Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

ಜಾರ್ಜ್ ಫ್ಲಾಯ್ಡ್ ಹೆಸರಿನಲ್ಲಿ ಪೊಲೀಸ್ ಸುಧಾರಣಾ ಶಾಸನ ಅಂಗೀಕರಿಸಿದ ಅಮೆರಿಕ

- Advertisement -
- Advertisement -

ಬುಧವಾರ (ಮಾರ್ಚ್ 3) ’ಜಾರ್ಜ್ ಫ್ಲಾಯ್ಡ್ ಜಸ್ಟೀಸ್ ಇನ್ ಪೋಲಿಸಿಂಗ್ ಆಕ್ಟ್’ ಅನ್ನು ಅಮೆರಿಕ ಸಂಸತ್ತಿನ ಶಾಸಕರು (ಲಾ ಮೇಕರ್ಸ್) ಅಂಗೀಕರಿಸಿದ್ದಾರೆ. ಇದು ಕಾನೂನು ಜಾರಿಗಾಗಿ ಅರ್ಹವಾದ ವಿನಾಯಿತಿ ಎಂದು ಕರೆಯಲ್ಪಡುವ ಸುಧಾರಣಾ ಮಸೂದೆಯಾಗಿದೆ. ಈ ಮಸೂದೆ ಪೊಲೀಸ್ ದುಷ್ಕೃತ್ಯದ ಘಟನೆಗಳನ್ನು ಪರಿಶೀಲನೆಗೆ ಒಳಪಡಿಸುತ್ತದೆ ಎಂದು ಎನ್‌ಪಿಆರ್ ಪೋರ್ಟಲ್ ವರದಿ ಮಾಡಿದೆ.

ಕಳೆದ ವರ್ಷ ಮಿನ್ನಿಯಾಪೋಲಿಸ್ ಅಧಿಕಾರಿಗಳಿಂದ 46 ವರ್ಷದ ಕಪ್ಪು ವ್ಯಕ್ತಿ ಫ್ಲಾಯ್ಡ್ ಕೊಲ್ಲಲ್ಪಟ್ಟ ಒಂಬತ್ತು ತಿಂಗಳ ನಂತರ ಈ ಕಾನೂನು ಅಂಗೀಕಾರವಾಗಿದೆ. ಈ ಶಾಸನವು ಕೆಲವು ಸಂದರ್ಭಗಳಲ್ಲಿ ನೋ-ನಾಕ್ ವಾರಂಟ್‌ಗಳನ್ನು ನಿಷೇಧಿಸುತ್ತದೆ.

ಪೊಲೀಸ್ ಎನ್‌ಕೌಂಟರ್‌ಗಳಲ್ಲಿ ದತ್ತಾಂಶ ಸಂಗ್ರಹಣೆಯನ್ನು ಕಡ್ಡಾಯಗೊಳಿಸುತ್ತದೆ, ಜನಾಂಗೀಯ ಮತ್ತು ಧಾರ್ಮಿಕ ಪ್ರೊಫೈಲಿಂಗ್ ಅನ್ನು ನಿಷೇಧಿಸುತ್ತದೆ ಮತ್ತು ಸಮುದಾಯ ಆಧಾರಿತ ಪೊಲೀಸ್ ಕಾರ್ಯಕ್ರಮಗಳಿಗೆ ಹಣವನ್ನು ಮರುನಿರ್ದೇಶಿಸುತ್ತದೆ.

ಇದನ್ನೂ ಓದಿ: ಗುಜರಾತ್: ಮಗಳ ಕಣ್ಣ ಮುಂದೆಯೆ ದಲಿತ ಹೋರಾಟಗಾರನನ್ನು ಕೊಂದ ಮೇಲ್ಜಾತಿಯ ದುಷ್ಕರ್ಮಿಗಳು

