Homeಕರ್ನಾಟಕಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ ನಿಷೇಧ; ಆದೇಶ ಹಿಂಪಡೆಯುವಂತೆ ಪುಷ್ಪ ಬೆಳೆಗಾರರ ಪ್ರತಿಭಟನೆ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ ನಿಷೇಧ; ಆದೇಶ ಹಿಂಪಡೆಯುವಂತೆ ಪುಷ್ಪ ಬೆಳೆಗಾರರ ಪ್ರತಿಭಟನೆ

- Advertisement -
- Advertisement -

ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನೀಡುವುದನ್ನು ನಿಷೇಧ ಮಾಡಿದ್ದು, ಅವವುಗಳ ಬದಲಿಗೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಕೃಷಿ ರೈತ ಸಂಘಟನೆಗಳು ಬೆಂಗಳೂರಿನ ಹೆಬ್ಬಾಳದ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದೆ.

ಕೊರೊನಾ ಸಂಕಷ್ಟದಿಂದ ಈಗ ತಾನೇ ಚೇತರಿಸಿಕೊಳ್ಳುತ್ತಿರುವ ರಾಜ್ಯದ ಪುಷ್ಪ ಬೆಳೆಗಾರ ರೈತರ ಮೇಲೆ ರಾಜ್ಯ ಸರ್ಕಾರ ಗಧಾಪ್ರಹಾರ ಮಾಡಿದೆ ಎಂದು ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ 17 ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್-ಆಸ್ಪತ್ರೆ ಇಲ್ಲ: ಪಟ್ಟಭದ್ರರ ಲಾಬಿಗೆ ಕೊರೊನಾ ಉಲ್ಬಣ ಎಂದ ರವಿ ಕೃಷ್ಣಾರೆಡ್ಡಿ

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ ಎಂ ಅರವಿಂದ್‌ ಮಾತನಾಡಿ, “ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ರವಿಕುಮಾರ್‌ ಅವರು, ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಆದೇಶವನ್ನು ಹೊರಡಿಸಿದ್ದಾರೆ. ಇದು ರಾಜ್ಯದ 7500 ಹೆಕ್ಟೇರ್‌ ಪ್ರದೇಶದಲ್ಲಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವ ಸಾವಿರಾರು ಜನ ರೈತರ ಕುಟುಂಬಗಳ ಮೇಲಿನ ಗಧಾಪ್ರಹಾರವಾಗಿದೆ. ಈ ನಿರ್ಧಾರದ ಹಿಂದೆ ಯಾವುದೇ ವೈಜ್ಞಾನಿಕ ಅಥವಾ ಸಂಶೋಧನಾತ್ಮ ಅಂಶಗಳ ಕಂಡು ಬರುತ್ತಿಲ್ಲ” ಎಂದು ಹೇಳಿದ್ದಾರೆ.

“ಈ ನಿಷೇಧದಿಂದಾಗಿ ಕೊರೊನಾ ಸಂಕಷ್ಟದಿಂದ ತೊಂದರೆಗೀಡಾಗಿರುವ ಪುಷ್ಪ ಬೆಳೆಗಾರರ ಚೇತರಿಕೆ ಮತ್ತಷ್ಟು ನಿಧಾನವಾಗುತ್ತದೆ. ವರ್ಷಗಳಿಂದ ಯಾವುದೇ ಸಭೆ ಸಮಾರಂಭಗಳು ನಡೆಯದೇ ತೊಂದರೆಗೀಡಾಗಿದ್ದ ರೈತರು ಇನ್ನಷ್ಟು ಕಷ್ಟಕ್ಕೆ ಸಿಲುಕಿಕೊಂಡು ಆತ್ಮಹತ್ಯೆಯಂತಹ ದಾರಿಯನ್ನು ಕಂಡುಕೊಳ್ಳುವಂತಾಗಿದೆ. ಕೋಟ್ಯಾಂತರ ರೂಪಾಯಿಗಳ ಹಣವನ್ನು ತೊಡಗಿಸಿ ಪುಷ್ಪ ಕೃಷಿಯಲ್ಲಿ ತೊಡಗಿಕೊಂಡಿರುವರು ಬಹಳಷ್ಟು ಸಂಕಷ್ಟಕ್ಕೆ ಬೀಳುವಂತಾಗಿದೆ” ಎಂದು ಹೇಳಿದ್ದಾರೆ.

ಫ್ಲವರ್‌ ಕೌನ್ಸಿಲ್‌ ಆಫ್‌ ಇಂಡಿಯಾದ ಅಧ್ಯಕ್ಷರಾದ ಶ್ರೀಕಾಂತ್‌ ಬೊಲ್ಲಪಳ್ಳಿ ಮಾತನಾಡಿ, “ಪುಷ್ಪ ಕೃಷಿ ಕ್ಷೇತ್ರ ಹೆಚ್ಚಿನ ಉದ್ಯೋಗಾವಕಾಶಗಳನ್ನು ನೀಡುತ್ತಿದೆ. 7500 ಹೆಕ್ಟೇರ್‌ ನಷ್ಟು ಭೂಮಿಯಲ್ಲಿ ಗ್ರೀನ್‌ ಹೌಸ್‌ ಮೂಲಕ ಪುಷ್ಪ ಕೃಷಿಯನ್ನು ನಡೆಸಲಾಗುತ್ತಿದೆ. ಅಲ್ಲದೆ, ಇದನ್ನು ಹೊರಪಡಿಸಿ ಲಕ್ಷಾಂತರ ಎಕರೆಗಳಲ್ಲಿ ಹೂವನ್ನು ಬೆಳೆಯಲಾಗುತ್ತಿದೆ.

ಇದನ್ನೂ ಓದಿ: ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ಒಂದು ಎಕರೆಯಲ್ಲಿ ಸುಮಾರು ಆರು ಜನ ಒಂದು ಹೆಕ್ಟೇರ್‌ ನಲ್ಲಿ ಸುಮಾರು 15 ಜನರು ಕಾರ್ಯನಿರ್ವಹಿಸುತ್ತಾರೆ. ಬೆಂಗಳೂರು ನಗರ ದೇಶದ ಪುಷ್ಪೋದ್ಯಮದ ಪ್ರಮುಖ ಹಬ್‌ ಆಗಿದ್ದು, ಬೆಂಗಳೂರಿನಿಂದ ದೇಶ ಹಾಗೂ ವಿದೇಶಕ್ಕೆ ಹೂಗಳು ರಫ್ತಾಗುತ್ತವೆ. ವಿದೇಶಿ ವಿನಿಮಯ ಹಾಗೂ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಪುಷ್ಪ ಕೃಷಿಗೆ ಈ ರೀತಿ ನಿಷೇಧ ಹೇರುವ ಮೂಲಕ ಹೊಡೆತ ನೀಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ನಡೆಸಿದ ಪ್ರತಿಭಟನೆಯಲ್ಲಿ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ರಾಜ್ಯದ ಹೂ ಬೆಳೆಗಾರ ರೈತರು ಹಾಗೂ ಪುಷ್ಪೋದ್ಯಮದಲ್ಲಿ ತೊಡಗಿಕೊಂಡಿರುವ ಲಕ್ಷಾಂತರ ಜನರ ಜೀವನ ಆಧಾರ ಉದ್ಯಮಕ್ಕೆ ಈ ರೀತಿ ಕೊಡಲಿ ಪೆಟ್ಟು ನೀಡುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ‘ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ‘ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...