Homeಕರ್ನಾಟಕಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನಿಷೇಧ ವಿರೋಧಿಸಿ ನಾಳೆ ಪ್ರತಿಭಟನೆ

ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ ನಿಷೇಧ ವಿರೋಧಿಸಿ ನಾಳೆ ಪ್ರತಿಭಟನೆ

- Advertisement -
- Advertisement -

ಸರ್ಕಾರ ಏರ್ಪಡಿಸುವ ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ ಹಣ್ಣಿನ ಬುಟ್ಟಿ ನಿಷೇಧದ ಆದೇಶವನ್ನು ಹಿಂತೆಗುಕೊಳ್ಳುವಂತೆ ಆಗ್ರಹಿಸಿ ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ಗುರುವಾರ (ಆಗಸ್ಟ್‌ 12) ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಿದ್ದಾರೆ.

ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ ಅವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂದಕ್ಕೆ ತಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ಗುರುವಾರ ಆಗಸ್ಟ್‌ 12 ರಂದು ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜನರ ಜೀವನದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ: ಡಿ.ಕೆ. ಶಿವಕುಮಾರ್

ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶ ರಾಜ್ಯದ ಹೂ ಬೆಳೆಗಾರರು ಹಾಗೂ ರೈತರ ಮೇಲೆ ಗಧಾಪ್ರಹಾರ ವಾಗಿದೆ. ಈ ಆದೇಶವನ್ನು ತಕ್ಷಣ ಹಿಂದಕ್ಕೆ ತೆಗೆದುಕೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌, ನಿರ್ದೇಶಕರಾದ ಶ್ರೀಕಾಂತ್‌ ಬೆಲ್ಲಂಪಳ್ಳಿ, ರಾಜ್ಯದ ಎಲ್ಲಾ ಹೂ ಬೆಳೆಗಾರರು ಮತ್ತು ಮಾರಾಟಗಾರರ ಸಂಘಗಳ ನೇತೃತ್ವದಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯ ಎದುರು ಬೆಳಿಗ್ಗೆ 11.15 ಕ್ಕೆ ಬೃಹತ್‌ ಪ್ರತಿಭಟನೆಯನ್ನು ಆಯೋಜಿಸಲಾಗಿದೆ.

ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಪ್ರಕರಣೆಯಲ್ಲಿ ತಿಳಿಸಲಾಗಿದೆ.

ಇತ್ತ ಸರ್ಕಾರ ಹೊರಡಿಸಿರುವ ಆದೇಶದ ಬೆನ್ನಲ್ಲೇ ಬಿಬಿಎಂಪಿಯೂ ಇದೇ ಕ್ರಮವನ್ನು ಅನುಸರಿಸಿದೆ. ಇನ್ನು ಮುಂದೆ ನಡೆಯುವ ಸಭೆ ಸಮಾರಮಭಗಳಿಗೆ ಹಾರ, ತುರಾಯಿ, ಹಣ್ಣಿನ ಬುಟ್ಟಿ ನಿಷೇಧಿಸಿದೆ.


ಇದನ್ನೂ ಓದಿ: ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ: ಕಾಂಗ್ರೆಸ್ ಆಕ್ರೋಶ, ಕ್ಷಮೆ ಕೇಳಿದ ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...