“ನಿರಾಯುಧ ವ್ಯಕ್ತಿಯನ್ನು ಕಾಪಾಡಬೇಕಾದವರು ಇನ್ನೆಂದಿಗೂ ಹತ್ಯೆ ಮಾಡಬಾರದು ಎಂಬ ಉದ್ದೇಶವನ್ನು ಶಾಸನ ಹೊಂದಿದೆ’ ಎಂದು ರಿಪಬ್ಲಿಕನ್ ಕರೆನ್ ಬಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಮಿನ್ನೇಸೋಟದ ಬೀದಿಗಳಲ್ಲಿ ಜಾರ್ಜ್ ಫ್ಲಾಯ್ಡ್‌ಗೆ ಏನಾಯಿತು ಎಂದು ನಾವು ನೋಡಿದ್ದೇವೆ. ಜಗತ್ತು ಮತ್ತೊಮ್ಮೆ ಅಂಥದ್ದಕ್ಕೆ ಸಾಕ್ಷಿಯಾಗಬಾರದು’ ಎಂದು ಅವರು ತಿಳಿಸಿದ್ದಾರೆ.

ಮತದಾನದ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ, ಮಿನ್ನೇಸೋಟದ ಡೆಮಾಕ್ರಟಿಕ್ ಇಲ್ಹಾನ್ ಒಮರ್, ’ಫ್ಲಾಯ್ಡ್ ಸಾವಿನಿಂದ ಮಿನ್ನಿಯಾಪೋಲಿಸ್ ಪ್ರದೇಶವು ಇನ್ನೂ ಆಘಾತಕ್ಕೊಳಗಾಗಿದೆ. ನಮ್ಮ ಸಮುದಾಯಗಳನ್ನು ರಕ್ಷಿಸಲು ಪ್ರಮಾಣವಚನ ಸ್ವೀಕರಿಸಿದ ಜನರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಮತ್ತೆ ಮತ್ತೆ ನೋಡಿದ್ದೇವೆ” ಎಂದು ಹೇಳಿದರು.

ಕಳೆದ ವರ್ಷ, ಸದನವು ಮಸೂದೆಯ ಇದೇ ರೀತಿಯ ಆವೃತ್ತಿಯನ್ನು ಅಂಗೀಕರಿಸಿತ್ತು. ಆದರೆ ಅದು ರಿಪಬ್ಲಿಕನ್ ನಿಯಂತ್ರಿತ ಸೆನೆಟ್‌ನಲ್ಲಿ ವಿಫಲವಾಗಿತ್ತು. ರಿಪಬ್ಲಿಕನ್ನರು (ಟ್ರಂಪ್ ಪಕ್ಷದವರು), ’ಈ ಶಾಸನವು ಪೊಲೀಸರು ತಮ್ಮ ಕೆಲಸಗಳನ್ನು ಪರಿಣಾಮಕಾರಿಯಾಗಿ ಮಾಡುವುದನ್ನು ತಡೆಯುತ್ತದೆ ಎಂದು ಹೇಳಿದ್ದರು.

George Floyd Death: ಜಾರ್ಜ್ ಫ್ಲಾಯ್ಡ್ ಶವಪರೀಕ್ಷೆಯಲ್ಲಿ ಕಂಡುಬಂದ ಸ್ಫೋಟಕ ಅಂಶಗಳೇನು.? - Kannada Oneindia

ಈ ವಾರದ ಆರಂಭದಲ್ಲಿ, ಬಿಡೆನ್ ಆಡಳಿತವು ಪ್ರಸ್ತಾವನೆಯ ಪರವಾಗಿ ಮತ ಚಲಾಯಿಸುವಂತೆ ಸದನವನ್ನು ಕೋರುವ ಹೇಳಿಕೆ ಬಿಡುಗಡೆ ಮಾಡಿತ್ತು. “ನಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಸಲು, ಕಾನೂನು ಜಾರಿ ಮಾಡುವವರು ಮತ್ತು ಜನರ ನಡುವೆ ವಿಶ್ವಾಸವನ್ನು ಪುನರ್‌ ನಿರ್ಮಿಸುವ ಮೂಲಕ ನಾವು ಪ್ರಾರಂಭಿಸಬೇಕು” ಎಂದು ಬಿಡೆನ್ ಹೇಳಿಕೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್ ಹತ್ಯೆ ಮಾದರಿಯಲ್ಲೇ ಜೋಧಪುರದಲ್ಲೊಂದು ಅಮಾನವೀಯ ಘಟನೆ; ವಿಡಿಯೋ ವೈರಲ್

