Homeಕರ್ನಾಟಕಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಈ ವರ್ಷವೂ ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದು ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಸಾವಿರಾರು ಜನ ಬದುಕು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಹಾಗಾಗಿ ಕಳೆದ ಬಾರಿಗಿಂತಲೂ ಈಬಾರಿ ಹೆಚ್ಚಿನ ನಷ್ಟವಾಗಿದ್ದರೂ ಸಹ ರಾಜ್ಯ ಸರ್ಕಾರ ಕಡಿಮೆ ಪರಿಹಾರ ಕೋರಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅ. 16 ರಂದು ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ ಈ ಸಂಕಷ್ಟ ಸಂದರ್ಭದಲ್ಲಿ ನಾವು ಕರ್ನಾಟಕದ ಜನತೆಯೊಟ್ಟಿಗೆ ನಿಲ್ಲುತ್ತೇವೆ ಎಂಬ ಭರವಸೆಯನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ಕಳೆದ ಬಾರಿಯ ಪರಿಹಾರವನ್ನೇ ಬಿಡುಗಡೆ ಮಾಡದ ಪ್ರಧಾನಿ, ಈ ಬಾರಿ ಯಾವ ರೀತಿಯಲ್ಲಿ ಜೊತೆಗಿರುತ್ತಾರೋ ಗೊತ್ತಿಲ್ಲ!

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಕರ್ನಾಟಕದ ಬಿಜೆಪಿ ಸರ್ಕಾರ ಹೆಚ್ಚು ಪರಿಹಾರ ಕೇಳಲು ಹೋಗದೆ ಕಡಿಮೆ ಕೇಳಿ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಕರ್ನಾಟಕದ ಮುಖ್ಯಮಂತ್ರಿಗಳು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಮತ್ತೊಂದು ಟ್ವೀಟ್‌ನಲ್ಲಿ, “ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ಕರ್ನಾಟಕದ ಮುಖ್ಯಮಂತ್ರಿಗಳು, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ 24,941.73 ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಜನ ಪ್ರವಾಹದಿಂದ ನರಳುತ್ತಿರುವಾಗ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಎಚ್ಚರಿಕೆಯ ನೋಟಿಸ್ ನೀಡಿತ್ತು.

ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್…

“ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ. ರಾಜ್ಯದ ಬಿಜೆಪಿ ಸರ್ಕಾರವು ಸಮರ್ಪಕ ಸಮೀಕ್ಷಾ ವರದಿ ಮೂಲಕ ಪ್ರಧಾನಿಯವರ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ” ಎಂದು ಸಲಹೆ ನೀಡಿದ್ದಾರೆ.

ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು

ಇದನ್ನೂ ಓದಿ: ನೆರೆ ಪರಿಹಾರ ನೀಡಲಾಗದ ಹೇಡಿ ಸರ್ಕಾರ ಕರ್ನಾಟಕದಲ್ಲಿದೆ: ಕಾಂಗ್ರೆಸ್ ಆರೋಪ

“ಮಳೆ/ಪ್ರವಾಹ ಬಂದು ಮೂರು ತಿಂಗಳುಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ 51,812 ಸಂತ್ರಸ್ಥರಿಗೆ ನೀಡಿರುವ ಪರಿಹಾರ ಕೇವಲ ರೂ.36,57,79,972 ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ 85,996 ಸಂತ್ರಸ್ತರಿಗೆ 70,70,87,961 ರೂಪಾಯಿ ಪರಿಹಾರ ಇನ್ನಷ್ಟೇ ನೀಡಬೇಕಾಗಿದೆ. ಉಳಿದವರ ಗತಿ ಏನು‌ ಮುಖ್ಯಮಂತ್ರಿಗಳೇ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು ಎಂದು ಸಚಿವ ಮಾಧುಸ್ವಾಮಿ ಉಡಾಫೆಯ ಮಾತುಗಳನ್ನಾಡಿದ್ದರು. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ?

ಇದನ್ನೂ ಓದಿ: ನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

ಈ ಹಿಂದೆಯೂ ಕೂಡ ನೆರೆ ಪರಿಹಾರ ಕೇಳುವುದಕ್ಕೆ ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿ, ರಾಜ್ಯದಿಂದ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡುಹೋಗಿ. ನಿಮಗೆ ಪ್ರಧಾನಿಯ ಬಳಿ ಮಾತನಾಡಲು ಭಯವಾದರೆ, ನಾವೆ ಪರಿಹಾರ ಕೇಳುತ್ತೇವೆ ಎಂದು ಹೇಳಿದ್ದರು.

ಕರ್ನಾಟಕಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪಾಲೂ ನೀಡದೇ ಕೇಂದ್ರ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ರಾಜ್ಯಕ್ಕೆ ಸಿಗಬೇಕಾದ ಯಾವುದೇ ಸೌಲಭ್ಯಗಳೂ ಸರಿಯಾಗಿ ಸಿಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಂದ್ರ ಸರ್ಕಾರದ ಮೇಲೆ ಗರಂ ಆಗಿದ್ದರು. ಆದರೆ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಇದರ ಬಗ್ಗೆ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಇವರ ಪಕ್ಷ ನಿಷ್ಟೆ ನಮ್ಮ ರಾಜ್ಯವನ್ನು ಮತ್ತು ರಾಜ್ಯದ ಜನತೆಯನ್ನು ಬೀದಿಗೆಳೆಯುವದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...