Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

ಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

- Advertisement -
- Advertisement -

ಬುಧವಾರ (ಮಾರ್ಚ್ 3) ’ಜಾರ್ಜ್ ಫ್ಲಾಯ್ಡ್ ಜಸ್ಟೀಸ್ ಇನ್ ಪೋಲಿಸಿಂಗ್ ಆಕ್ಟ್’ ಅನ್ನು ಅಮೆರಿಕ ಸಂಸತ್ತಿನ ಶಾಸಕರು (ಲಾ ಮೇಕರ್ಸ್) ಅಂಗೀಕರಿಸಿದ್ದಾರೆ. ಇದು ಕಾನೂನು ಜಾರಿಗಾಗಿ ಅರ್ಹವಾದ ವಿನಾಯಿತಿ ಎಂದು ಕರೆಯಲ್ಪಡುವ ಸುಧಾರಣಾ ಮಸೂದೆಯಾಗಿದೆ. ಈ ಮಸೂದೆ ಪೊಲೀಸ್ ದುಷ್ಕೃತ್ಯದ ಘಟನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತದೆ ಎಂದು ಎನ್‌ಪಿಆರ್ ಪೋರ್ಟಲ್ ವರದಿ ಮಾಡಿದೆ.

ಕಳೆದ ವರ್ಷ ಮಿನ್ನಿಯಾಪೋಲಿಸ್ ಅಧಿಕಾರಿಗಳಿಂದ 46 ವರ್ಷದ ಕಪ್ಪು ವ್ಯಕ್ತಿ ಫ್ಲಾಯ್ಡ್ ಕೊಲ್ಲಲ್ಪಟ್ಟ ಒಂಬತ್ತು ತಿಂಗಳ ನಂತರ ಈ ಕಾನೂನು ಅಂಗೀಕಾರವಾಗಿದೆ. ಈ ಶಾಸನವು ಕೆಲವು ಸಂದರ್ಭಗಳಲ್ಲಿ ನೋ-ನಾಕ್ ವಾರಂಟ್‌ಗಳನ್ನು ನಿಷೇಧಿಸುತ್ತದೆ.

ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ದತ್ತಾಂಶ ಸಂಗ್ರಹಣೆಯನ್ನು ಕಡ್ಡಾಯಗೊಳಿಸುತ್ತದೆ, ಜನಾಂಗೀಯ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಅನ್ನು ನಿಷೇಧಿಸುತ್ತದೆ ಮತ್ತು ಸಮುದಾಯ ಆಧಾರಿತ ಪೊಲೀಸ್ ಕಾರ್ಯಕ್ರಮಗಳಿಗೆ ಹಣವನ್ನು ಮರುನಿರ್ದೇಶಿಸುತ್ತದೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

“ನಿರಾಯುಧ ವ್ಯಕ್ತಿಯನ್ನು ಕಾಪಾಡಬೇಕಾದವರು ಇನ್ನೆಂದಿಗೂ ಹತ್ಯೆ ಮಾಡಬಾರದು ಎಂಬ ಉದ್ದೇಶವನ್ನು ಶಾಸನ ಹೊಂದಿದೆ’ ಎಂದು ರಿಪಬ್ಲಿಕನ್ ಕರೆನ್ ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಿನ್ನೇಸೋಟದ ಬೀದಿಗಳಲ್ಲಿ ಜಾರ್ಜ್ ಫ್ಲಾಯ್ಡ್‌ಗೆ ಏನಾಯಿತು ಎಂದು ನಾವು ನೋಡಿದ್ದೇವೆ. ಜಗತ್ತು ಮತ್ತೊಮ್ಮೆ ಅಂಥದ್ದಕ್ಕೆ ಸಾಕ್ಷಿಯಾಗಬಾರದು’ ಎಂದು ಅವರು ತಿಳಿಸಿದ್ದಾರೆ.

ಮತದಾನದ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ, ಮಿನ್ನೇಸೋಟದ ಡೆಮಾಕ್ರಟಿಕ್ ಇಲ್ಹಾನ್ ಒಮರ್, ’ಫ್ಲಾಯ್ಡ್ ಸಾವಿನಿಂದ ಮಿನ್ನಿಯಾಪೋಲಿಸ್ ಪ್ರದೇಶವು ಇನ್ನೂ ಆಘಾತಕ್ಕೊಳಗಾಗಿದೆ. ನಮ್ಮ ಸಮುದಾಯಗಳನ್ನು ರಕ್ಷಿಸಲು ಪ್ರಮಾಣವಚನ ಸ್ವೀಕರಿಸಿದ ಜನರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಮತ್ತೆ ಮತ್ತೆ ನೋಡಿದ್ದೇವೆ” ಎಂದು ಹೇಳಿದರು.

