Homeಕರ್ನಾಟಕಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಈ ವರ್ಷವೂ ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದು ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಸಾವಿರಾರು ಜನ ಬದುಕು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಹಾಗಾಗಿ ಕಳೆದ ಬಾರಿಗಿಂತಲೂ ಈಬಾರಿ ಹೆಚ್ಚಿನ ನಷ್ಟವಾಗಿದ್ದರೂ ಸಹ ರಾಜ್ಯ ಸರ್ಕಾರ ಕಡಿಮೆ ಪರಿಹಾರ ಕೋರಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅ. 16 ರಂದು ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ ಈ ಸಂಕಷ್ಟ ಸಂದರ್ಭದಲ್ಲಿ ನಾವು ಕರ್ನಾಟಕದ ಜನತೆಯೊಟ್ಟಿಗೆ ನಿಲ್ಲುತ್ತೇವೆ ಎಂಬ ಭರವಸೆಯನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ಕಳೆದ ಬಾರಿಯ ಪರಿಹಾರವನ್ನೇ ಬಿಡುಗಡೆ ಮಾಡದ ಪ್ರಧಾನಿ, ಈ ಬಾರಿ ಯಾವ ರೀತಿಯಲ್ಲಿ ಜೊತೆಗಿರುತ್ತಾರೋ ಗೊತ್ತಿಲ್ಲ!

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಕರ್ನಾಟಕದ ಬಿಜೆಪಿ ಸರ್ಕಾರ ಹೆಚ್ಚು ಪರಿಹಾರ ಕೇಳಲು ಹೋಗದೆ ಕಡಿಮೆ ಕೇಳಿ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಕರ್ನಾಟಕದ ಮುಖ್ಯಮಂತ್ರಿಗಳು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಮತ್ತೊಂದು ಟ್ವೀಟ್‌ನಲ್ಲಿ, “ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ಕರ್ನಾಟಕದ ಮುಖ್ಯಮಂತ್ರಿಗಳು, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ 24,941.73 ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಜನ ಪ್ರವಾಹದಿಂದ ನರಳುತ್ತಿರುವಾಗ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಎಚ್ಚರಿಕೆಯ ನೋಟಿಸ್ ನೀಡಿತ್ತು.

ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್…

“ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ. ರಾಜ್ಯದ ಬಿಜೆಪಿ ಸರ್ಕಾರವು ಸಮರ್ಪಕ ಸಮೀಕ್ಷಾ ವರದಿ ಮೂಲಕ ಪ್ರಧಾನಿಯವರ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ” ಎಂದು ಸಲಹೆ ನೀಡಿದ್ದಾರೆ.

ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು

ಇದನ್ನೂ ಓದಿ: ನೆರೆ ಪರಿಹಾರ ನೀಡಲಾಗದ ಹೇಡಿ ಸರ್ಕಾರ ಕರ್ನಾಟಕದಲ್ಲಿದೆ: ಕಾಂಗ್ರೆಸ್ ಆರೋಪ

“ಮಳೆ/ಪ್ರವಾಹ ಬಂದು ಮೂರು ತಿಂಗಳುಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ 51,812 ಸಂತ್ರಸ್ಥರಿಗೆ ನೀಡಿರುವ ಪರಿಹಾರ ಕೇವಲ ರೂ.36,57,79,972 ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ 85,996 ಸಂತ್ರಸ್ತರಿಗೆ 70,70,87,961 ರೂಪಾಯಿ ಪರಿಹಾರ ಇನ್ನಷ್ಟೇ ನೀಡಬೇಕಾಗಿದೆ. ಉಳಿದವರ ಗತಿ ಏನು‌ ಮುಖ್ಯಮಂತ್ರಿಗಳೇ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು ಎಂದು ಸಚಿವ ಮಾಧುಸ್ವಾಮಿ ಉಡಾಫೆಯ ಮಾತುಗಳನ್ನಾಡಿದ್ದರು. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ?

ಇದನ್ನೂ ಓದಿ: ನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

ಈ ಹಿಂದೆಯೂ ಕೂಡ ನೆರೆ ಪರಿಹಾರ ಕೇಳುವುದಕ್ಕೆ ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿ, ರಾಜ್ಯದಿಂದ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡುಹೋಗಿ. ನಿಮಗೆ ಪ್ರಧಾನಿಯ ಬಳಿ ಮಾತನಾಡಲು ಭಯವಾದರೆ, ನಾವೆ ಪರಿಹಾರ ಕೇಳುತ್ತೇವೆ ಎಂದು ಹೇಳಿದ್ದರು.

ಕರ್ನಾಟಕಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪಾಲೂ ನೀಡದೇ ಕೇಂದ್ರ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ರಾಜ್ಯಕ್ಕೆ ಸಿಗಬೇಕಾದ ಯಾವುದೇ ಸೌಲಭ್ಯಗಳೂ ಸರಿಯಾಗಿ ಸಿಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಂದ್ರ ಸರ್ಕಾರದ ಮೇಲೆ ಗರಂ ಆಗಿದ್ದರು. ಆದರೆ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಇದರ ಬಗ್ಗೆ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಇವರ ಪಕ್ಷ ನಿಷ್ಟೆ ನಮ್ಮ ರಾಜ್ಯವನ್ನು ಮತ್ತು ರಾಜ್ಯದ ಜನತೆಯನ್ನು ಬೀದಿಗೆಳೆಯುವದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...