Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

ಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

- Advertisement -
- Advertisement -

ಬುಧವಾರ (ಮಾರ್ಚ್ 3) ’ಜಾರ್ಜ್ ಫ್ಲಾಯ್ಡ್ ಜಸ್ಟೀಸ್ ಇನ್ ಪೋಲಿಸಿಂಗ್ ಆಕ್ಟ್’ ಅನ್ನು ಅಮೆರಿಕ ಸಂಸತ್ತಿನ ಶಾಸಕರು (ಲಾ ಮೇಕರ್ಸ್) ಅಂಗೀಕರಿಸಿದ್ದಾರೆ. ಇದು ಕಾನೂನು ಜಾರಿಗಾಗಿ ಅರ್ಹವಾದ ವಿನಾಯಿತಿ ಎಂದು ಕರೆಯಲ್ಪಡುವ ಸುಧಾರಣಾ ಮಸೂದೆಯಾಗಿದೆ. ಈ ಮಸೂದೆ ಪೊಲೀಸ್ ದುಷ್ಕೃತ್ಯದ ಘಟನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತದೆ ಎಂದು ಎನ್‌ಪಿಆರ್ ಪೋರ್ಟಲ್ ವರದಿ ಮಾಡಿದೆ.

ಕಳೆದ ವರ್ಷ ಮಿನ್ನಿಯಾಪೋಲಿಸ್ ಅಧಿಕಾರಿಗಳಿಂದ 46 ವರ್ಷದ ಕಪ್ಪು ವ್ಯಕ್ತಿ ಫ್ಲಾಯ್ಡ್ ಕೊಲ್ಲಲ್ಪಟ್ಟ ಒಂಬತ್ತು ತಿಂಗಳ ನಂತರ ಈ ಕಾನೂನು ಅಂಗೀಕಾರವಾಗಿದೆ. ಈ ಶಾಸನವು ಕೆಲವು ಸಂದರ್ಭಗಳಲ್ಲಿ ನೋ-ನಾಕ್ ವಾರಂಟ್‌ಗಳನ್ನು ನಿಷೇಧಿಸುತ್ತದೆ.

ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ದತ್ತಾಂಶ ಸಂಗ್ರಹಣೆಯನ್ನು ಕಡ್ಡಾಯಗೊಳಿಸುತ್ತದೆ, ಜನಾಂಗೀಯ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಅನ್ನು ನಿಷೇಧಿಸುತ್ತದೆ ಮತ್ತು ಸಮುದಾಯ ಆಧಾರಿತ ಪೊಲೀಸ್ ಕಾರ್ಯಕ್ರಮಗಳಿಗೆ ಹಣವನ್ನು ಮರುನಿರ್ದೇಶಿಸುತ್ತದೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

“ನಿರಾಯುಧ ವ್ಯಕ್ತಿಯನ್ನು ಕಾಪಾಡಬೇಕಾದವರು ಇನ್ನೆಂದಿಗೂ ಹತ್ಯೆ ಮಾಡಬಾರದು ಎಂಬ ಉದ್ದೇಶವನ್ನು ಶಾಸನ ಹೊಂದಿದೆ’ ಎಂದು ರಿಪಬ್ಲಿಕನ್ ಕರೆನ್ ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಿನ್ನೇಸೋಟದ ಬೀದಿಗಳಲ್ಲಿ ಜಾರ್ಜ್ ಫ್ಲಾಯ್ಡ್‌ಗೆ ಏನಾಯಿತು ಎಂದು ನಾವು ನೋಡಿದ್ದೇವೆ. ಜಗತ್ತು ಮತ್ತೊಮ್ಮೆ ಅಂಥದ್ದಕ್ಕೆ ಸಾಕ್ಷಿಯಾಗಬಾರದು’ ಎಂದು ಅವರು ತಿಳಿಸಿದ್ದಾರೆ.

ಮತದಾನದ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ, ಮಿನ್ನೇಸೋಟದ ಡೆಮಾಕ್ರಟಿಕ್ ಇಲ್ಹಾನ್ ಒಮರ್, ’ಫ್ಲಾಯ್ಡ್ ಸಾವಿನಿಂದ ಮಿನ್ನಿಯಾಪೋಲಿಸ್ ಪ್ರದೇಶವು ಇನ್ನೂ ಆಘಾತಕ್ಕೊಳಗಾಗಿದೆ. ನಮ್ಮ ಸಮುದಾಯಗಳನ್ನು ರಕ್ಷಿಸಲು ಪ್ರಮಾಣವಚನ ಸ್ವೀಕರಿಸಿದ ಜನರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಮತ್ತೆ ಮತ್ತೆ ನೋಡಿದ್ದೇವೆ” ಎಂದು ಹೇಳಿದರು.

