Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

ಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

- Advertisement -
- Advertisement -

ಬುಧವಾರ (ಮಾರ್ಚ್ 3) ’ಜಾರ್ಜ್ ಫ್ಲಾಯ್ಡ್ ಜಸ್ಟೀಸ್ ಇನ್ ಪೋಲಿಸಿಂಗ್ ಆಕ್ಟ್’ ಅನ್ನು ಅಮೆರಿಕ ಸಂಸತ್ತಿನ ಶಾಸಕರು (ಲಾ ಮೇಕರ್ಸ್) ಅಂಗೀಕರಿಸಿದ್ದಾರೆ. ಇದು ಕಾನೂನು ಜಾರಿಗಾಗಿ ಅರ್ಹವಾದ ವಿನಾಯಿತಿ ಎಂದು ಕರೆಯಲ್ಪಡುವ ಸುಧಾರಣಾ ಮಸೂದೆಯಾಗಿದೆ. ಈ ಮಸೂದೆ ಪೊಲೀಸ್ ದುಷ್ಕೃತ್ಯದ ಘಟನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತದೆ ಎಂದು ಎನ್‌ಪಿಆರ್ ಪೋರ್ಟಲ್ ವರದಿ ಮಾಡಿದೆ.

ಕಳೆದ ವರ್ಷ ಮಿನ್ನಿಯಾಪೋಲಿಸ್ ಅಧಿಕಾರಿಗಳಿಂದ 46 ವರ್ಷದ ಕಪ್ಪು ವ್ಯಕ್ತಿ ಫ್ಲಾಯ್ಡ್ ಕೊಲ್ಲಲ್ಪಟ್ಟ ಒಂಬತ್ತು ತಿಂಗಳ ನಂತರ ಈ ಕಾನೂನು ಅಂಗೀಕಾರವಾಗಿದೆ. ಈ ಶಾಸನವು ಕೆಲವು ಸಂದರ್ಭಗಳಲ್ಲಿ ನೋ-ನಾಕ್ ವಾರಂಟ್‌ಗಳನ್ನು ನಿಷೇಧಿಸುತ್ತದೆ.

ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ದತ್ತಾಂಶ ಸಂಗ್ರಹಣೆಯನ್ನು ಕಡ್ಡಾಯಗೊಳಿಸುತ್ತದೆ, ಜನಾಂಗೀಯ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಅನ್ನು ನಿಷೇಧಿಸುತ್ತದೆ ಮತ್ತು ಸಮುದಾಯ ಆಧಾರಿತ ಪೊಲೀಸ್ ಕಾರ್ಯಕ್ರಮಗಳಿಗೆ ಹಣವನ್ನು ಮರುನಿರ್ದೇಶಿಸುತ್ತದೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

“ನಿರಾಯುಧ ವ್ಯಕ್ತಿಯನ್ನು ಕಾಪಾಡಬೇಕಾದವರು ಇನ್ನೆಂದಿಗೂ ಹತ್ಯೆ ಮಾಡಬಾರದು ಎಂಬ ಉದ್ದೇಶವನ್ನು ಶಾಸನ ಹೊಂದಿದೆ’ ಎಂದು ರಿಪಬ್ಲಿಕನ್ ಕರೆನ್ ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಿನ್ನೇಸೋಟದ ಬೀದಿಗಳಲ್ಲಿ ಜಾರ್ಜ್ ಫ್ಲಾಯ್ಡ್‌ಗೆ ಏನಾಯಿತು ಎಂದು ನಾವು ನೋಡಿದ್ದೇವೆ. ಜಗತ್ತು ಮತ್ತೊಮ್ಮೆ ಅಂಥದ್ದಕ್ಕೆ ಸಾಕ್ಷಿಯಾಗಬಾರದು’ ಎಂದು ಅವರು ತಿಳಿಸಿದ್ದಾರೆ.

ಮತದಾನದ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ, ಮಿನ್ನೇಸೋಟದ ಡೆಮಾಕ್ರಟಿಕ್ ಇಲ್ಹಾನ್ ಒಮರ್, ’ಫ್ಲಾಯ್ಡ್ ಸಾವಿನಿಂದ ಮಿನ್ನಿಯಾಪೋಲಿಸ್ ಪ್ರದೇಶವು ಇನ್ನೂ ಆಘಾತಕ್ಕೊಳಗಾಗಿದೆ. ನಮ್ಮ ಸಮುದಾಯಗಳನ್ನು ರಕ್ಷಿಸಲು ಪ್ರಮಾಣವಚನ ಸ್ವೀಕರಿಸಿದ ಜನರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಮತ್ತೆ ಮತ್ತೆ ನೋಡಿದ್ದೇವೆ” ಎಂದು ಹೇಳಿದರು.