“ಅಧಿಕಾರದ ದುರುಪಯೋಗಕ್ಕೆ ನಾವು ಪೊಲೀಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡದಿದ್ದರೆ ಮತ್ತು ಪೊಲೀಸ್ ಇಲಾಖೆಗಳಲ್ಲಿ ವ್ಯವಸ್ಥಿತ ದುಷ್ಕೃತ್ಯ ಮತ್ತು ವ್ಯವಸ್ಥಿತ ವರ್ಣಭೇದ ನೀತಿಯನ್ನು ನಿಭಾಯಿಸದಿದ್ದರೆ ನಾವು ಆ ನಂಬಿಕೆಯನ್ನು ಪುನರ್ನಿರ್ಮಿಸಲು ಸಾಧ್ಯವಿಲ್ಲ’ ಎಂದು ಬಿಡೆನ್ ತಿಳಿಸಿದ್ದರು.

ಅಧ್ಯಕ್ಷ ಬಿಡೆನ್ ಟ್ವಿಟರ್‌ನಲ್ಲಿ ಈ ಶಾಸನದ ಅಂಗೀಕಾರಕ್ಕಾಗಿ ಒತ್ತಾಯಿಸಿದ್ದರು. “ಸೆನೆಟ್ ಪರಿಗಣನೆಯ ನಂತರ, ಮಹತ್ವದ ಪೊಲೀಸ್ ಸುಧಾರಣಾ ಮಸೂದೆ ಕಾನೂನಿಗೆ ಸಹಿ ಹಾಕಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದರು.

ಫ್ಲಾಯ್ಡ್‌ನನ್ನು ಕೊಂದ ಆರೋಪದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ನ ವಿಚಾರಣೆ ಮಾರ್ಚ್ 8 ರಂದು ಮಿನ್ನಿಯಾಪೋಲಿಸ್‌ನಲ್ಲಿ ಪ್ರಾರಂಭವಾಗಲಿದೆ. ಫ್ಲಾಯ್ಡ್‌ನ ಕುತ್ತಿಗೆಗೆ ಮಂಡಿಯೂರಿ ಕೊಂದ ಚೌವಿನ್, ಕೊಲೆ ಮತ್ತು ನರಹತ್ಯೆ ಆರೋಪಗಳನ್ನು ಎದುರಿಸುತಿದ್ದಾರೆ.

ವಿಚಾರಣೆ ನಡೆಯಲಿರುವ ನ್ಯಾಯಾಲಯದ ಸುತ್ತಲೂ ಬ್ಯಾರಿಕೇಡ್‌ಗಳು ಮತ್ತು ಬೇಲಿ ಹಾಕುವುದು ಸೇರಿದಂತೆ ಭಾರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ವಾರ ಮಿನ್ನಿಯಾಪೋಲಿಸ್‌ನಲ್ಲಿ ಸಾವಿರಾರು ಪೊಲೀಸ್ ಅಧಿಕಾರಿಗಳು ಮತ್ತು ನ್ಯಾಷನಲ್ ಗಾರ್ಡ್ ಸಿಬ್ಬಂದಿ ಹಾಜರಾಗಲಿದ್ದಾರೆ. ಫ್ಲಾಯ್ಡ್‌ನ ಹತ್ಯೆಯಲ್ಲಿ ಭಾಗಿಯಾಗಿರುವ ಇತರ ಅಧಿಕಾರಿಗಳನ್ನು ಆಗಸ್ಟ್‌ನಲ್ಲಿ ಪ್ರತ್ಯೇಕ ವಿಚಾರಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ.


ಇದನ್ನೂ ಓದಿ: ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಜೋ ಬೈಡೆನ್ ಉತ್ತಮ ವ್ಯಕ್ತಿ- ಮಾಜಿ ಅಧ್ಯಕ್ಷ ಜಾರ್ಜ್ ಬುಷ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...