Homeಕರ್ನಾಟಕಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಈ ವರ್ಷವೂ ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದು ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಸಾವಿರಾರು ಜನ ಬದುಕು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಹಾಗಾಗಿ ಕಳೆದ ಬಾರಿಗಿಂತಲೂ ಈಬಾರಿ ಹೆಚ್ಚಿನ ನಷ್ಟವಾಗಿದ್ದರೂ ಸಹ ರಾಜ್ಯ ಸರ್ಕಾರ ಕಡಿಮೆ ಪರಿಹಾರ ಕೋರಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅ. 16 ರಂದು ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ ಈ ಸಂಕಷ್ಟ ಸಂದರ್ಭದಲ್ಲಿ ನಾವು ಕರ್ನಾಟಕದ ಜನತೆಯೊಟ್ಟಿಗೆ ನಿಲ್ಲುತ್ತೇವೆ ಎಂಬ ಭರವಸೆಯನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ಕಳೆದ ಬಾರಿಯ ಪರಿಹಾರವನ್ನೇ ಬಿಡುಗಡೆ ಮಾಡದ ಪ್ರಧಾನಿ, ಈ ಬಾರಿ ಯಾವ ರೀತಿಯಲ್ಲಿ ಜೊತೆಗಿರುತ್ತಾರೋ ಗೊತ್ತಿಲ್ಲ!

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಕರ್ನಾಟಕದ ಬಿಜೆಪಿ ಸರ್ಕಾರ ಹೆಚ್ಚು ಪರಿಹಾರ ಕೇಳಲು ಹೋಗದೆ ಕಡಿಮೆ ಕೇಳಿ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಕರ್ನಾಟಕದ ಮುಖ್ಯಮಂತ್ರಿಗಳು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಮತ್ತೊಂದು ಟ್ವೀಟ್‌ನಲ್ಲಿ, “ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ಕರ್ನಾಟಕದ ಮುಖ್ಯಮಂತ್ರಿಗಳು, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ 24,941.73 ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಜನ ಪ್ರವಾಹದಿಂದ ನರಳುತ್ತಿರುವಾಗ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಎಚ್ಚರಿಕೆಯ ನೋಟಿಸ್ ನೀಡಿತ್ತು.

ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್…

“ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ. ರಾಜ್ಯದ ಬಿಜೆಪಿ ಸರ್ಕಾರವು ಸಮರ್ಪಕ ಸಮೀಕ್ಷಾ ವರದಿ ಮೂಲಕ ಪ್ರಧಾನಿಯವರ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ” ಎಂದು ಸಲಹೆ ನೀಡಿದ್ದಾರೆ.

ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು

ಇದನ್ನೂ ಓದಿ: ನೆರೆ ಪರಿಹಾರ ನೀಡಲಾಗದ ಹೇಡಿ ಸರ್ಕಾರ ಕರ್ನಾಟಕದಲ್ಲಿದೆ: ಕಾಂಗ್ರೆಸ್ ಆರೋಪ

“ಮಳೆ/ಪ್ರವಾಹ ಬಂದು ಮೂರು ತಿಂಗಳುಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ 51,812 ಸಂತ್ರಸ್ಥರಿಗೆ ನೀಡಿರುವ ಪರಿಹಾರ ಕೇವಲ ರೂ.36,57,79,972 ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ 85,996 ಸಂತ್ರಸ್ತರಿಗೆ 70,70,87,961 ರೂಪಾಯಿ ಪರಿಹಾರ ಇನ್ನಷ್ಟೇ ನೀಡಬೇಕಾಗಿದೆ. ಉಳಿದವರ ಗತಿ ಏನು‌ ಮುಖ್ಯಮಂತ್ರಿಗಳೇ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು ಎಂದು ಸಚಿವ ಮಾಧುಸ್ವಾಮಿ ಉಡಾಫೆಯ ಮಾತುಗಳನ್ನಾಡಿದ್ದರು. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ?

ಇದನ್ನೂ ಓದಿ: ನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

ಈ ಹಿಂದೆಯೂ ಕೂಡ ನೆರೆ ಪರಿಹಾರ ಕೇಳುವುದಕ್ಕೆ ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿ, ರಾಜ್ಯದಿಂದ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡುಹೋಗಿ. ನಿಮಗೆ ಪ್ರಧಾನಿಯ ಬಳಿ ಮಾತನಾಡಲು ಭಯವಾದರೆ, ನಾವೆ ಪರಿಹಾರ ಕೇಳುತ್ತೇವೆ ಎಂದು ಹೇಳಿದ್ದರು.

ಕರ್ನಾಟಕಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪಾಲೂ ನೀಡದೇ ಕೇಂದ್ರ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ರಾಜ್ಯಕ್ಕೆ ಸಿಗಬೇಕಾದ ಯಾವುದೇ ಸೌಲಭ್ಯಗಳೂ ಸರಿಯಾಗಿ ಸಿಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಂದ್ರ ಸರ್ಕಾರದ ಮೇಲೆ ಗರಂ ಆಗಿದ್ದರು. ಆದರೆ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಇದರ ಬಗ್ಗೆ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಇವರ ಪಕ್ಷ ನಿಷ್ಟೆ ನಮ್ಮ ರಾಜ್ಯವನ್ನು ಮತ್ತು ರಾಜ್ಯದ ಜನತೆಯನ್ನು ಬೀದಿಗೆಳೆಯುವದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...