Homeಕರ್ನಾಟಕಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ ನಿಷೇಧ; ಆದೇಶ ಹಿಂಪಡೆಯುವಂತೆ ಪುಷ್ಪ ಬೆಳೆಗಾರರ ಪ್ರತಿಭಟನೆ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ ನಿಷೇಧ; ಆದೇಶ ಹಿಂಪಡೆಯುವಂತೆ ಪುಷ್ಪ ಬೆಳೆಗಾರರ ಪ್ರತಿಭಟನೆ

- Advertisement -
- Advertisement -

ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನೀಡುವುದನ್ನು ನಿಷೇಧ ಮಾಡಿದ್ದು, ಅವವುಗಳ ಬದಲಿಗೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಕೃಷಿ ರೈತ ಸಂಘಟನೆಗಳು ಬೆಂಗಳೂರಿನ ಹೆಬ್ಬಾಳದ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದೆ.

ಕೊರೊನಾ ಸಂಕಷ್ಟದಿಂದ ಈಗ ತಾನೇ ಚೇತರಿಸಿಕೊಳ್ಳುತ್ತಿರುವ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ರಾಜ್ಯ ಸರ್ಕಾರ ಗಧಾಪ್ರಹಾರ ಮಾಡಿದೆ ಎಂದು ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ ಎಂ ಅರವಿಂದ್‌ ಮಾತನಾಡಿ, “ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್‌ ಅವರು, ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಆದೇಶವನ್ನು ಹೊರಡಿಸಿದ್ದಾರೆ. ಇದು ರಾಜ್ಯದ 7500 ಹೆಕ್ಟೇರ್‌ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ಜನ ರೈತರ ಕುಟುಂಬಗಳ ಮೇಲಿನ ಗಧಾಪ್ರಹಾರವಾಗಿದೆ. ಈ ನಿರ್ಧಾರದ ಹಿಂದೆ ಯಾವುದೇ ವೈಜ್ಞಾನಿಕ ಅಥವಾ ಸಂಶೋಧನಾತ್ಮ ಅಂಶಗಳ ಕಂಡು ಬರುತ್ತಿಲ್ಲ” ಎಂದು ಹೇಳಿದ್ದಾರೆ.

“ಈ ನಿಷೇಧದಿಂದಾಗಿ ಕೊರೊನಾ ಸಂಕಷ್ಟದಿಂದ ತೊಂದರೆಗೀಡಾಗಿರುವ ಪುಷ್ಪ ಬೆಳೆಗಾರರ ಚೇತರಿಕೆ ಮತ್ತಷ್ಟು ನಿಧಾನವಾಗುತ್ತದೆ. ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳು ನಡೆಯದೇ ತೊಂದರೆಗೀಡಾಗಿದ್ದ ರೈತರು ಇನ್ನಷ್ಟು ಕಷ್ಟಕ್ಕೆ ಸಿಲುಕಿಕೊಂಡು ಆತ್ಮಹತ್ಯೆಯಂತಹ ದಾರಿಯನ್ನು ಕಂಡುಕೊಳ್ಳುವಂತಾಗಿದೆ. ಕೋಟ್ಯಾಂತರ ರೂಪಾಯಿಗಳ ಹಣವನ್ನು ತೊಡಗಿಸಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವರು ಬಹಳಷ್ಟು ಸಂಕಷ್ಟಕ್ಕೆ ಬೀಳುವಂತಾಗಿದೆ” ಎಂದು ಹೇಳಿದ್ದಾರೆ.

ಫ್ಲವರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷರಾದ ಶ್ರೀಕಾಂತ್‌ ಬೊಲ್ಲಪಳ್ಳಿ ಮಾತನಾಡಿ, “ಪುಷ್ಪ ಕೃಷಿ ಕ್ಷೇತ್ರ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. 7500 ಹೆಕ್ಟೇರ್‌ ನಷ್ಟು ಭೂಮಿಯಲ್ಲಿ ಗ್ರೀನ್‌ ಹೌಸ್‌ ಮೂಲಕ ಪುಷ್ಪ ಕೃಷಿಯನ್ನು ನಡೆಸಲಾಗುತ್ತಿದೆ. ಅಲ್ಲದೆ, ಇದನ್ನು ಹೊರಪಡಿಸಿ ಲಕ್ಷಾಂತರ ಎಕರೆಗಳಲ್ಲಿ ಹೂವನ್ನು ಬೆಳೆಯಲಾಗುತ್ತಿದೆ.

ಇದನ್ನೂ ಓದಿ: ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ಒಂದು ಎಕರೆಯಲ್ಲಿ ಸುಮಾರು ಆರು ಜನ ಒಂದು ಹೆಕ್ಟೇರ್‌ ನಲ್ಲಿ ಸುಮಾರು 15 ಜನರು ಕಾರ್ಯನಿರ್ವಹಿಸುತ್ತಾರೆ. ಬೆಂಗಳೂರು ನಗರ ದೇಶದ ಪುಷ್ಪೋದ್ಯಮದ ಪ್ರಮುಖ ಹಬ್‌ ಆಗಿದ್ದು, ಬೆಂಗಳೂರಿನಿಂದ ದೇಶ ಹಾಗೂ ವಿದೇಶಕ್ಕೆ ಹೂಗಳು ರಫ್ತಾಗುತ್ತವೆ. ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ನಡೆಸಿದ ಪ್ರತಿಭಟನೆಯಲ್ಲಿ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ರಾಜ್ಯದ ಹೂ ಬೆಳೆಗಾರ ರೈತರು ಹಾಗೂ ಪುಷ್ಪೋದ್ಯಮದಲ್ಲಿ ತೊಡಗಿಕೊಂಡಿರುವ ಲಕ್ಷಾಂತರ ಜನರ ಜೀವನ ಆಧಾರ ಉದ್ಯಮಕ್ಕೆ ಈ ರೀತಿ ಕೊಡಲಿ ಪೆಟ್ಟು ನೀಡುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ‘ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...