ಕಳೆದ ವರ್ಷ, ಸದನವು ಮಸೂದೆಯ ಇದೇ ರೀತಿಯ ಆವೃತ್ತಿಯನ್ನು ಅಂಗೀಕರಿಸಿತ್ತು. ಆದರೆ ಅದು ರಿಪಬ್ಲಿಕನ್ ನಿಯಂತ್ರಿತ ಸೆನೆಟ್‌ನಲ್ಲಿ ವಿಫಲವಾಗಿತ್ತು. ರಿಪಬ್ಲಿಕನ್ನರು (ಟ್ರಂಪ್ ಪಕ್ಷದವರು), ’ಈ ಶಾಸನವು ಪೊಲೀಸರು ತಮ್ಮ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವುದನ್ನು ತಡೆಯುತ್ತದೆ ಎಂದು ಹೇಳಿದ್ದರು.

George Floyd Death: ಜಾರ್ಜ್ ಫ್ಲಾಯ್ಡ್ ಶವಪರೀಕ್ಷೆಯಲ್ಲಿ ಕಂಡುಬಂದ ಸ್ಫೋಟಕ ಅಂಶಗಳೇನು.? - Kannada Oneindia

ಈ ವಾರದ ಆರಂಭದಲ್ಲಿ, ಬಿಡೆನ್ ಆಡಳಿತವು ಪ್ರಸ್ತಾವನೆಯ ಪರವಾಗಿ ಮತ ಚಲಾಯಿಸುವಂತೆ ಸದನವನ್ನು ಕೋರುವ ಹೇಳಿಕೆ ಬಿಡುಗಡೆ ಮಾಡಿತ್ತು. “ನಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಸಲು, ಕಾನೂನು ಜಾರಿ ಮಾಡುವವರು ಮತ್ತು ಜನರ ನಡುವೆ ವಿಶ್ವಾಸವನ್ನು ಪುನರ್‌ ನಿರ್ಮಿಸುವ ಮೂಲಕ ನಾವು ಪ್ರಾರಂಭಿಸಬೇಕು” ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

“ಅಧಿಕಾರದ ದುರುಪಯೋಗಕ್ಕೆ ನಾವು ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದಿದ್ದರೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ವ್ಯವಸ್ಥಿತ ದುಷ್ಕೃತ್ಯ ಮತ್ತು ವ್ಯವಸ್ಥಿತ ವರ್ಣಭೇದ ನೀತಿಯನ್ನು ನಿಭಾಯಿಸದಿದ್ದರೆ ನಾವು ಆ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ’ ಎಂದು ಬಿಡೆನ್ ತಿಳಿಸಿದ್ದರು.

ಅಧ್ಯಕ್ಷ ಬಿಡೆನ್ ಟ್ವಿಟರ್‌ನಲ್ಲಿ ಈ ಶಾಸನದ ಅಂಗೀಕಾರಕ್ಕಾಗಿ ಒತ್ತಾಯಿಸಿದ್ದರು. “ಸೆನೆಟ್ ಪರಿಗಣನೆಯ ನಂತರ, ಮಹತ್ವದ ಪೊಲೀಸ್ ಸುಧಾರಣಾ ಮಸೂದೆ ಕಾನೂನಿಗೆ ಸಹಿ ಹಾಕಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಫ್ಲಾಯ್ಡ್‌ನನ್ನು ಕೊಂದ ಆರೋಪದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ನ ವಿಚಾರಣೆ ಮಾರ್ಚ್ 8 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪ್ರಾರಂಭವಾಗಲಿದೆ. ಫ್ಲಾಯ್ಡ್‌ನ ಕುತ್ತಿಗೆಗೆ ಮಂಡಿಯೂರಿ ಕೊಂದ ಚೌವಿನ್, ಕೊಲೆ ಮತ್ತು ನರಹತ್ಯೆ ಆರೋಪಗಳನ್ನು ಎದುರಿಸುತಿದ್ದಾರೆ.

ವಿಚಾರಣೆ ನಡೆಯಲಿರುವ ನ್ಯಾಯಾಲಯದ ಸುತ್ತಲೂ ಬ್ಯಾರಿಕೇಡ್‌ಗಳು ಮತ್ತು ಬೇಲಿ ಹಾಕುವುದು ಸೇರಿದಂತೆ ಭಾರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ವಾರ ಮಿನ್ನಿಯಾಪೋಲಿಸ್‌ನಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಷನಲ್ ಗಾರ್ಡ್ ಸಿಬ್ಬಂದಿ ಹಾಜರಾಗಲಿದ್ದಾರೆ. ಫ್ಲಾಯ್ಡ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳನ್ನು ಆಗಸ್ಟ್‌ನಲ್ಲಿ ಪ್ರತ್ಯೇಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...