Homeಕರ್ನಾಟಕಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಪ್ರವಾಹ: ಕಳೆದ ಬಾರಿಗಿಂತ ಹೆಚ್ಚು ಬೆಳೆ ನಷ್ಟ; ಕಡಿಮೆ ಪರಿಹಾರ ಕೇಳಿದ ಬಿಜೆಪಿ- ಸಿದ್ದು ಆಕ್ರೋಶ

ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಈ ವರ್ಷವೂ ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದು ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಸಾವಿರಾರು ಜನ ಬದುಕು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಹಾಗಾಗಿ ಕಳೆದ ಬಾರಿಗಿಂತಲೂ ಈಬಾರಿ ಹೆಚ್ಚಿನ ನಷ್ಟವಾಗಿದ್ದರೂ ಸಹ ರಾಜ್ಯ ಸರ್ಕಾರ ಕಡಿಮೆ ಪರಿಹಾರ ಕೋರಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅ. 16 ರಂದು ಕನ್ನಡದಲ್ಲಿ ಟ್ವೀಟ್ ಮಾಡಿರುವ ಮೋದಿ ಈ ಸಂಕಷ್ಟ ಸಂದರ್ಭದಲ್ಲಿ ನಾವು ಕರ್ನಾಟಕದ ಜನತೆಯೊಟ್ಟಿಗೆ ನಿಲ್ಲುತ್ತೇವೆ ಎಂಬ ಭರವಸೆಯನ್ನು ನೀಡುತ್ತೇನೆ ಎಂದು ಹೇಳಿದ್ದಾರೆ. ಕಳೆದ ಬಾರಿಯ ಪರಿಹಾರವನ್ನೇ ಬಿಡುಗಡೆ ಮಾಡದ ಪ್ರಧಾನಿ, ಈ ಬಾರಿ ಯಾವ ರೀತಿಯಲ್ಲಿ ಜೊತೆಗಿರುತ್ತಾರೋ ಗೊತ್ತಿಲ್ಲ!

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಕರ್ನಾಟಕದ ಬಿಜೆಪಿ ಸರ್ಕಾರ ಹೆಚ್ಚು ಪರಿಹಾರ ಕೇಳಲು ಹೋಗದೆ ಕಡಿಮೆ ಕೇಳಿ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಕರ್ನಾಟಕದ ಮುಖ್ಯಮಂತ್ರಿಗಳು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕವು 35,000 ಕೋಟಿ ರೂ ಅಂದಾಜು ನಷ್ಟ ಸೇರಿ ಪರಿಹಾರಕ್ಕೆ ಮನವಿ ಮಾಡಿದ್ದರೆ, ಕೇಂದ್ರವು 1200 ಕೋಟಿ ರೂ ಮತ್ತು 669 ಕೋಟಿ ರೂ ಸೇರಿ ಎರಡು ಕಂತುಗಳಲ್ಲಿ 1869 ಕೋಟಿ ರೂ ಮಾತ್ರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ಮತ್ತೊಂದು ಟ್ವೀಟ್‌ನಲ್ಲಿ, “ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ಕರ್ನಾಟಕದ ಮುಖ್ಯಮಂತ್ರಿಗಳು, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ 24,941.73 ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ಜನ ಪ್ರವಾಹದಿಂದ ನರಳುತ್ತಿರುವಾಗ ಕೇಂದ್ರ ಸರ್ಕಾರ ಪರಿಹಾರ ಹಣ ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಎಚ್ಚರಿಕೆಯ ನೋಟಿಸ್ ನೀಡಿತ್ತು.

ಇದನ್ನೂ ಓದಿ: ನೆರೆ ಮತ್ತು ಬರ ಪರಿಹಾರಕ್ಕೆ ಕರ್ನಾಟಕಕ್ಕೆ ಬೇಕು 1 ಲಕ್ಷ ಕೋಟಿ ರೂಗಳ ವಿಶೇಷ ಪ್ಯಾಕೇಜ್…

“ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಭಾರತದ ಪ್ರಧಾನಮಂತ್ರಿಗಳು ನೀಡಿರುವುದು ರೂ.1652 ಕೋಟಿ ಮಾತ್ರ. ರಾಜ್ಯದ ಬಿಜೆಪಿ ಸರ್ಕಾರವು ಸಮರ್ಪಕ ಸಮೀಕ್ಷಾ ವರದಿ ಮೂಲಕ ಪ್ರಧಾನಿಯವರ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ” ಎಂದು ಸಲಹೆ ನೀಡಿದ್ದಾರೆ.

ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು

ಇದನ್ನೂ ಓದಿ: ನೆರೆ ಪರಿಹಾರ ನೀಡಲಾಗದ ಹೇಡಿ ಸರ್ಕಾರ ಕರ್ನಾಟಕದಲ್ಲಿದೆ: ಕಾಂಗ್ರೆಸ್ ಆರೋಪ

“ಮಳೆ/ಪ್ರವಾಹ ಬಂದು ಮೂರು ತಿಂಗಳುಗಳಾಗುತ್ತಾ ಬಂದರೂ ಇಲ್ಲಿಯ ವರೆಗೆ 51,812 ಸಂತ್ರಸ್ಥರಿಗೆ ನೀಡಿರುವ ಪರಿಹಾರ ಕೇವಲ ರೂ.36,57,79,972 ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ 85,996 ಸಂತ್ರಸ್ತರಿಗೆ 70,70,87,961 ರೂಪಾಯಿ ಪರಿಹಾರ ಇನ್ನಷ್ಟೇ ನೀಡಬೇಕಾಗಿದೆ. ಉಳಿದವರ ಗತಿ ಏನು‌ ಮುಖ್ಯಮಂತ್ರಿಗಳೇ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು ಎಂದು ಸಚಿವ ಮಾಧುಸ್ವಾಮಿ ಉಡಾಫೆಯ ಮಾತುಗಳನ್ನಾಡಿದ್ದರು. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ?

ಇದನ್ನೂ ಓದಿ: ನೆರೆ ಪರಿಹಾರ ಕೊಡಿ ಎಂದ ಯತ್ನಾಳ್‌ಗೆ ಎಚ್ಚರಿಕೆಯ ನೋಟಿಸ್ ಕೊಟ್ಟ ಬಿಜೆಪಿ..

ಈ ಹಿಂದೆಯೂ ಕೂಡ ನೆರೆ ಪರಿಹಾರ ಕೇಳುವುದಕ್ಕೆ ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿ, ರಾಜ್ಯದಿಂದ ಸರ್ವಪಕ್ಷ ನಿಯೋಗವನ್ನು ಕರೆದುಕೊಂಡುಹೋಗಿ. ನಿಮಗೆ ಪ್ರಧಾನಿಯ ಬಳಿ ಮಾತನಾಡಲು ಭಯವಾದರೆ, ನಾವೆ ಪರಿಹಾರ ಕೇಳುತ್ತೇವೆ ಎಂದು ಹೇಳಿದ್ದರು.

ಕರ್ನಾಟಕಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪಾಲೂ ನೀಡದೇ ಕೇಂದ್ರ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ರಾಜ್ಯಕ್ಕೆ ಸಿಗಬೇಕಾದ ಯಾವುದೇ ಸೌಲಭ್ಯಗಳೂ ಸರಿಯಾಗಿ ಸಿಗುತ್ತಿಲ್ಲ ಎಂದು ರಾಜ್ಯದ ಜನತೆ ಕೇಂದ್ರ ಸರ್ಕಾರದ ಮೇಲೆ ಗರಂ ಆಗಿದ್ದರು. ಆದರೆ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ 25 ಜನ ಸಂಸದರು ಇದರ ಬಗ್ಗೆ ಒಂದೇ ಒಂದು ಮಾತನ್ನೂ ಆಡುತ್ತಿಲ್ಲ. ಇವರ ಪಕ್ಷ ನಿಷ್ಟೆ ನಮ್ಮ ರಾಜ್ಯವನ್ನು ಮತ್ತು ರಾಜ್ಯದ ಜನತೆಯನ್ನು ಬೀದಿಗೆಳೆಯುವದರಲ್ಲಿ ಸಂದೇಹವಿಲ್ಲ.


ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...