ಕಳೆದ ವರ್ಷ, ಸದನವು ಮಸೂದೆಯ ಇದೇ ರೀತಿಯ ಆವೃತ್ತಿಯನ್ನು ಅಂಗೀಕರಿಸಿತ್ತು. ಆದರೆ ಅದು ರಿಪಬ್ಲಿಕನ್ ನಿಯಂತ್ರಿತ ಸೆನೆಟ್‌ನಲ್ಲಿ ವಿಫಲವಾಗಿತ್ತು. ರಿಪಬ್ಲಿಕನ್ನರು (ಟ್ರಂಪ್ ಪಕ್ಷದವರು), ’ಈ ಶಾಸನವು ಪೊಲೀಸರು ತಮ್ಮ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವುದನ್ನು ತಡೆಯುತ್ತದೆ ಎಂದು ಹೇಳಿದ್ದರು.

George Floyd Death: ಜಾರ್ಜ್ ಫ್ಲಾಯ್ಡ್ ಶವಪರೀಕ್ಷೆಯಲ್ಲಿ ಕಂಡುಬಂದ ಸ್ಫೋಟಕ ಅಂಶಗಳೇನು.? - Kannada Oneindia

ಈ ವಾರದ ಆರಂಭದಲ್ಲಿ, ಬಿಡೆನ್ ಆಡಳಿತವು ಪ್ರಸ್ತಾವನೆಯ ಪರವಾಗಿ ಮತ ಚಲಾಯಿಸುವಂತೆ ಸದನವನ್ನು ಕೋರುವ ಹೇಳಿಕೆ ಬಿಡುಗಡೆ ಮಾಡಿತ್ತು. “ನಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಸಲು, ಕಾನೂನು ಜಾರಿ ಮಾಡುವವರು ಮತ್ತು ಜನರ ನಡುವೆ ವಿಶ್ವಾಸವನ್ನು ಪುನರ್‌ ನಿರ್ಮಿಸುವ ಮೂಲಕ ನಾವು ಪ್ರಾರಂಭಿಸಬೇಕು” ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

“ಅಧಿಕಾರದ ದುರುಪಯೋಗಕ್ಕೆ ನಾವು ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದಿದ್ದರೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ವ್ಯವಸ್ಥಿತ ದುಷ್ಕೃತ್ಯ ಮತ್ತು ವ್ಯವಸ್ಥಿತ ವರ್ಣಭೇದ ನೀತಿಯನ್ನು ನಿಭಾಯಿಸದಿದ್ದರೆ ನಾವು ಆ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ’ ಎಂದು ಬಿಡೆನ್ ತಿಳಿಸಿದ್ದರು.

ಅಧ್ಯಕ್ಷ ಬಿಡೆನ್ ಟ್ವಿಟರ್‌ನಲ್ಲಿ ಈ ಶಾಸನದ ಅಂಗೀಕಾರಕ್ಕಾಗಿ ಒತ್ತಾಯಿಸಿದ್ದರು. “ಸೆನೆಟ್ ಪರಿಗಣನೆಯ ನಂತರ, ಮಹತ್ವದ ಪೊಲೀಸ್ ಸುಧಾರಣಾ ಮಸೂದೆ ಕಾನೂನಿಗೆ ಸಹಿ ಹಾಕಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಫ್ಲಾಯ್ಡ್‌ನನ್ನು ಕೊಂದ ಆರೋಪದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ನ ವಿಚಾರಣೆ ಮಾರ್ಚ್ 8 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪ್ರಾರಂಭವಾಗಲಿದೆ. ಫ್ಲಾಯ್ಡ್‌ನ ಕುತ್ತಿಗೆಗೆ ಮಂಡಿಯೂರಿ ಕೊಂದ ಚೌವಿನ್, ಕೊಲೆ ಮತ್ತು ನರಹತ್ಯೆ ಆರೋಪಗಳನ್ನು ಎದುರಿಸುತಿದ್ದಾರೆ.

ವಿಚಾರಣೆ ನಡೆಯಲಿರುವ ನ್ಯಾಯಾಲಯದ ಸುತ್ತಲೂ ಬ್ಯಾರಿಕೇಡ್‌ಗಳು ಮತ್ತು ಬೇಲಿ ಹಾಕುವುದು ಸೇರಿದಂತೆ ಭಾರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ವಾರ ಮಿನ್ನಿಯಾಪೋಲಿಸ್‌ನಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಷನಲ್ ಗಾರ್ಡ್ ಸಿಬ್ಬಂದಿ ಹಾಜರಾಗಲಿದ್ದಾರೆ. ಫ್ಲಾಯ್ಡ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳನ್ನು ಆಗಸ್ಟ್‌ನಲ್ಲಿ ಪ್ರತ್ಯೇಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....