Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

ಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

- Advertisement -
- Advertisement -

ಬುಧವಾರ (ಮಾರ್ಚ್ 3) ’ಜಾರ್ಜ್ ಫ್ಲಾಯ್ಡ್ ಜಸ್ಟೀಸ್ ಇನ್ ಪೋಲಿಸಿಂಗ್ ಆಕ್ಟ್’ ಅನ್ನು ಅಮೆರಿಕ ಸಂಸತ್ತಿನ ಶಾಸಕರು (ಲಾ ಮೇಕರ್ಸ್) ಅಂಗೀಕರಿಸಿದ್ದಾರೆ. ಇದು ಕಾನೂನು ಜಾರಿಗಾಗಿ ಅರ್ಹವಾದ ವಿನಾಯಿತಿ ಎಂದು ಕರೆಯಲ್ಪಡುವ ಸುಧಾರಣಾ ಮಸೂದೆಯಾಗಿದೆ. ಈ ಮಸೂದೆ ಪೊಲೀಸ್ ದುಷ್ಕೃತ್ಯದ ಘಟನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತದೆ ಎಂದು ಎನ್‌ಪಿಆರ್ ಪೋರ್ಟಲ್ ವರದಿ ಮಾಡಿದೆ.

ಕಳೆದ ವರ್ಷ ಮಿನ್ನಿಯಾಪೋಲಿಸ್ ಅಧಿಕಾರಿಗಳಿಂದ 46 ವರ್ಷದ ಕಪ್ಪು ವ್ಯಕ್ತಿ ಫ್ಲಾಯ್ಡ್ ಕೊಲ್ಲಲ್ಪಟ್ಟ ಒಂಬತ್ತು ತಿಂಗಳ ನಂತರ ಈ ಕಾನೂನು ಅಂಗೀಕಾರವಾಗಿದೆ. ಈ ಶಾಸನವು ಕೆಲವು ಸಂದರ್ಭಗಳಲ್ಲಿ ನೋ-ನಾಕ್ ವಾರಂಟ್‌ಗಳನ್ನು ನಿಷೇಧಿಸುತ್ತದೆ.

ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ದತ್ತಾಂಶ ಸಂಗ್ರಹಣೆಯನ್ನು ಕಡ್ಡಾಯಗೊಳಿಸುತ್ತದೆ, ಜನಾಂಗೀಯ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಅನ್ನು ನಿಷೇಧಿಸುತ್ತದೆ ಮತ್ತು ಸಮುದಾಯ ಆಧಾರಿತ ಪೊಲೀಸ್ ಕಾರ್ಯಕ್ರಮಗಳಿಗೆ ಹಣವನ್ನು ಮರುನಿರ್ದೇಶಿಸುತ್ತದೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

“ನಿರಾಯುಧ ವ್ಯಕ್ತಿಯನ್ನು ಕಾಪಾಡಬೇಕಾದವರು ಇನ್ನೆಂದಿಗೂ ಹತ್ಯೆ ಮಾಡಬಾರದು ಎಂಬ ಉದ್ದೇಶವನ್ನು ಶಾಸನ ಹೊಂದಿದೆ’ ಎಂದು ರಿಪಬ್ಲಿಕನ್ ಕರೆನ್ ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಿನ್ನೇಸೋಟದ ಬೀದಿಗಳಲ್ಲಿ ಜಾರ್ಜ್ ಫ್ಲಾಯ್ಡ್‌ಗೆ ಏನಾಯಿತು ಎಂದು ನಾವು ನೋಡಿದ್ದೇವೆ. ಜಗತ್ತು ಮತ್ತೊಮ್ಮೆ ಅಂಥದ್ದಕ್ಕೆ ಸಾಕ್ಷಿಯಾಗಬಾರದು’ ಎಂದು ಅವರು ತಿಳಿಸಿದ್ದಾರೆ.

ಮತದಾನದ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ, ಮಿನ್ನೇಸೋಟದ ಡೆಮಾಕ್ರಟಿಕ್ ಇಲ್ಹಾನ್ ಒಮರ್, ’ಫ್ಲಾಯ್ಡ್ ಸಾವಿನಿಂದ ಮಿನ್ನಿಯಾಪೋಲಿಸ್ ಪ್ರದೇಶವು ಇನ್ನೂ ಆಘಾತಕ್ಕೊಳಗಾಗಿದೆ. ನಮ್ಮ ಸಮುದಾಯಗಳನ್ನು ರಕ್ಷಿಸಲು ಪ್ರಮಾಣವಚನ ಸ್ವೀಕರಿಸಿದ ಜನರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಮತ್ತೆ ಮತ್ತೆ ನೋಡಿದ್ದೇವೆ” ಎಂದು ಹೇಳಿದರು.

