Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

ಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

- Advertisement -
- Advertisement -

ಬುಧವಾರ (ಮಾರ್ಚ್ 3) ’ಜಾರ್ಜ್ ಫ್ಲಾಯ್ಡ್ ಜಸ್ಟೀಸ್ ಇನ್ ಪೋಲಿಸಿಂಗ್ ಆಕ್ಟ್’ ಅನ್ನು ಅಮೆರಿಕ ಸಂಸತ್ತಿನ ಶಾಸಕರು (ಲಾ ಮೇಕರ್ಸ್) ಅಂಗೀಕರಿಸಿದ್ದಾರೆ. ಇದು ಕಾನೂನು ಜಾರಿಗಾಗಿ ಅರ್ಹವಾದ ವಿನಾಯಿತಿ ಎಂದು ಕರೆಯಲ್ಪಡುವ ಸುಧಾರಣಾ ಮಸೂದೆಯಾಗಿದೆ. ಈ ಮಸೂದೆ ಪೊಲೀಸ್ ದುಷ್ಕೃತ್ಯದ ಘಟನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತದೆ ಎಂದು ಎನ್‌ಪಿಆರ್ ಪೋರ್ಟಲ್ ವರದಿ ಮಾಡಿದೆ.

ಕಳೆದ ವರ್ಷ ಮಿನ್ನಿಯಾಪೋಲಿಸ್ ಅಧಿಕಾರಿಗಳಿಂದ 46 ವರ್ಷದ ಕಪ್ಪು ವ್ಯಕ್ತಿ ಫ್ಲಾಯ್ಡ್ ಕೊಲ್ಲಲ್ಪಟ್ಟ ಒಂಬತ್ತು ತಿಂಗಳ ನಂತರ ಈ ಕಾನೂನು ಅಂಗೀಕಾರವಾಗಿದೆ. ಈ ಶಾಸನವು ಕೆಲವು ಸಂದರ್ಭಗಳಲ್ಲಿ ನೋ-ನಾಕ್ ವಾರಂಟ್‌ಗಳನ್ನು ನಿಷೇಧಿಸುತ್ತದೆ.

ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ದತ್ತಾಂಶ ಸಂಗ್ರಹಣೆಯನ್ನು ಕಡ್ಡಾಯಗೊಳಿಸುತ್ತದೆ, ಜನಾಂಗೀಯ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಅನ್ನು ನಿಷೇಧಿಸುತ್ತದೆ ಮತ್ತು ಸಮುದಾಯ ಆಧಾರಿತ ಪೊಲೀಸ್ ಕಾರ್ಯಕ್ರಮಗಳಿಗೆ ಹಣವನ್ನು ಮರುನಿರ್ದೇಶಿಸುತ್ತದೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

“ನಿರಾಯುಧ ವ್ಯಕ್ತಿಯನ್ನು ಕಾಪಾಡಬೇಕಾದವರು ಇನ್ನೆಂದಿಗೂ ಹತ್ಯೆ ಮಾಡಬಾರದು ಎಂಬ ಉದ್ದೇಶವನ್ನು ಶಾಸನ ಹೊಂದಿದೆ’ ಎಂದು ರಿಪಬ್ಲಿಕನ್ ಕರೆನ್ ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಿನ್ನೇಸೋಟದ ಬೀದಿಗಳಲ್ಲಿ ಜಾರ್ಜ್ ಫ್ಲಾಯ್ಡ್‌ಗೆ ಏನಾಯಿತು ಎಂದು ನಾವು ನೋಡಿದ್ದೇವೆ. ಜಗತ್ತು ಮತ್ತೊಮ್ಮೆ ಅಂಥದ್ದಕ್ಕೆ ಸಾಕ್ಷಿಯಾಗಬಾರದು’ ಎಂದು ಅವರು ತಿಳಿಸಿದ್ದಾರೆ.

ಮತದಾನದ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ, ಮಿನ್ನೇಸೋಟದ ಡೆಮಾಕ್ರಟಿಕ್ ಇಲ್ಹಾನ್ ಒಮರ್, ’ಫ್ಲಾಯ್ಡ್ ಸಾವಿನಿಂದ ಮಿನ್ನಿಯಾಪೋಲಿಸ್ ಪ್ರದೇಶವು ಇನ್ನೂ ಆಘಾತಕ್ಕೊಳಗಾಗಿದೆ. ನಮ್ಮ ಸಮುದಾಯಗಳನ್ನು ರಕ್ಷಿಸಲು ಪ್ರಮಾಣವಚನ ಸ್ವೀಕರಿಸಿದ ಜನರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಮತ್ತೆ ಮತ್ತೆ ನೋಡಿದ್ದೇವೆ” ಎಂದು ಹೇಳಿದರು.

