Homeಮುಖಪುಟಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ.

- Advertisement -
- Advertisement -

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉಂಟಾಗುತ್ತಿರುವ ಪ್ರವಾಹ ಮತ್ತು ಪ್ರವಾಹ ಸಂಬಂಧಿತ ಘಟನೆಗಳಿಂದಾಗಿ ದೇಶಾದ್ಯಂತ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 1.26 ಕೋಟಿ ಜನರು ಬಾಧಿತರಾಗಿದ್ದಾರೆ. ಅಂದಾಜು 5,22,908 ಜನರು ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.

ಮುಖ್ಯವಾಗಿ ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ. ನೇಪಾಳದಿಂದ ನದಿ ಉಕ್ಕಿ ಹರಿಯುವುದರಿಂದ ಬಿಹಾರದ ಹೆಚ್ಚಿನ ಪ್ರದೇಶಗಳು ಮುಳುಗಿ ಪ್ರವಾಹಕ್ಕೆ ಒಳಗಾಗಿವೆ.

ಆಗಸ್ಟ್ 4 ರಂದು ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗವು ಪ್ರಕಟಿಸಿದ ಪರಿಸ್ಥಿತಿ ವರದಿಯ ಪ್ರಕಾರ, 59.68 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದೆ.

1118 ಗ್ರಾಮಗಳಿಗೆ ತೊಂದರೆಯಾಗಿದೆ. ಒಟ್ಟು 4,40,507 ಜನರನ್ನು ಸ್ಥಳಾಂತರಿಸಲಾಗಿದ್ದು, 38 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪರಿಹಾರ ಶಿಬಿರಗಳಲ್ಲಿ ಪ್ರಸ್ತುತ 28,664 ಜನರು ಆಶ್ರಯ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಅಸ್ಸಾಂನಲ್ಲಿ 30 ಜಿಲ್ಲೆಗಳ 56,89,584 ಜನರು ಪ್ರವಾಹದಿಂದ ಬಳಲುತ್ತಿದ್ದಾರೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ 107, ಭೂಕುಸಿತದಿಂದಾಗಿ 26 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ 5,000 ಕ್ಕೂ ಹೆಚ್ಚು ಗ್ರಾಮಗಳು ಬಾಧಿತವಾಗಿದ್ದು, 81,696 ಜನರನ್ನು ಸ್ಥಳಾಂತರಿಸಲಾಗಿದೆ.

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉತ್ತರ ಪ್ರದೇಶದಲ್ಲಿಯೂ ಭಾರಿ ಮಳೆಯಾಗಿದೆ. 16 ಜಿಲ್ಲೆಗಳು ಮತ್ತು 960 ಗ್ರಾಮಗಳಿಂದ ಐದು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಜುಲೈ 1 ರಿಂದ 6 ಜನರು ಸಾವನ್ನಪ್ಪಿದ್ದಾರೆ. 552 ಮನೆಗಳಿಗೆ ಹಾನಿಯಾಗಿದೆ.

956 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 4,340 ಜನರು ಈ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸುಮಾರು 38,000 ಹೆಕ್ಟೇರ್ ಬೆಳೆ ಪ್ರದೇಶ ಹಾನಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಪ್ರಸಕ್ತ ಮಳೆಗಾಲದಲ್ಲಿ 233 ಜನ ಸಾವನ್ನಪ್ಪಿದ್ದು, ಇನ್ನೂ 6 ಜನರು ಕಾಣೆಯಾಗಿದ್ದಾರೆ. ಮೇ 2020 ರಲ್ಲಿ ದಕ್ಷಿಣ ಬಂಗಾಳದ ಮೂಲಕ ಅಮ್ಫಾನ್ ಎಂಬ ಚಂಡಮಾರುತ ಅಪ್ಪಳಿಸಿದಾಗ ಹೆಚ್ಚಿನ ಜನ ಕಳೆದು ಹೋಗಿದ್ದಾರೆ.

23 ಜಿಲ್ಲೆಗಳು ಮತ್ತು 1,868 ಗ್ರಾಮಗಳಿಂದ 2,18,000 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ, ಮತ್ತು 10,000 ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನೂರ ಮೂವತ್ತೆಂಟು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರಸ್ತುತ 13,771 ಜನರಿಗೆ ವಸತಿ ಕಲ್ಪಿಸಲಾಗಿದೆ.

ಈ ನಾಲ್ಕು ರಾಜ್ಯಗಳಲ್ಲದೆ, ಕೇರಳ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ ಕ್ರಮವಾಗಿ 28, 18, ಮತ್ತು 68 ಆಗಿದೆ. 10 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ದೇಶಾದ್ಯಂತ ನೆರವು ನೀಡುತ್ತಿವೆ.

ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ 1.75 ಕೋಟಿಗೂ ಹೆಚ್ಚು ಜನರು ಪ್ರವಾಹದಿಂದ ಪ್ರಭಾವಿತರಾಗಿದ್ದಾರೆ ಮತ್ತು ಸಾಂಕ್ರಾಮಿಕ ರೋಗದಿಂದ ಭಯಕ್ಕೆ ಒಳಗಾಗಿದ್ದಾರೆ. 630 ಕ್ಕೂ ಹೆಚ್ಚು ಜನರು ಭಾರತ, ಬಾಂಗ್ಲಾದೇಶ ಮತ್ತು ನೇಪಾಳದ ಪ್ರಮುಖ ಪ್ರವಾಹದಿಂದ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶದ ಅರ್ಧದಷ್ಟು ಜಿಲ್ಲೆಗಳು ನೀರಿನೊಳಗಿವೆ. ಪ್ರವಾಹದಿಂದಾಗಿ ಸುಮಾರು 1 ಮಿಲಿಯನ್ ಕುಟುಂಬಗಳು ತಮ್ಮ ಹಳ್ಳಿಗಳಲ್ಲಿ ಸಿಕ್ಕಿಹಾಕಿಕೊಂಡಿವೆ. ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 200 ಜನರು ಸತ್ತಿದ್ದಾರೆ.

ಮಳೆಗಾಲದ ಪ್ರವಾಹ ಬಂದರೆ, ದಕ್ಷಿಣ ಏಷ್ಯಾದ ಹೆಚ್ಚಿನ ಜನಸಂಖ್ಯೆಯು ಡೆಂಗ್ಯೂ, ಮಲೇರಿಯಾ, ಲೆಪ್ಟೊಸ್ಪಿರೋಸಿಸ್ ಮತ್ತು ಕಾಲರಾ ಮುಂತಾದ ಕಾಯಿಲೆಗಳಿಗೆ ಗುರಿಯಾಗುತ್ತದೆ.

2019 ರಲ್ಲಿ ಭಾರತದಲ್ಲಿ 1,36,000 ಜನರು ಡೆಂಗ್ಯೂ ಸೋಂಕಿಗೆ ಒಳಗಾಗಿದ್ದರು ಮತ್ತು ಅನೇಕರು ಆಸ್ಪತ್ರೆಗೆ ದಾಖಲಾಗಿದ್ದರು.

ಈ ವರ್ಷದ ಮಾನ್ಸೂನ್ ಗೆ ಮುಂಚಿತವಾಗಿ ಡೆಂಗ್ಯೂ ಮತ್ತು ಮಲೇರಿಯಾ ಮುಂತಾದ ರೋಗಗಳ ಹರಡುವಿಕೆಯನ್ನು ಹೇಗೆ ತಡೆಗಟ್ಟಬಹುದು ಎಂಬ ಬಗ್ಗೆ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಇದನ್ನೂ ಓದಿ: ಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...