ಕಳೆದ ವರ್ಷ, ಸದನವು ಮಸೂದೆಯ ಇದೇ ರೀತಿಯ ಆವೃತ್ತಿಯನ್ನು ಅಂಗೀಕರಿಸಿತ್ತು. ಆದರೆ ಅದು ರಿಪಬ್ಲಿಕನ್ ನಿಯಂತ್ರಿತ ಸೆನೆಟ್‌ನಲ್ಲಿ ವಿಫಲವಾಗಿತ್ತು. ರಿಪಬ್ಲಿಕನ್ನರು (ಟ್ರಂಪ್ ಪಕ್ಷದವರು), ’ಈ ಶಾಸನವು ಪೊಲೀಸರು ತಮ್ಮ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವುದನ್ನು ತಡೆಯುತ್ತದೆ ಎಂದು ಹೇಳಿದ್ದರು.

George Floyd Death: ಜಾರ್ಜ್ ಫ್ಲಾಯ್ಡ್ ಶವಪರೀಕ್ಷೆಯಲ್ಲಿ ಕಂಡುಬಂದ ಸ್ಫೋಟಕ ಅಂಶಗಳೇನು.? - Kannada Oneindia

ಈ ವಾರದ ಆರಂಭದಲ್ಲಿ, ಬಿಡೆನ್ ಆಡಳಿತವು ಪ್ರಸ್ತಾವನೆಯ ಪರವಾಗಿ ಮತ ಚಲಾಯಿಸುವಂತೆ ಸದನವನ್ನು ಕೋರುವ ಹೇಳಿಕೆ ಬಿಡುಗಡೆ ಮಾಡಿತ್ತು. “ನಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಸಲು, ಕಾನೂನು ಜಾರಿ ಮಾಡುವವರು ಮತ್ತು ಜನರ ನಡುವೆ ವಿಶ್ವಾಸವನ್ನು ಪುನರ್‌ ನಿರ್ಮಿಸುವ ಮೂಲಕ ನಾವು ಪ್ರಾರಂಭಿಸಬೇಕು” ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

“ಅಧಿಕಾರದ ದುರುಪಯೋಗಕ್ಕೆ ನಾವು ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದಿದ್ದರೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ವ್ಯವಸ್ಥಿತ ದುಷ್ಕೃತ್ಯ ಮತ್ತು ವ್ಯವಸ್ಥಿತ ವರ್ಣಭೇದ ನೀತಿಯನ್ನು ನಿಭಾಯಿಸದಿದ್ದರೆ ನಾವು ಆ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ’ ಎಂದು ಬಿಡೆನ್ ತಿಳಿಸಿದ್ದರು.

ಅಧ್ಯಕ್ಷ ಬಿಡೆನ್ ಟ್ವಿಟರ್‌ನಲ್ಲಿ ಈ ಶಾಸನದ ಅಂಗೀಕಾರಕ್ಕಾಗಿ ಒತ್ತಾಯಿಸಿದ್ದರು. “ಸೆನೆಟ್ ಪರಿಗಣನೆಯ ನಂತರ, ಮಹತ್ವದ ಪೊಲೀಸ್ ಸುಧಾರಣಾ ಮಸೂದೆ ಕಾನೂನಿಗೆ ಸಹಿ ಹಾಕಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಫ್ಲಾಯ್ಡ್‌ನನ್ನು ಕೊಂದ ಆರೋಪದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ನ ವಿಚಾರಣೆ ಮಾರ್ಚ್ 8 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪ್ರಾರಂಭವಾಗಲಿದೆ. ಫ್ಲಾಯ್ಡ್‌ನ ಕುತ್ತಿಗೆಗೆ ಮಂಡಿಯೂರಿ ಕೊಂದ ಚೌವಿನ್, ಕೊಲೆ ಮತ್ತು ನರಹತ್ಯೆ ಆರೋಪಗಳನ್ನು ಎದುರಿಸುತಿದ್ದಾರೆ.

ವಿಚಾರಣೆ ನಡೆಯಲಿರುವ ನ್ಯಾಯಾಲಯದ ಸುತ್ತಲೂ ಬ್ಯಾರಿಕೇಡ್‌ಗಳು ಮತ್ತು ಬೇಲಿ ಹಾಕುವುದು ಸೇರಿದಂತೆ ಭಾರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ವಾರ ಮಿನ್ನಿಯಾಪೋಲಿಸ್‌ನಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಷನಲ್ ಗಾರ್ಡ್ ಸಿಬ್ಬಂದಿ ಹಾಜರಾಗಲಿದ್ದಾರೆ. ಫ್ಲಾಯ್ಡ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳನ್ನು ಆಗಸ್ಟ್‌ನಲ್ಲಿ ಪ್ರತ್ಯೇಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...