ಕಳೆದ ವರ್ಷ, ಸದನವು ಮಸೂದೆಯ ಇದೇ ರೀತಿಯ ಆವೃತ್ತಿಯನ್ನು ಅಂಗೀಕರಿಸಿತ್ತು. ಆದರೆ ಅದು ರಿಪಬ್ಲಿಕನ್ ನಿಯಂತ್ರಿತ ಸೆನೆಟ್‌ನಲ್ಲಿ ವಿಫಲವಾಗಿತ್ತು. ರಿಪಬ್ಲಿಕನ್ನರು (ಟ್ರಂಪ್ ಪಕ್ಷದವರು), ’ಈ ಶಾಸನವು ಪೊಲೀಸರು ತಮ್ಮ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವುದನ್ನು ತಡೆಯುತ್ತದೆ ಎಂದು ಹೇಳಿದ್ದರು.

George Floyd Death: ಜಾರ್ಜ್ ಫ್ಲಾಯ್ಡ್ ಶವಪರೀಕ್ಷೆಯಲ್ಲಿ ಕಂಡುಬಂದ ಸ್ಫೋಟಕ ಅಂಶಗಳೇನು.? - Kannada Oneindia

ಈ ವಾರದ ಆರಂಭದಲ್ಲಿ, ಬಿಡೆನ್ ಆಡಳಿತವು ಪ್ರಸ್ತಾವನೆಯ ಪರವಾಗಿ ಮತ ಚಲಾಯಿಸುವಂತೆ ಸದನವನ್ನು ಕೋರುವ ಹೇಳಿಕೆ ಬಿಡುಗಡೆ ಮಾಡಿತ್ತು. “ನಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಸಲು, ಕಾನೂನು ಜಾರಿ ಮಾಡುವವರು ಮತ್ತು ಜನರ ನಡುವೆ ವಿಶ್ವಾಸವನ್ನು ಪುನರ್‌ ನಿರ್ಮಿಸುವ ಮೂಲಕ ನಾವು ಪ್ರಾರಂಭಿಸಬೇಕು” ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

“ಅಧಿಕಾರದ ದುರುಪಯೋಗಕ್ಕೆ ನಾವು ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದಿದ್ದರೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ವ್ಯವಸ್ಥಿತ ದುಷ್ಕೃತ್ಯ ಮತ್ತು ವ್ಯವಸ್ಥಿತ ವರ್ಣಭೇದ ನೀತಿಯನ್ನು ನಿಭಾಯಿಸದಿದ್ದರೆ ನಾವು ಆ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ’ ಎಂದು ಬಿಡೆನ್ ತಿಳಿಸಿದ್ದರು.

ಅಧ್ಯಕ್ಷ ಬಿಡೆನ್ ಟ್ವಿಟರ್‌ನಲ್ಲಿ ಈ ಶಾಸನದ ಅಂಗೀಕಾರಕ್ಕಾಗಿ ಒತ್ತಾಯಿಸಿದ್ದರು. “ಸೆನೆಟ್ ಪರಿಗಣನೆಯ ನಂತರ, ಮಹತ್ವದ ಪೊಲೀಸ್ ಸುಧಾರಣಾ ಮಸೂದೆ ಕಾನೂನಿಗೆ ಸಹಿ ಹಾಕಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಫ್ಲಾಯ್ಡ್‌ನನ್ನು ಕೊಂದ ಆರೋಪದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ನ ವಿಚಾರಣೆ ಮಾರ್ಚ್ 8 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪ್ರಾರಂಭವಾಗಲಿದೆ. ಫ್ಲಾಯ್ಡ್‌ನ ಕುತ್ತಿಗೆಗೆ ಮಂಡಿಯೂರಿ ಕೊಂದ ಚೌವಿನ್, ಕೊಲೆ ಮತ್ತು ನರಹತ್ಯೆ ಆರೋಪಗಳನ್ನು ಎದುರಿಸುತಿದ್ದಾರೆ.

ವಿಚಾರಣೆ ನಡೆಯಲಿರುವ ನ್ಯಾಯಾಲಯದ ಸುತ್ತಲೂ ಬ್ಯಾರಿಕೇಡ್‌ಗಳು ಮತ್ತು ಬೇಲಿ ಹಾಕುವುದು ಸೇರಿದಂತೆ ಭಾರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ವಾರ ಮಿನ್ನಿಯಾಪೋಲಿಸ್‌ನಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಷನಲ್ ಗಾರ್ಡ್ ಸಿಬ್ಬಂದಿ ಹಾಜರಾಗಲಿದ್ದಾರೆ. ಫ್ಲಾಯ್ಡ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳನ್ನು ಆಗಸ್ಟ್‌ನಲ್ಲಿ ಪ್ರತ್ಯೇಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...