Homeಕರ್ನಾಟಕಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಈ ವರ್ಷವೂ ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದು ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಸಾವಿರಾರು ಜನ ಬದುಕು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಹಾಗಾಗಿ ಕಳೆದ ಬಾರಿಗಿಂತಲೂ ಈಬಾರಿ ಹೆಚ್ಚಿನ ನಷ್ಟವಾಗಿದ್ದರೂ ಸಹ ರಾಜ್ಯ ಸರ್ಕಾರ ಕಡಿಮೆ ಪರಿಹಾರ ಕೋರಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅ. 16 ರಂದು ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ ಈ ಸಂಕಷ್ಟ ಸಂದರ್ಭದಲ್ಲಿ ನಾವು ಕರ್ನಾಟಕದ ಜನತೆಯೊಟ್ಟಿಗೆ ನಿಲ್ಲುತ್ತೇವೆ ಎಂಬ ಭರವಸೆಯನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ಕಳೆದ ಬಾರಿಯ ಪರಿಹಾರವನ್ನೇ ಬಿಡುಗಡೆ ಮಾಡದ ಪ್ರಧಾನಿ, ಈ ಬಾರಿ ಯಾವ ರೀತಿಯಲ್ಲಿ ಜೊತೆಗಿರುತ್ತಾರೋ ಗೊತ್ತಿಲ್ಲ!

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಕರ್ನಾಟಕದ ಬಿಜೆಪಿ ಸರ್ಕಾರ ಹೆಚ್ಚು ಪರಿಹಾರ ಕೇಳಲು ಹೋಗದೆ ಕಡಿಮೆ ಕೇಳಿ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಕರ್ನಾಟಕದ ಮುಖ್ಯಮಂತ್ರಿಗಳು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಮತ್ತೊಂದು ಟ್ವೀಟ್‌ನಲ್ಲಿ, “ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ಕರ್ನಾಟಕದ ಮುಖ್ಯಮಂತ್ರಿಗಳು, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ 24,941.73 ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಜನ ಪ್ರವಾಹದಿಂದ ನರಳುತ್ತಿರುವಾಗ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಎಚ್ಚರಿಕೆಯ ನೋಟಿಸ್ ನೀಡಿತ್ತು.

ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್…

“ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ. ರಾಜ್ಯದ ಬಿಜೆಪಿ ಸರ್ಕಾರವು ಸಮರ್ಪಕ ಸಮೀಕ್ಷಾ ವರದಿ ಮೂಲಕ ಪ್ರಧಾನಿಯವರ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ” ಎಂದು ಸಲಹೆ ನೀಡಿದ್ದಾರೆ.

ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು

ಇದನ್ನೂ ಓದಿ: ನೆರೆ ಪರಿಹಾರ ನೀಡಲಾಗದ ಹೇಡಿ ಸರ್ಕಾರ ಕರ್ನಾಟಕದಲ್ಲಿದೆ: ಕಾಂಗ್ರೆಸ್ ಆರೋಪ

“ಮಳೆ/ಪ್ರವಾಹ ಬಂದು ಮೂರು ತಿಂಗಳುಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ 51,812 ಸಂತ್ರಸ್ಥರಿಗೆ ನೀಡಿರುವ ಪರಿಹಾರ ಕೇವಲ ರೂ.36,57,79,972 ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ 85,996 ಸಂತ್ರಸ್ತರಿಗೆ 70,70,87,961 ರೂಪಾಯಿ ಪರಿಹಾರ ಇನ್ನಷ್ಟೇ ನೀಡಬೇಕಾಗಿದೆ. ಉಳಿದವರ ಗತಿ ಏನು‌ ಮುಖ್ಯಮಂತ್ರಿಗಳೇ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು ಎಂದು ಸಚಿವ ಮಾಧುಸ್ವಾಮಿ ಉಡಾಫೆಯ ಮಾತುಗಳನ್ನಾಡಿದ್ದರು. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ?

ಇದನ್ನೂ ಓದಿ: ನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

ಈ ಹಿಂದೆಯೂ ಕೂಡ ನೆರೆ ಪರಿಹಾರ ಕೇಳುವುದಕ್ಕೆ ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿ, ರಾಜ್ಯದಿಂದ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡುಹೋಗಿ. ನಿಮಗೆ ಪ್ರಧಾನಿಯ ಬಳಿ ಮಾತನಾಡಲು ಭಯವಾದರೆ, ನಾವೆ ಪರಿಹಾರ ಕೇಳುತ್ತೇವೆ ಎಂದು ಹೇಳಿದ್ದರು.

ಕರ್ನಾಟಕಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪಾಲೂ ನೀಡದೇ ಕೇಂದ್ರ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ರಾಜ್ಯಕ್ಕೆ ಸಿಗಬೇಕಾದ ಯಾವುದೇ ಸೌಲಭ್ಯಗಳೂ ಸರಿಯಾಗಿ ಸಿಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಂದ್ರ ಸರ್ಕಾರದ ಮೇಲೆ ಗರಂ ಆಗಿದ್ದರು. ಆದರೆ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಇದರ ಬಗ್ಗೆ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಇವರ ಪಕ್ಷ ನಿಷ್ಟೆ ನಮ್ಮ ರಾಜ್ಯವನ್ನು ಮತ್ತು ರಾಜ್ಯದ ಜನತೆಯನ್ನು ಬೀದಿಗೆಳೆಯುವದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...