯಾಗಿದೆ.

956 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 4,340 ಜನರು ಈ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸುಮಾರು 38,000 ಹೆಕ್ಟೇರ್ ಬೆಳೆ ಪ್ರದೇಶ ಹಾನಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಪ್ರಸಕ್ತ ಮಳೆಗಾಲದಲ್ಲಿ 233 ಜನ ಸಾವನ್ನಪ್ಪಿದ್ದು, ಇನ್ನೂ 6 ಜನರು ಕಾಣೆಯಾಗಿದ್ದಾರೆ. ಮೇ 2020 ರಲ್ಲಿ ದಕ್ಷಿಣ ಬಂಗಾಳದ ಮೂಲಕ ಅಮ್ಫಾನ್ ಎಂಬ ಚಂಡಮಾರುತ ಅಪ್ಪಳಿಸಿದಾಗ ಹೆಚ್ಚಿನ ಜನ ಕಳೆದು ಹೋಗಿದ್ದಾರೆ.

23 ಜಿಲ್ಲೆಗಳು ಮತ್ತು 1,868 ಗ್ರಾಮಗಳಿಂದ 2,18,000 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ, ಮತ್ತು 10,000 ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನೂರ ಮೂವತ್ತೆಂಟು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರಸ್ತುತ 13,771 ಜನರಿಗೆ ವಸತಿ ಕಲ್ಪಿಸಲಾಗಿದೆ.

ಈ ನಾಲ್ಕು ರಾಜ್ಯಗಳಲ್ಲದೆ, ಕೇರಳ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ ಕ್ರಮವಾಗಿ 28, 18, ಮತ್ತು 68 ಆಗಿದೆ. 10 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ದೇಶಾದ್ಯಂತ ನೆರವು ನೀಡುತ್ತಿವೆ.

ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ 1.75 ಕೋಟಿಗೂ ಹೆಚ್ಚು ಜನರು ಪ್ರವಾಹದಿಂದ ಪ್ರಭಾವಿತರಾಗಿದ್ದಾರೆ ಮತ್ತು ಸಾಂಕ್ರಾಮಿಕ ರೋಗದಿಂದ ಭಯಕ್ಕೆ ಒಳಗಾಗಿದ್ದಾರೆ. 630 ಕ್ಕೂ ಹೆಚ್ಚು ಜನರು ಭಾರತ, ಬಾಂಗ್ಲಾದೇಶ ಮತ್ತು ನೇಪಾಳದ ಪ್ರಮುಖ ಪ್ರವಾಹದಿಂದ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶದ ಅರ್ಧದಷ್ಟು ಜಿಲ್ಲೆಗಳು ನೀರಿನೊಳಗಿವೆ. ಪ್ರವಾಹದಿಂದಾಗಿ ಸುಮಾರು 1 ಮಿಲಿಯನ್ ಕುಟುಂಬಗಳು ತಮ್ಮ ಹಳ್ಳಿಗಳಲ್ಲಿ ಸಿಕ್ಕಿಹಾಕಿಕೊಂಡಿವೆ. ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 200 ಜನರು ಸತ್ತಿದ್ದಾರೆ.

ಮಳೆಗಾಲದ ಪ್ರವಾಹ ಬಂದರೆ, ದಕ್ಷಿಣ ಏಷ್ಯಾದ ಹೆಚ್ಚಿನ ಜನಸಂಖ್ಯೆಯು ಡೆಂಗ್ಯೂ, ಮಲೇರಿಯಾ, ಲೆಪ್ಟೊಸ್ಪಿರೋಸಿಸ್ ಮತ್ತು ಕಾಲರಾ ಮುಂತಾದ ಕಾಯಿಲೆಗಳಿಗೆ ಗುರಿಯಾಗುತ್ತದೆ.

2019 ರಲ್ಲಿ ಭಾರತದಲ್ಲಿ 1,36,000 ಜನರು ಡೆಂಗ್ಯೂ ಸೋಂಕಿಗೆ ಒಳಗಾಗಿದ್ದರು ಮತ್ತು ಅನೇಕರು ಆಸ್ಪತ್ರೆಗೆ ದಾಖಲಾಗಿದ್ದರು.

ಈ ವರ್ಷದ ಮಾನ್ಸೂನ್ ಗೆ ಮುಂಚಿತವಾಗಿ ಡೆಂಗ್ಯೂ ಮತ್ತು ಮಲೇರಿಯಾ ಮುಂತಾದ ರೋಗಗಳ ಹರಡುವಿಕೆಯನ್ನು ಹೇಗೆ ತಡೆಗಟ್ಟಬಹುದು ಎಂಬ ಬಗ್ಗೆ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಇದನ್ನೂ ಓದಿ: ಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...