ಕಳೆದ ವರ್ಷ, ಸದನವು ಮಸೂದೆಯ ಇದೇ ರೀತಿಯ ಆವೃತ್ತಿಯನ್ನು ಅಂಗೀಕರಿಸಿತ್ತು. ಆದರೆ ಅದು ರಿಪಬ್ಲಿಕನ್ ನಿಯಂತ್ರಿತ ಸೆನೆಟ್‌ನಲ್ಲಿ ವಿಫಲವಾಗಿತ್ತು. ರಿಪಬ್ಲಿಕನ್ನರು (ಟ್ರಂಪ್ ಪಕ್ಷದವರು), ’ಈ ಶಾಸನವು ಪೊಲೀಸರು ತಮ್ಮ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವುದನ್ನು ತಡೆಯುತ್ತದೆ ಎಂದು ಹೇಳಿದ್ದರು.

George Floyd Death: ಜಾರ್ಜ್ ಫ್ಲಾಯ್ಡ್ ಶವಪರೀಕ್ಷೆಯಲ್ಲಿ ಕಂಡುಬಂದ ಸ್ಫೋಟಕ ಅಂಶಗಳೇನು.? - Kannada Oneindia

ಈ ವಾರದ ಆರಂಭದಲ್ಲಿ, ಬಿಡೆನ್ ಆಡಳಿತವು ಪ್ರಸ್ತಾವನೆಯ ಪರವಾಗಿ ಮತ ಚಲಾಯಿಸುವಂತೆ ಸದನವನ್ನು ಕೋರುವ ಹೇಳಿಕೆ ಬಿಡುಗಡೆ ಮಾಡಿತ್ತು. “ನಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಸಲು, ಕಾನೂನು ಜಾರಿ ಮಾಡುವವರು ಮತ್ತು ಜನರ ನಡುವೆ ವಿಶ್ವಾಸವನ್ನು ಪುನರ್‌ ನಿರ್ಮಿಸುವ ಮೂಲಕ ನಾವು ಪ್ರಾರಂಭಿಸಬೇಕು” ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

“ಅಧಿಕಾರದ ದುರುಪಯೋಗಕ್ಕೆ ನಾವು ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದಿದ್ದರೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ವ್ಯವಸ್ಥಿತ ದುಷ್ಕೃತ್ಯ ಮತ್ತು ವ್ಯವಸ್ಥಿತ ವರ್ಣಭೇದ ನೀತಿಯನ್ನು ನಿಭಾಯಿಸದಿದ್ದರೆ ನಾವು ಆ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ’ ಎಂದು ಬಿಡೆನ್ ತಿಳಿಸಿದ್ದರು.

ಅಧ್ಯಕ್ಷ ಬಿಡೆನ್ ಟ್ವಿಟರ್‌ನಲ್ಲಿ ಈ ಶಾಸನದ ಅಂಗೀಕಾರಕ್ಕಾಗಿ ಒತ್ತಾಯಿಸಿದ್ದರು. “ಸೆನೆಟ್ ಪರಿಗಣನೆಯ ನಂತರ, ಮಹತ್ವದ ಪೊಲೀಸ್ ಸುಧಾರಣಾ ಮಸೂದೆ ಕಾನೂನಿಗೆ ಸಹಿ ಹಾಕಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಫ್ಲಾಯ್ಡ್‌ನನ್ನು ಕೊಂದ ಆರೋಪದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ನ ವಿಚಾರಣೆ ಮಾರ್ಚ್ 8 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪ್ರಾರಂಭವಾಗಲಿದೆ. ಫ್ಲಾಯ್ಡ್‌ನ ಕುತ್ತಿಗೆಗೆ ಮಂಡಿಯೂರಿ ಕೊಂದ ಚೌವಿನ್, ಕೊಲೆ ಮತ್ತು ನರಹತ್ಯೆ ಆರೋಪಗಳನ್ನು ಎದುರಿಸುತಿದ್ದಾರೆ.

ವಿಚಾರಣೆ ನಡೆಯಲಿರುವ ನ್ಯಾಯಾಲಯದ ಸುತ್ತಲೂ ಬ್ಯಾರಿಕೇಡ್‌ಗಳು ಮತ್ತು ಬೇಲಿ ಹಾಕುವುದು ಸೇರಿದಂತೆ ಭಾರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ವಾರ ಮಿನ್ನಿಯಾಪೋಲಿಸ್‌ನಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಷನಲ್ ಗಾರ್ಡ್ ಸಿಬ್ಬಂದಿ ಹಾಜರಾಗಲಿದ್ದಾರೆ. ಫ್ಲಾಯ್ಡ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳನ್ನು ಆಗಸ್ಟ್‌ನಲ್ಲಿ ಪ್ರತ್ಯೇಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...